ಸಿಂಹಪ್ರಿಯಾ ಜೋಡಿಯ ಮದುವೆಯ ಡೇಟ್ ಫಿಕ್ಸ್ – ಮೈಸೂರಿನಲ್ಲಿ ನಡೆಯಲಿದೆ ಸ್ಯಾಂಡಲ್ ವುಡ್ ಜೋಡಿಹಕ್ಕಿಗಳ ವಿವಾಹ

ಸಿಂಹಪ್ರಿಯಾ ಜೋಡಿಯ ಮದುವೆಯ ಡೇಟ್ ಫಿಕ್ಸ್ – ಮೈಸೂರಿನಲ್ಲಿ ನಡೆಯಲಿದೆ ಸ್ಯಾಂಡಲ್ ವುಡ್ ಜೋಡಿಹಕ್ಕಿಗಳ ವಿವಾಹ

ನ್ಯೂಸ್ ಆ್ಯರೋ : ಸ್ಯಾಂಡಲ್ ವುಡ್ ನಟ ವಸಿಷ್ಠ ಸಿಂಹ ಹಾಗೂ ನಟಿ ಹರಿಪ್ರಿಯಾ ಇತ್ತೀಚೆಗೆ ನಿಶ್ಚಿತಾರ್ಥ ಮಾಡಿಕೊಂಡಿರುವುದು ಸಿನಿಪ್ರಿಯರಿಗೆ ತಿಳಿದ ವಿಚಾರ. ಈ ಜೋಡಿ ಪ್ರೀತಿಯಲ್ಲಿದ್ದಾರೆ ಎಂದು ಮೊದಲ ಬಾರಿ ತಿಳಿದಾಗ ಎಲ್ಲರೂ ಆಶ್ಚರ್ಯ ವ್ಯಕ್ತಪಡಿಸಿದ್ದರು. ಆದಷ್ಟು ಬೇಗ ಗುಡ್‌ ನ್ಯೂಸ್‌ ಕೊಡಿ ಎಂದು ಸೋಷಿಯಲ್‌ ಮೀಡಿಯಾ ಮೂಲಕ ಬೇಡಿಕೆ ಇಡುತ್ತಿದ್ದರು. ಈ ಜೋಡಿ ಇದೇ ತಿಂಗಳು ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ.

ಹೌದು.. ಸ್ಯಾಂಡಲ್​ವುಡ್​ನ ‘ಸಿಂಹಪ್ರಿಯಾ’ ಜೋಡಿಗೆ ಕಂಕಣ ಭಾಗ್ಯ ಕೂಡಿ ಬಂದಿದ್ದು, ಈ ಸ್ಟಾರ್ ಮದುವೆ ಡೇಟ್ ಹೊರಬಿದ್ದಿದೆ. ಇತ್ತೀಚೆಗಷ್ಟೇ ಸರಳವಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದ ಈ ಜೋಡಿ ಹಕ್ಕಿಗಳು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಹಸೆಮಣೆ ಏರಲು ಸಜ್ಜಾಗಿವೆ.

ಮೈಸೂರು ಸಂಸದ ಪ್ರತಾಪ್​ ಸಿಂಹ ತಮ್ಮ ಟ್ವಿಟರ್​ ಖಾತೆಯಲ್ಲಿ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ಅವರ ಮದುವೆ ದಿನಾಂಕದ ಬಗ್ಗೆ ಮಾಹಿತಿ ನೀಡಿದ್ದಾರೆ. ‘ಖ್ಯಾತ ಚಲನಚಿತ್ರ ನಟರಾದ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ಅವರ ವಿವಾಹ ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಇದೇ ತಿಂಗಳ 26 ರಂದು ನಡೆಯಲಿದೆ’ ಎಂದು ಅವರು ತಿಳಿಸಿದ್ದಾರೆ.

ಇನ್ನೂ ನಿಶ್ಚಿತಾರ್ಥಕ್ಕೂ ಮೊದಲು ‘ಚಿನ್ನ ನಿನ್ನ ತೋಳಿನಲ್ಲಿ ಕಂದ ನಾನು’ ಎಂದು ಹುಲಿ ಕೈಯಲ್ಲಿ ಮಲಗಿರುವ ಮಗುವಿನ ಫೋಟೋ ಹಂಚಿಕೊಂಡು ಹರಿಪ್ರಿಯ, ವಸಿಷ್ಠ ಸಿಂಹ ಅವರನ್ನು ಪ್ರೀತಿಸುತ್ತಿರುವ ಬಗ್ಗೆ ಡಿಸೆಂಬರ್​ 3ರಂದು ವಿಭಿನ್ನವಾಗಿಯೇ ತಿಳಿಸಿದ್ದರು. ಇದಕ್ಕೆ ಪ್ರತಿಕ್ರಿಯೆ ರೀತಿಯಲ್ಲಿ ವಸಿಷ್ಠ ಸಿಂಹ ಅವರು, ‘ಎಂದೂ ನಿನ್ನ ನೆರಳಾಗಿ ಕಾಯುವೆ ನಾನು’ ಎಂದು ಟ್ವೀಟ್ ಮಾಡಿದ್ದರು.

ನಂತರದ ಕೆಲದಿನಗಳಲ್ಲಿ ನಟ ಮತ್ತು ನಟಿ ತಮ್ಮ ಟ್ವಿಟರ್​ ಖಾತೆಯಲ್ಲಿ ನಿಶ್ಚಿತಾರ್ಥದ ಫೋಟೋ ಹಂಚಿಕೊಂಡಿದ್ದರು. ಆದರೆ ಮದುವೆಯ ದಿನಾಂಕ ಬಹಿರಂಗವಾಗಿರಲಿಲ್ಲ. ಅಲ್ಲದೇ ಮದುವೆ ದಿನಾಂಕದ ಬಗ್ಗೆ ಬಹಳಷ್ಟು ಊಹಾಪೋಹಗಳು ಓಡಾಡುತ್ತಿದ್ದವು. ಇದಕ್ಕೀಗ ತೆರೆಬಿದ್ದಿದೆ.

ನಿಶ್ಚಿತಾರ್ಥದ ನಂತರ ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ತಾರಾ ಜೋಡಿ ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಿ ಕನಕ ನವಗ್ರಹ ಕಿಂಡಿ ಮೂಲಕ ದೇವರ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದ್ದರು. ಅಲ್ಲಿ ಮಠಾಧೀಶರಾದ ವಿದ್ಯಾವಲ್ಲಭ ಶ್ರೀಗಳು ಅನುಗ್ರಹ ಮಂತ್ರಾಕ್ಷತೆ ನೀಡಿ ನವ ಜೋಡಿಯನ್ನು ಗೌರವಿಸಿ ಆಶೀರ್ವದಿಸಿದ್ದರು. ಬಳಿಕ ಕೃಷ್ಣ ಮಠದ ರಥಬೀದಿಯಲ್ಲಿರುವ ಕಾಣಿಯೂರು ಮಠಕ್ಕೂ ಭೇಟಿ ಕೊಟ್ಟಿದ್ದರು.

ಸದ್ಯದಲ್ಲಿಯೇ ಹಸೆಮಣೆ ಏರಲಿರುವ ಸಿಂಹ ರೌಡಿಸಂ ಕಥಾಹಂದರದೊಂದಿಗೆ ರೊಮ್ಯಾಂಟಿಕ್​ ಲವ್​ ಸ್ಟೋರಿ ಇರುವ ಕನ್ನಡದ ಕಮರ್ಶಿಯಲ್​ ಚಿತ್ರ ಲವ್​ ಲಿಯಲ್ಲಿ ನಾಯಕ ನಟನಾಗಿ ಅಭಿನಯಿಸುತ್ತಿದ್ದಾರೆ. ಚಿತ್ರೀಕರಣ ಶೇ 80 ರಷ್ಟು ಮುಗಿದಿದ್ದು, ಚಿತ್ರತಂಡ ಲಂಡನ್​ನಲ್ಲೂ ಶೂಟಿಂಗ್​ ನಡೆಸಲು ಸಿದ್ಧವಾಗಿದೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *