ಇಂದು ರಾತ್ರಿ 10 ಗಂಟೆಗೆ ಕೊನೆಯಾಗಲಿದೆ ಅಯ್ಯಪ್ಪ ಸ್ವಾಮಿಯ ದರ್ಶನ – ನಾಳೆ ಬೆಳಿಗ್ಗೆಯಿಂದ ಭಕ್ತರಿಗೆ ಅಯ್ಯಪ್ಪನ ದರ್ಶನ ಭಾಗ್ಯವಿಲ್ಲ..!!

ಇಂದು ರಾತ್ರಿ 10 ಗಂಟೆಗೆ ಕೊನೆಯಾಗಲಿದೆ ಅಯ್ಯಪ್ಪ ಸ್ವಾಮಿಯ ದರ್ಶನ – ನಾಳೆ ಬೆಳಿಗ್ಗೆಯಿಂದ ಭಕ್ತರಿಗೆ ಅಯ್ಯಪ್ಪನ ದರ್ಶನ ಭಾಗ್ಯವಿಲ್ಲ..!!

ನ್ಯೂಸ್ ಆ್ಯರೋ : ಇಂದು ರಾತ್ರಿ 10 ಗಂಟೆಗೆ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದಲ್ಲಿ ಮಾಲಾಧಾರಿಗಳಿಗೆ ಅಯ್ಯಪ್ಪ ದರ್ಶನ ಕೊನೆಗೊಳ್ಳಲಿದೆ‌. 41 ದಿನಗಳ ಕಠಿಣ ವೃತದೊಂದಿಗಿನ ಯಾತ್ರಾ ಅವಧಿ ನಾಳೆಗೆ ಕೊನೆಯಾಗಲಿದೆ. ಹೀಗಿದ್ದರೂ ಈ ಅವಧಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಶಬರಿ ಮಲೆಗೆ ಆಗಮಿಸುವ ಭಕ್ತರು ಮಣಿಕಂಠನ ದರ್ಶನ ಪಡೆಯುತ್ತಿದ್ದಾರೆ.

ಪದ್ದತಿಯಂತೆ, ಇಂದು ರಾತ್ರಿ ಸುಮಾರು 10 ಗಂಟೆಗೆ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದಲ್ಲಿ ಮಾಲಾಧಾರಿಗಳಿಗೆ ಅಯ್ಯಪ್ಪ ಸ್ವಾಮಿ ದರ್ಶನ ಕೊನೆಗೊಳ್ಳಲಿದೆ. ಬಳಿಕ “ಗುರುತಿ” ಹೆಸರಿನ ವಿಧಿವಿಧಾನ ನಡೆಸಿ, ಜನವರಿ 20ರ ಬೆಳಗ್ಗೆ 6 ಗಂಟೆಗೆ ದೇಗುಲಕ್ಕೆ ಬಾಗಿಲು ಹಾಕಲಾಗುತ್ತದೆ. ನಾಳೆ ಬೆಳಗ್ಗೆ ಭಕ್ತರಿಗೆ ದೇಗುಲ ಪ್ರವೇಶಿಸಿ ಅಯ್ಯಪ್ಪ ಸ್ವಾಮಿಯ ದರ್ಶನಕ್ಕೆ ಅವಕಾಶ ನೀಡಲಾಗುವುದಿಲ್ಲ ಎನ್ನಲಾಗಿದೆ.

ಈ ಬಾರಿ ಶಬರಿಮಲೆಗೆ ದಾಖಲೆ ಪ್ರಮಾಣದಲ್ಲಿ ಮಾಲಾಧಾರಿಗಳು ಆಗಮಿಸಿದ್ದಾರೆ. ಜೊತೆಗೆ ಈ ಬಾರಿ ದೇಗುಲದ ವಾರ್ಷಿಕ ಆದಾಯವೂ ಹೆಚ್ಚಾಗಿತ್ತು. ಕಳೆದ ವಾರಕ್ಕೆ ಹೋಲಿಸಿದರೆ, ಈ ವಾರ ಹೆಚ್ಚಿನ ಸಂಖ್ಯೆಯಲ್ಲಿ ಅಯ್ಯಪ್ಪ ಮಾಲಾಧಾರಿಗಳ ಆಗಮನವಾಗಿತ್ತು. ಸದ್ಯ, ಕರ್ನಾಟಕ, ಕೇರಳ, ತಮಿಳುನಾಡು, ಆಂದ್ರ ಪ್ರದೇಶದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಅಯ್ಯಪ್ಪ ಸ್ವಾಮಿಯ ದರ್ಶನ ಪಡೆಯುತ್ತಿದ್ದಾರೆ.

ಸುಮಾರು 45 ಲಕ್ಷ ಭಕ್ತರು ಈ ಬಾರಿ ಅಯ್ಯಪ್ಪ ಸ್ವಾಮಿ ದರ್ಶನ ಪಡೆದಿದ್ದು ಒಟ್ಟು, 312.40 ಕೋಟಿ ರೂ. ಆದಾಯ ಸಂಗ್ರಹವಾಗಿದೆ ಎಂದು ಟ್ರಾವಂಕೂರು ದೇವಸ್ವಂ ಬೋರ್ಡ್‌ ಮಾಹಿತಿ ನೀಡಿದೆ. ಕಳೆದೆರಡು ವರ್ಷಗಳಿಂದ ಕೊರೊನಾ ಸಾಂಕ್ರಾಮಿಕದಿಂದಾಗಿ ಸಾಕಷ್ಟು ಜನರಿಗೆ ಶಬರಿಮಲೆ ಯಾತ್ರೆ ಕೈಗೊಳ್ಳಲು ಆಗಿರಲಿಲ್ಲ. ಆದರೆ, ಈ ವರ್ಷ ಅತ್ಯಧಿಕ ಸಂಖ್ಯೆಯಲ್ಲಿ ಭಕ್ತರು ಶಬರಿಮಲೆಗೆ ಯಾತ್ರೆ ಕೈಗೊಂಡಿದ್ದಾರೆ. ಕೇವಲ 39 ದಿನಗಳಲ್ಲಿ ಬರೋಬ್ಬರಿ 224 ಕೋಟಿ ರೂ. ಆದಾಯ ಹರಿದು ಬಂದಿದೆ ಎನ್ನಲಾಗಿದೆ‌.

ಈ ಬಾರಿ 20% ಮಕ್ಕಳ ಆಗಮನವಾಗಿತ್ತು. ಈ ಬಾರಿ ಅತ್ಯಧಿಕ ಸಂಖ್ಯೆಯಲ್ಲಿ ಮಹಿಳೆಯರು ಹಾಗೂ ಮಕ್ಕಳು ಶಬರಿಮಲೆ ಯಾತ್ರೆ ಕೈಗೊಂಡಿದ್ದರು. ಅವರಿಗಾಗಿ ಪ್ರತ್ಯೇಕ ಸಾಲುಗಳ ವ್ಯವಸ್ಥೆ ಮಾಡಲಾಗಿತ್ತು. ಒಟ್ಟಾರೆಯಾಗಿ ಈ ಬಾರಿ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಅಯ್ತಪ್ಪ ಭಕ್ತರು ಶಬರಿ ಮಲೆಗೆ ದೇಶದ ನಾನಾ ಮೂಲೆಗಳಿಂದ ಹರಿದು ಬಂದಿದ್ದರು.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *