ಮಹಾ ಕುಂಭಮೇಳದಲ್ಲಿ ಯೂಟ್ಯೂಬರ್ ನನ್ನು ಹೊಡೆದೋಡಿಸಿದ ಸಾಧು; ಕಾರಣವೇನು ಗೊತ್ತೇ? ವಿಡಿಯೋ ನೋಡಿ

ನ್ಯೂಸ್ ಆ್ಯರೋ: ಮಹಾ ಕುಂಭಮೇಳಕ್ಕೆ ಜನವರಿ 13 ರ ಕಳೆದ ದಿನ ಅದ್ದೂರಿ ಚಾಲನೆ ಸಿಕ್ಕಿದೆ. ಉತ್ತರ ಪ್ರದೇಶದ ಪ್ರಯಾಗ್ ರಾಜ್ನಲ್ಲಿ ನಡೆಯುತ್ತಿರುವ ಈ ಅಪರೂಪದ ಮಹಾ ಕುಂಭಮೇಳಕ್ಕೆ ಭಕ್ತ ಸಾಗರವೇ ಹರಿದು ಬರುತ್ತಿದೆ. “ಹಿಂದೆ ನಡೆದಿದ್ದ ಪೂರ್ಣ ಮಹಾಕುಂಭ ಮೇಳದ ಸಮಯದಲ್ಲಿ ಈಗಿನ ಯಾರೂ ಬದುಕಿರಲಿಲ್ಲ. ಮುಂದೆ ನಡೆಯುವ ಮಹಾ ಕುಂಭಮೇಳದ ಸಮಯಕ್ಕೆ ಸಹ ನಾವ್ಯಾರೂ ಬದುಕಿರುವುದಿಲ್ಲ”.144 ವರ್ಷಗಳ ನಂತರ ನಡೆಯುತ್ತಿರುವ ಐತಿಹಾಸ ಪ್ರಸಿದ್ಧ ಮಹಾ ಕುಂಭಮೇಳಕ್ಕೆ ಲಕ್ಷಾಂತರ ಸಂಖ್ಯೆಯ ನಾಗ ಸಾಧುಗಳು, ಸಾಧು ಸಂತರುಗಳು ಕೂಡಾ ಆಗಮಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಈಗಂತೂ ಮಹಾ ಕುಂಭಮೇಳಕ್ಕೆ ಸಂಬಂಧಿಸಿದ ವಿಡಿಯೋಗಳೇ ಹರಿದಾಡುತ್ತಿದೆ. ಅದೇ ರೀತಿ ಇಲ್ಲೊಂದು ಮಹಾಕುಂಭಕ್ಕೆ ಸಂಬಂಧಿಸಿದ ದೃಶ್ಯವೊಂದು ವೈರಲ್ ಆಗುತ್ತಿದ್ದು, ನಾಗಾ ಸಾಧುವೊಬ್ಬರು ಯೂಟ್ಯೂಬರನ್ನು ಹೊಡೆದೋಡಿಸಿದ್ದಾರೆ. ಹೌದು ಆತನ ಅಸಂಬದ್ಧ ಪ್ರಶ್ನೆಗಳಿಂದ ಸಿಟ್ಟಿಗೆದ್ದ ಸಾಧು ಆತನನ್ನು ಹೊಡೆದೋಡಿಸಿದ್ದಾರೆ.
ಪ್ರಯಾಗ್ ರಾಜ್ನ ಮಹಾ ಕುಂಭಮೇಳದಲ್ಲಿ ಧ್ಯಾನ ಮಾಡುತ್ತಾ ಕುಳಿತಿದ್ದ ನಾಗ ಸಾಧು ಬಳಿ ಬಂದ ಯುಟ್ಯೂಬರ್ ಒಬ್ಬ ಮೈಕ್ ಹಿಡಿದು ಕೆಲವೊಂದು ಪ್ರಶ್ನೆಗಳನ್ನು ಕೇಳುತ್ತಾನೆ. ಮೊದಲಿಗೆ ಶಾಂತವಾಗಿಯೇ ಆತನ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ನಂತರ ಆತನ ಅಸಂಬದ್ಧ ಪ್ರಶ್ನೆಗಳಿಗೆ ಉತ್ತರಿಸಲಾಗದೆ, ಆತನನ್ನು ಅಲ್ಲಿಂದ ಹೊಡೆದೋಡಿಸಿದ್ದಾರೆ.
ಸುರೇಶ್ ಸಿಂಗ್ (sureshsinghj) ಎಂಬವರು ಈ ಕುರಿತ ವಿಡಿಯೋವನ್ನು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡು “ಮಹಾ ಕುಂಭಮೇಳವನ್ನು ಕವರ್ ಮಾಡಲು ಬರುವ ಯೂಟ್ಯೂಬರ್ಗಳು ಹೆಚ್ಚಿನ ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ; ನಿಮ್ಮ ಚಾನೆಲ್ನ ರೀಚ್ ಹೆಚ್ಚಿಸಲು ಅನುಪಯುಕ್ತ ಪ್ರಶ್ನೆಗಳನ್ನು ಕೇಳದಿರಿ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ.
ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಮೈಕ್ ಹಿಡಿದು ಬಂದಂತಹ ಯುಟ್ಯೂಬರ್ ಬಬ್ಬ ನಾಗ ಸಾಧು ಒಬ್ಬರ ಬಳಿ ಬಾಬಾ ನೀವು ಯಾವಾಗ ಸನ್ಯಾಸಿ ಪಂಥವನ್ನು ಸೇರಿದಿರಿ ಎಂಬ ಪ್ರಶ್ನೆಯನ್ನು ಕೇಳುವ ದೃಶ್ಯವನ್ನು ಕಾಣಬಹುದು. ಈ ಪ್ರಶ್ನೆಗೆ ಶಾಂತ ರೀತಿಯಲ್ಲೇ ಉತ್ತರಿಸಿದ ಸಾಧು, ನಂತರ ಯುಟ್ಯೂಬರ್ನ ಅಧಿಕ ಪ್ರಸಂಗ ಪ್ರಶ್ನೆಗಳಿಗೆ ಬೇಸತ್ತು, ಆತನನ್ನು ಅಲ್ಲಿಂದ ಹೊಡೆದೋಡಿಸಿದ್ದಾರೆ.
Leave a Comment