ಬೆಂಗಳೂರಿನಲ್ಲಿ ದುಡ್ಡಿನ ಸುರಿಮಳೆ ಸುರಿಸಿದ ವ್ಯಕ್ತಿ ಖಾಕಿ ಬಲೆಗೆ – ನೋಟಿಸ್‌ಗೆ ಉತ್ತರಿಸದಿದ್ದಕ್ಕೆ ವಶಕ್ಕೆ ಪಡೆದ ಪೊಲೀಸರು

ಬೆಂಗಳೂರಿನಲ್ಲಿ ದುಡ್ಡಿನ ಸುರಿಮಳೆ ಸುರಿಸಿದ ವ್ಯಕ್ತಿ ಖಾಕಿ ಬಲೆಗೆ – ನೋಟಿಸ್‌ಗೆ ಉತ್ತರಿಸದಿದ್ದಕ್ಕೆ ವಶಕ್ಕೆ ಪಡೆದ ಪೊಲೀಸರು

ನ್ಯೂಸ್ ಆ್ಯರೋ : ಬೆಂಗಳೂರಿನಲ್ಲಿ ಮಂಗಳವಾರ ಬೆಳಗ್ಗೆ ಕೆಆರ್‌ ಮಾರುಕಟ್ಟೆ ಫ್ಲೈಒವರ್‌ನಿಂದ ಹಣ ಎಸೆದ ವ್ಯಕ್ತಿಯನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಿಸುತ್ತಿದ್ದಾರೆ.

ನೋಟು ಎಸೆದ ವ್ಯಕ್ತಿಯನ್ನು ಅರುಣ್‌ ಎಂದು ಗುರುತಿಸಲಾಗಿದ್ದು, ಆತ ಇವೆಂಟ್‌ ಮ್ಯಾನೇಜರ್‌ ಎಂದು ತಿಳಿದು ಬಂದಿದೆ.

ಮಂಗಳವಾರ ಈತ ಫ್ಲೈ ಓವರ್‌ನಿಂದ ಹತ್ತು ರೂಪಾಯಿ ನೋಟುಗಳನ್ನು ಎಸೆದಿದ್ದನು. ಇದರಿಂದ ಜನರು ಆಶ್ಚರ್ಯಚಕಿತರಾದರೆ ಮತ್ತೆ ಕೆಲವರು ಹಣವನ್ನು ಆಯ್ದುಕೊಳ್ಳಲು ಮುಂದಾಗಿದ್ದರು. ಸದ್ಯ ಈ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರಿನ ಕೆಆರ್‌ ಮಾರುಕಟ್ಟೆಗೆ ಹೋಂಡಾ ಆಕ್ಟಿವಾ ಸ್ಕೂಟರ್‌ನಲ್ಲಿ ಬಂದಿದ್ದ ಸೂಟು ಧರಿಸಿದ್ದ ವ್ಯಕ್ತಿ ಚೀಲದಲ್ಲಿ ತುಂಬಿದ್ದ ಹಣವನ್ನು ಕೆಳಗೆ ಬೀಸಾಕಿದ್ದಾನೆ. ಅದಲ್ಲದೆ ಕುತ್ತಿಗೆಗೆ ಗಡಿಯಾರವನ್ನು ನೇತು ಹಾಕಿಕೊಂಡಿದ್ದ. ಹಣವನ್ನು ಬಿಸಾಕುತ್ತಿರುವ ದೃಶ್ಯವನ್ನು ಅಲ್ಲೇ ಇದ್ದ ವ್ಯಕ್ತಿ ವಿಡಿಯೋ ಮಾಡಿದ್ದಾನೆ. ಅದಲ್ಲದೆ ಈ ವಿಡಿಯೋ ಭಾರೀ ವೈರಲ್‌ ಆಗಿತ್ತು. ‌‌ಈ ಘಟನೆಯಿಂದ ಕೆಲಕಾಲ ಕೆಆರ್‌ ಮಾರುಕಟ್ಟೆ ಬಳಿ ಕೆಲವು ಹೊತ್ತು ಟ್ರಾಫಿಕ್‌ ಜಾಂ ಕೂಡ ಆಗಿತ್ತು.

ಕಾರಣ ನೀಡುವಂತೆ ನೋಟಿಸ್‌:

ಈತನ ವಿರುದ್ಧ ಕರ್ನಾಟಕ ಪೊಲೀಸ್‌ ಕಾಯ್ದೆ 92 ಡಿ, ಐಪಿಸಿ 283ರ ಅಡಿಯಲ್ಲಿ ಎನ್‌ಸಿಆರ್‌ ಪ್ರಕರಣ ದಾಖಲಿಸಿದ್ದ ಕೆಆರ್ ಮಾರುಕಟ್ಟೆ ಪೊಲೀಸರು ಕಾರಣ ನೀಡುವಂತೆ ನಾಗರಭಾವಿಯಲ್ಲಿರುವ ಅರುಣ್‌ ಮನೆಗೆ ನೋಟಿಸ್‌ ಜಾರಿ ಮಾಡಿದ್ದರು.

ನೋಟಿಸ್‌ಗೆ ಆತ ಉತ್ತರಿಸದಿದ್ದಾಗ ಕೊನೆಗೆ ಸಂಜೆ ವೇಳೆ ಆತ ಯೂಟ್ಯೂಬ್ ಕಚೇರಿಯಲ್ಲಿ ಇರುವುದು ಮಾಹಿತಿ ಗೊತ್ತಾಗಿ ಅದರಂತೆ ಕಚೇರಿಗೆ ಹೋಗಿದ್ದ ಪೊಲೀಸರು ಅರುಣ್‌ ಅನ್ನು ವಶಕ್ಕೆ ಪಡೆದಿದ್ದಾರೆ.

Related post

ಸಂಜೆಯ ಸ್ನ್ಯಾಕ್ಸ್‌ಗೆ ಮಾಡಿ ರುಚಿರುಚಿಯಾದ ಗೋಧಿ ಉಸ್ಲಿ; ಆರೋಗ್ಯಕ್ಕೂ ಒಳ್ಳೆಯದು, ರುಚಿನೂ ಸೂಪರ್

ಸಂಜೆಯ ಸ್ನ್ಯಾಕ್ಸ್‌ಗೆ ಮಾಡಿ ರುಚಿರುಚಿಯಾದ ಗೋಧಿ ಉಸ್ಲಿ; ಆರೋಗ್ಯಕ್ಕೂ ಒಳ್ಳೆಯದು, ರುಚಿನೂ…

ನ್ಯೂಸ್ ಆರೋ: ಆರೋಗ್ಯಕ್ಕೆ ಹಿತ ಎನಿಸುವ ಹಾಗೂ ರುಚಿಕಟ್ಟಾದ ರೆಸಿಪಿಯೊಂದನ್ನು ನಾವಿಂದು ಹೇಳಿಕೊಡುತ್ತೇವೆ. ಈ ಗೋಧಿ ಉಸ್ಲಿ ರೆಸಿಪಿಯನ್ನು ನೀವು ಬೇಕೆಂದರೆ ಸ್ನ್ಯಾಕ್ಸ್ ಆಗಿಯೂ ಬೆಳಗ್ಗಿನ ಉಪಾಹಾರವಾಗಿಯೂ ಮಾಡಿ…
ನವೋದಯ ವಿದ್ಯಾಲಯ ಸಮಿತಿ ಇಂದ ಶಿಕ್ಷಕರ ನೇಮಕ; ನೇರ ಸಂದರ್ಶನದ ಮೂಲಕ ಆಯ್ಕೆ

ನವೋದಯ ವಿದ್ಯಾಲಯ ಸಮಿತಿ ಇಂದ ಶಿಕ್ಷಕರ ನೇಮಕ; ನೇರ ಸಂದರ್ಶನದ ಮೂಲಕ…

ನ್ಯೂಸ್ ಆರೋ: ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯು ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ. ಒಟ್ಟು 2 ಪ್ರಾಜೆಕ್ಟ್​ ಅಸೋಸಿಯೇಟ್-I ಹುದ್ದೆ ಖಾಲಿ ಇದ್ದು, ಅರ್ಹ…
ತೆಲಂಗಾಣ ಚುನಾವಣೆ; ಸರತಿ ಸಾಲಿನಲ್ಲಿ ನಿಂತು ವೋಟ್ ಮಾಡಿದ ಟಾಲಿವುಡ್ ತಾರೆಯರು…!

ತೆಲಂಗಾಣ ಚುನಾವಣೆ; ಸರತಿ ಸಾಲಿನಲ್ಲಿ ನಿಂತು ವೋಟ್ ಮಾಡಿದ ಟಾಲಿವುಡ್ ತಾರೆಯರು…!

ನ್ಯೂಸ್ ಆ್ಯರೋ : ಇಂದು  4ನೇ ಹಂತದ ಲೋಕಸಭಾ ಚುನಾವಣೆಯ ಮತದಾನ ನಡೆಯುತ್ತಿದ್ದು, ಆಂಧ್ರಪ್ರದೇಶ ಮತ್ತು ತೆಲಂಗಾಣ ಸೇರಿ ಹಲವೆಡೆ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಇದೀಗ ಸಾಮಾನ್ಯರಂತೆಯೇ ಸರತಿ…

Leave a Reply

Your email address will not be published. Required fields are marked *