ಕಥೆ ಹುಡುಕುತ್ತಾ ಕರಾವಳಿಯಲ್ಲಿ ಬೀಡುಬಿಟ್ಟ ರಿಷಬ್ ಶೆಟ್ಟಿ ತಂಡ – ಕಾಂತಾರ 2 ಜೂನ್‌ಗೆ ಚಿತ್ರೀಕರಣ ಶುರು, 2024ರ ಏಪ್ರಿಲ್‌ನಲ್ಲಿ ಚಿತ್ರ ತೆರೆಗೆ

ಕಥೆ ಹುಡುಕುತ್ತಾ ಕರಾವಳಿಯಲ್ಲಿ ಬೀಡುಬಿಟ್ಟ ರಿಷಬ್ ಶೆಟ್ಟಿ ತಂಡ – ಕಾಂತಾರ 2 ಜೂನ್‌ಗೆ ಚಿತ್ರೀಕರಣ ಶುರು, 2024ರ ಏಪ್ರಿಲ್‌ನಲ್ಲಿ ಚಿತ್ರ ತೆರೆಗೆ

ನ್ಯೂಸ್ ಆ್ಯರೋ : ಕಾಂತಾರ ಚಿತ್ರದ ಯಶಸ್ವಿನ ಬಳಿಕ ಇಡೀ ವಿಶ್ವಕ್ಕೆ ಕಾಡಿದ ಪ್ರಶ್ನೆಯೆಂದರೆ ಕಾಂತಾರ 2 ಸಿನಿಮಾ ಬರಲಿದೆಯೇ ಎಂದು. ಇದೀಗ ನಿರ್ಮಾಪಕ ವಿಜಯ್ ಕಿರಗಂದೂರು ಅವರು ಸ್ಪಷ್ಟನೆ ನೀಡಿದ್ದು, ಈಗಾಗಲೇ ಚಿತ್ರಕಥೆ ಬಗ್ಗೆ ಚರ್ಚೆ ನಡೆದು ಒಂದು ಹಂತಕ್ಕೆ ಬಂದಿದೆ ಎಂದು ಖುಷಿಯ ವಿಷಯವನ್ನು ಹಂಚಿಕೊಂಡಿದ್ದಾರೆ.

ಸಂದರ್ಶನವೊಂದರಲ್ಲಿ ಭಾಗವಹಿಸಿದ ವಿಜಯ್ ಕಿರಗಂದೂರು ಅವರು, ಕಾಂತಾರ 2 ಬಗ್ಗೆ ಮಾತನಾಡಿದ್ದಾರೆ. ಈಗಾಗಲೇ ರಿಷಬ್ ಶೆಟ್ಟಿ ಅವರು ಕಥೆಗಾಗಿ ಕರಾವಳಿ ಕಡೆ ಪ್ರಯಾಣ ಬೆಳೆಸಿದ್ದಾರೆ. ಇನ್ನೂ ಚಿತ್ರದ ಬಹುಭಾಗ ಮಳೆಗಾಲದಲ್ಲಿ ನಡೆಯುವ ಕಾರಣ, ಜೂನ್​ನಲ್ಲಿ ಕಾಂತಾರ 2 ಚಿತ್ರದ ಚಿತ್ರೀಕರಣ ಪ್ರಾರಂಭಿಸುವ ಸಾಧ್ಯತೆಯಿದೆ. ಮುಂದಿನ ವರ್ಷ ಏಪ್ರಿಲ್ ಅಥವಾ ಮೇ ತಿಂಗಳಿನಲ್ಲಿ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸಿನಿಮಾ ಬಿಡುಗಡೆ ಮಾಡುವ ಆಲೋಚನೆಯಿದೆ ಎಂದು ಹೇಳಿಕೊಂಡಿದ್ದಾರೆ.

ಕಾಂತಾರ ಚಿತ್ರದ ಹಿಂದಿನ ಕಥೆಯನ್ನು ಕಾಂತಾರ 2 ಹೇಳಲಿದ್ದು, ಪಂಜುರ್ಲಿ ಗುಳಿಗ ದೈವಗಳ ಹಿನ್ನೆಲೆಯನ್ನು ಹೇಳುವ ಪ್ರಯತ್ನ ಚಿತ್ರತಂಡ ಮಾಡಲಿದೆ.

ಕಾಂತಾರ 2 ದೊಡ್ಡ ಬಜೆಟ್​ನಲ್ಲಿ ಬಿಡುಗಡೆ ಮಾಡಲು ಯೋಚಿಸಲಾಗಿದೆ. ‘ಕಾಂತಾರ’ ಎಷ್ಟರ ಮಟ್ಟಿಗೆ ಸಕ್ಸಸ್ ಆಗಿತ್ತೆಂದರೆ, ಅದರ ಮುಂದಿನ ಭಾಗದ ಬಗ್ಗೆ ಪ್ರೇಕ್ಷಕರಲ್ಲಿ ನಿರೀಕ್ಷೆ ಹೆಚ್ಚಿದೆ.ಕೆಲವು ಹೊಸ ಪಾತ್ರಗಳು ಚಿತ್ರತಂಡ ಸೇರಿಕೊಳ್ಳಲಿವೆ. ಆದರೆ, ಕಥಾವಸ್ತು ಮತ್ತು ಶೈಲಿ ಮೊದಲ ಚಿತ್ರದಂತೆಯೇ ಇರಲಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *