ಪುತ್ತೂರು : ಕಾಡಿದ ಅನಾರೋಗ್ಯ ಸಮಸ್ಯೆ – ನೇಣು ಬಿಗಿದು ಯುವಕ ಸಾವಿಗೆ ಶರಣು

Spread the love

ನ್ಯೂಸ್ ಆ್ಯರೋ : ಒಬ್ಬಂಟಿಯಾಗಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ಸಮೀಪದ ಪಂಜಳದಲ್ಲಿ ನಡದಿದೆ.

ವಿಶ್ವನಾಥ್ ಮೃತ ಯುವಕ.

ಮೃತ ವಿಶ್ವನಾಥ್ ಪಂಜಳದ ಬಾಡಿಗೆ ಮನೆಯಲ್ಲಿ ಒಬ್ಬನೇ ವಾಸವಾಗಿದ್ದು, ನೈಲಾನ್ ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆರೋಗ್ಯ ಸಮಸ್ಯೆ ಇದ್ದ ಕಾರಣ ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಶಂಕಿಸಲಾಗಿದೆ.

ಸಂಪ್ಯ ಹೊರಠಾಣಾ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತನ ತಂದೆ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.

Leave a Comment

Leave a Reply

Your email address will not be published. Required fields are marked *