‘ನಾನು ಭಾರತೀಯನೇ, ನನ್ನನ್ನೂ ಹಿಂದೂ ಎಂದು ಕರೆಯಿರಿ’ – ಹೀಗ್ಯಾಕಂದ್ರು ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್..?

‘ನಾನು ಭಾರತೀಯನೇ, ನನ್ನನ್ನೂ ಹಿಂದೂ ಎಂದು ಕರೆಯಿರಿ’ – ಹೀಗ್ಯಾಕಂದ್ರು ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್..?

ನ್ಯೂಸ್ ಆ್ಯರೋ : ಸಿನಿ ತಾರೆಯರು ರಾಜಕಾರಣಿಗಳು ಸದಾ ಒಂದೊಂದು ಹೇಳಿಕೆಯಿಂದ ವಿವಾದಕ್ಕೆ, ಮೆಚ್ಚುಗೆಗೆ ಗುರಿಯಾಗುತ್ತಲೇ ಇರುತ್ತಾರೆ. ಸದ್ಯ ಕೇರಳದ ರಾಜ್ಯಪಾಲ ಆರೀಫ್ ಮೊಹಮ್ಮದ್ ಖಾನ್‌ ನೀಡಿದ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಸಂಚಲನ‌ ಸೃಷ್ಟಿಸಿದೆ. ಅವರು ನೀಡಿದ ಹೇಳಿಕೆಯೇನು, ಈ‌ ಹೇಳಿಕೆ ನೀಡಲು‌ ಕಾರಣವೇನು? ಈ ವರದಿ ಓದಿ.

ಕೇರಳ ರಾಜ್ಯಪಾಲರಾದ ಆರಿಫ್ ಮೊಹಮ್ಮದ್ ಖಾನ್ ಅವರು ‘ಭಾರತದಲ್ಲಿ‌ ಹುಟ್ಟಿದ ಪ್ರತಿಯೊಬ್ಬ ವ್ಯಕ್ತಿಯನ್ನು ಕೂಡ ಹಿಂದೂ ಎಂದು ಕರೆಯಬೇಕು. ನನ್ನನ್ನೂ ಕೂಡ ಹಿಂದೂ ಎಂದು ಕರೆಯಬೇಕು’ ಎಂದಿದ್ದಾರೆ. ಕೇರಳದ ತಿರುವನಂತಪುರದಲ್ಲಿ ಉತ್ತರ ಅಮೆರಿಕದ ಕೇರಳ ಹಿಂದೂಗಳು ಆಯೋಜಿಸಿದ್ದ, ಹಿಂದೂ ಸಮಾವೇಶದಲ್ಲಿ ಭಾಗಿಯಾದ ಆರಿಫ್ ಖಾನ್, ʻನೀವು ನನ್ನನ್ನು ಕಡ್ಡಾಯವಾಗಿ ಹಿಂದೂ ಎಂದು ಕರೆಯಬೇಕುʼ ಈ ಹಿಂದೆ ಸೈಯದ್‌ ಅಹ್ಮದ್‌ ಖಾನ್‌ ಈ ಮಾತನ್ನು ಹೇಳಿದ್ದರು ಎಂದು ಅವರ ಮಾತುಗಳನ್ನು ಸ್ಮರಿಸಿದ್ದಾರೆ.

ಕಾರ್ಯಕ್ರಮದಲ್ಲಿ ಮಾತನಾಡಿದ ಆರಿಫ್ ಮೊಹಮ್ಮದ್ ಖಾನ್ ‘ತನ್ನ ಗಂಭೀರ ಆರೋಪ ಇರುವುದು ಆರ್ಯ ಸಮಾಜದ ಸದಸ್ಯರ ಮೇಲೆ. ನೀವು‌ ನನ್ನನ್ನು ಹಿಂದೂ ಎಂದು ಗುರುತಿಸುತ್ತಿಲ್ಲ. ಹಿಂದೂ ಎನ್ನುವ ಪದವನ್ನು ನಾನು ಧಾರ್ಮಿಕ ಸೂಚಕ ಎಂದು ಭಾವಿಸುವುದಿಲ್ಲ. ಬದಲಾಗಿ ಹಿಂದೂ ಎಂಬುದು ಭೌಗೋಳಿಕ ಪದವಾಗಿದೆ. ಭಾರತದಲ್ಲಿ ಹುಟ್ಟಿ, ಇಲ್ಲಿನ‌ ಅನ್ನ ತಿಂದು , ಇಲ್ಲಿನ ಪವಿತ್ರ ನದಿಯ ನೀರನ್ನು ಕುಡಿಯುವ ನಾನು ನನ್ನನ್ನು ಹಿಂದೂ ಎಂದು ಕರೆದುಕೊಳ್ಳಲು ಬಯಸುತ್ತೇನೆ’ ಎಂದಿದ್ದಾರೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *