ಕೆಜಿಎಪ್-2 ಸಿನಿಮಾ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ನಟ‌ ಕಿಶೋರ್. ವಿವಾದದ ಸುಳಿಯಲ್ಲಿ ಪ್ರತಿಭಾವಂತ ನಟ.

ಕೆಜಿಎಪ್-2 ಸಿನಿಮಾ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ನಟ‌ ಕಿಶೋರ್. ವಿವಾದದ ಸುಳಿಯಲ್ಲಿ ಪ್ರತಿಭಾವಂತ ನಟ.

ನ್ಯೂಸ್ ಆ್ಯರೋ: ಕನ್ನಡಿಗ ಬಹುಭಾಷಾ ನಟ, ‘ಹುಲಿ’ ಸಿನಿಮಾ‌ ಖ್ಯಾತಿಯ ಪ್ರತಿಭಾನ್ವಿತ ಕಲಾವಿದ ಕಿಶೋರ್ ಸದ್ಯ ದಿನಕ್ಕೊಂದು ವಿವಾದಾತ್ಮಕ ಹೇಳಿಕೆಯ ಮೂಲಕ ಸುದ್ದಿಯಲ್ಲಿದ್ದಾರೆ.

ಇತ್ತೀಚೆಗೆ ಕರಾವಳಿ ಭಾಗದ ದೈವಾಚರಣೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಒಂದನ್ನು ಹರಿಬಿಟ್ಟಿದ್ದ ಅವರು ನಂಬಿಕೆ ಮತ್ತು ಮೂಡನಂಬಿಕೆಯ ಬಗ್ಗೆ ಚರ್ಚಿಸಿದ್ದರು. ಇದೀಗ ಮತ್ತೆ ಭಾರತೀಯ ಸಿನಿಮಾ ರಂಗದಲ್ಲಿ ದಾಖಲೆಯ ಮೈಲಿಗಲ್ಲು ಸ್ಥಾಪಿಸಿದ ಕೆಜಿಎಪ್-2 ಸಿನಿಮಾದ ಬಗ್ಗೆ ಮಾತನಾಡಿ ವಿವಾದಕ್ಕೀಡಾಗಿದ್ದಾರೆ.

ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಪ್ 2 ಸಿನಿಮಾದ ಬಗ್ಗೆ ಮಾತನಾಡಿರುವ ಕಿಶೋರ್ ‘ಕೆಜಿಎಪ್-2 ಸಿನಿಮಾವನ್ನ ನಾನು ನೋಡಿಲ್ಲ. ನೋಡುವ ಆಸಕ್ತಿಯು ನನಗಿಲ್ಲ. ನಾನು ಇಷ್ಟ ಪಡುವ ಚಿತ್ರಗಳೆ ಬೇರೆ. ಕೆಜಿಎಪ್ ನನ್ನ ಅಭಿರುಚಿಯ ಸಿನಿಮಾ ಅಲ್ಲ’ ಎನ್ನುವ ಮೂಲಕ ಯಶ್ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಕಿಶೋರ್ ಹೇಳಿಕೆಯಿಂದ ಗರಂ ಆಗಿರುವ ಯಶ್ ಫ್ಯಾನ್ಸ್ ‘ಹಾಗಿದ್ದರೆ ಕಿಶೋರ್ ಎಂತಹಾ ಸಿನಿಮಾಗಳನ್ನು ಇಷ್ಟಪಡುತ್ತಾರೆ ಅನ್ನುವ ಲಿಸ್ಟ್ ಕೊಡಲಿ. ಕಿಶೋರ್ ನಟಿಸಿರುವ ಸಿನಿಮಾಗಳೆಲ್ಲ ಅವರ ಅಭಿರುಚಿಗೆ ತಕ್ಕಂತೆ ಇದೆಯೇ ಎಂದು ತಿರುಗೇಟು ನೀಡಿದ್ದಾರೆ.

ಇತ್ತೀಚೆಗೆ ಕಿಶೋರ್ ಕಾಂತಾರ ಸಿನಿಮಾ ಬಿಡುಗಡೆಯ ನಂತರ ದೈವಾಚರಣೆಯ ಬಗ್ಗೆ ಪೋಸ್ಟ್ ಮಾಡಿ ನಂಬಿಕೆ ಮತ್ತು ಮೂಡನಂಬಿಕೆಗಳ ಬಗ್ಗೆ ಮಾತನಾಡಿದ್ದರು. ಇದು ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಹಲವಾರ ಮಂದಿ ಕಿಶೋರ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು. ಅದೇ ಸಮಯಕ್ಕೆ ಅವರ ಟ್ವಿಟ್ಟರ್ ಖಾತೆಯೂ ಕೂಡ ಡಿಲಿಟ್ ಆಗಿ ಚಿತ್ರರಂಗ ಮತ್ತು ಸಾಮಾಜಿಕ ಜಾಲದ ಸುತ್ತ ಅನುಮಾನದ ಹುತ್ತ ಬೆಳೆದು ನಿಂತಿತ್ತು.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *