ಕೆಲವರಿಗೆ ನನ್ನ ಕೈ ಸನ್ನೆ ಇಷ್ಟವಾಗಿಲ್ಲ – ವಿವಾದದ ಬಗ್ಗೆ ತುಟಿ ಬಿಚ್ಚಿದ ಕಿರಿಕ್ ಹುಡುಗಿ ರಶ್ಮಿಕಾ ಮಂದಣ್ಣ

ಕೆಲವರಿಗೆ ನನ್ನ ಕೈ ಸನ್ನೆ ಇಷ್ಟವಾಗಿಲ್ಲ – ವಿವಾದದ ಬಗ್ಗೆ ತುಟಿ ಬಿಚ್ಚಿದ ಕಿರಿಕ್ ಹುಡುಗಿ ರಶ್ಮಿಕಾ ಮಂದಣ್ಣ

ನ್ಯೂಸ್ ಆ್ಯರೋ : ರಿಷಬ್ ಶೆಟ್ಟಿ ನಿರ್ದೇಶನದ ಸ್ಯಾಂಡಲ್ ವುಡ್ ನ ಕಿರಿಕ್ ಪಾರ್ಟಿ ಸಿನಿಮಾದ ಮೂಲಕ ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟ ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರ ಬದುಕಿನಲ್ಲಿ ಮುಂದೆ ನಡೆದದ್ದೆಲ್ಲ ಇತಿಹಾಸ. ಕಿರಿಕ್ ಪಾರ್ಟಿ ಸಿನಿಮಾದ ಸಾನ್ವಿ ಪಾತ್ರದ ಮೂಲಕ ನ್ಯಾಷನಲ್ ಕ್ರಶ್ ಎಂದು ಕರೆಸಿಕೊಂಡಿದ್ದ ಮಂದಣ್ಣ ಸದ್ಯ ಇಡೀ ಭಾರತೀಯ ಚಿತ್ರರಂಗದ ಬಹು ಬೇಡಿಕೆಯ ಬಹುಭಾಷಾ ನಟಿ. ಆದರೆ ಈ ನಡುವೆ ಆರಂಭದಿಂದಲೂ ಹಲವಾರು ಹೇಳಿಕೆಗಳಿಂದ ನಿರಂತರ ವಿವಾದಗಳನ್ನು ತಮ್ಮ ಮೇಲೆ ಎಳೆದುಕೊಳ್ಳುತ್ತಲೇ ಇದ್ದಾರೆ.

ಇತ್ತೀಚೆಗೆ ಸಂದರ್ಶನವೊಂದರಲ್ಲಿ ಕನ್ನಡದ ಪ್ರತಿಷ್ಠಿತ ಸಿನಿಮಾ ನಿರ್ಮಾಣ ಸಂಸ್ಥೆಯ ಬಗ್ಗೆ ಕೈ ಸನ್ನೆಯ ಮೂಲಕ ವಿವಾದಾತ್ಮವಾಗಿ ಮಾತನಾಡಿದ್ದ ರಶ್ಮಿಕಾ ಹಲವರ ಕೆಂಗಣ್ಣಿಗೆ ಗುರಿಯಾಗಿದ್ದರು. ಸಾಕಷ್ಟು ಟ್ರೋಲ್ ಗೆ ಒಳಗಾಗಿದ್ದರು. ಸದ್ಯ ಈ ವಿಚಾರದಲ್ಲಿ ರಶ್ಮಿಕಾ ಮೌನ ಮುರಿದು ಮಾತನಾಡಿದ್ದು, ‘ಕೆಲವರಿಗೆ ನನ್ನ ಕೈ ಸನ್ನೆ ಇಷ್ಟವಾಗಿಲ್ಲ’ ಎಂದಿದ್ದಾರೆ.

ಇತ್ತೀಚೆಗೆ ರಶ್ಮಿಕಾ ಮಂದಣ್ಣ ವಿಚಾರದಲ್ಲಿ ನಟ ಕಿಚ್ಚ ಸುದೀಪ್ ಕೂಡ ಪ್ರತಿಕ್ರಿಯಿಸಿದ್ದು ‘ಸೆಲೆಬ್ರಿಟಿ ಅಂದರೆ ಹಾಗೆಯೇ.. ಹೂಮಾಲೆ, ಮೊಟ್ಟೆ, ಟೊಮ್ಯಾಟೊ, ಕಲ್ಲು ಎಲ್ಲವೂ ಬರುತ್ತದೆ. ಹ್ಯಾಂಡಲ್ ಮಾಡೋದನ್ನು ಕಲಿಬೇಕು ಎಂದಿದ್ದರು. ಆದರೆ ಎಷ್ಟೇ ಟ್ರೋಲ್ ಆದರೂ ರಶ್ಮಿಕಾ ತಮ್ಮ ಪಾಡಿಗೆ ತಾವು ಎಂಬಂತೆ ನಟನೆಯಲ್ಲಿ ಬ್ಯುಸಿ ಆಗಿದ್ದರು.

ಆದರೆ ಇದೀಗ ರಶ್ಮಿಕಾ ಮಂದಣ್ಣ ತನ್ನ ವಿರುದ್ಧ ಕೇಳಿ ಬರುತ್ತಿರುವ ಟೀಕೆಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಬಾಲಿವುಡ್ ನಲ್ಲಿ ತಾವು ನೀಡಿದ ಸಂದರ್ಶನವೊಂದರಲ್ಲಿ ಮಾತನಾಡಿ ‘ಕಲಾವಿದರಾಗಿ ಜನ ನಮ್ಮನ್ನು ಮಾತ್ರ ಇಷ್ಟಪಡಬೇಕೆಂದು ಅಂದುಕೊಳ್ಳುವುದು ತಪ್ಪು ಎಂಬುದು ನನಗೀಗ ಅರಿವಾಗಿದೆ‌. ದ್ವೇಷ, ಪ್ರೀತಿಯೊಂದಿಗೆ ಜನರು ನಮ್ಮನ್ನು ಗಮನಿಸುತ್ತಲೇ ಇರುತ್ತಾರೆ.

ಸೆಲೆಬ್ರಿಟಿ ಅಂದರೆ ಸಾರ್ವಜನಿಕ ವ್ಯಕ್ತಿಗಳಿದ್ದಂತೆ ಎಂದ ಅವರು, ನಾನು ಮಾತನಾಡಿದ ಶೈಲಿ ಅಥವಾ ನನ್ನ ಕೈ ಸನ್ನೆಗಳಿಂದ ಕೆಲವರಿಗೆ ಇಷ್ಟವಾಗಿರಲಿಕ್ಕಿಲ್ಲ. ನಾನು ತುಂಬಾ ಎಕ್ಸ್‌ಪ್ರೆಸಿಟಿವ್ ಆಗಿರುವುದನ್ನ ಜನ ಇಷ್ಟಪಡುತ್ತಿಲ್ಲ. ಜನ ನನ್ನನ್ನು ಟ್ರೋಲ್ ಮಾಡುವುದಕ್ಕೆ, ನನ್ನನ್ನು ಇಷ್ಟ ಪಡದಿರುವುದಕ್ಕೆ ಇವೆಲ್ಲವೂ ಕಾರಣವಾಗಿರಬಹುದು. ಆದರೆ ತುಂಬಾ ಪ್ರೀತಿ ಇದೆ. ಜನರ ಪ್ರೀತಿಗೆ ಕೃತಜ್ಞಳಾಗಿದ್ದೆನೆ ಎಂದರು.

ಸದ್ಯ ಟ್ರೋಲ್ ಗಳ ನಡುವೆಯೂ ರಶ್ಮಿಕಾ ಗಡಿಯಾಚೆಗೂ ಹಲವಾರು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಹಿಂದಿಯ ಮಿಷನ್ ಮಜ್ನು ಸಿನಿಮಾದ ತೊಡಗಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ನಾಯಕನಾಗಿ ಸಿದ್ಧಾರ್ಥ್ ಮಲ್ಹೋತ್ರಾ ಕಾಣಿಸಿಕೊಂಡಿದ್ದಾರೆ. ಒಟಿಟಿಯಲ್ಲಿ ಸಿನಿಮಾ ರಿಲೀಸ್ ಆಗುತ್ತಿದೆ. ಇನ್ನು ಮತ್ತೊಂದು ಹಿಂದಿ ಸಿನಿಮಾ ಅನಿಮಲ್ ಕೂಡ ಮುಗಿಸಿದ್ದಾರೆ. ರಣಬೀರ್ ಕಪೂರ್ ಜೊತೆ ನಟಿಸಿದ್ದಾರೆ. ಇನ್ನು ದಕ್ಷಿಣದಲ್ಲಿ ತಮಿಳಿನಲ್ಲಿ ದಳಪತಿ ವಿಜಯ್ ಜೊತೆ ವಾರಿಸು ಮತ್ತು ತೆಲುಗಿನಲ್ಲಿ ಪುಷ್ಪ-2 ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *