ಬಿಗ್ ಬಾಸ್ ಸಾನ್ಯಾ ಅಯ್ಯರ್ ಗೆ ಪುತ್ತೂರು ಕಂಬಳದಲ್ಲಿ ಕಪಾಳಮೋಕ್ಷ – ಜುಟ್ಟು ಹಿಡಿದೆಳೆದವನಿಗೆ ಸಾರ್ವಜನಿಕರಿಂದ ಧರ್ಮದೇಟು..!!

ಬಿಗ್ ಬಾಸ್ ಸಾನ್ಯಾ ಅಯ್ಯರ್ ಗೆ ಪುತ್ತೂರು ಕಂಬಳದಲ್ಲಿ ಕಪಾಳಮೋಕ್ಷ – ಜುಟ್ಟು ಹಿಡಿದೆಳೆದವನಿಗೆ ಸಾರ್ವಜನಿಕರಿಂದ ಧರ್ಮದೇಟು..!!

ನ್ಯೂಸ್ ಆ್ಯರೋ : ಕನ್ನಡದ ಖಾಸಗಿ ಚಾನೆಲ್ ವೊಂದರ ಪುಟ್ಟ ಗೌರಿ ಧಾರಾವಾಹಿ ಮೂಲಕ ನಟನೆಗಿಳಿದ ಸಾನ್ಯಾ ಅಯ್ಯರ್ ಅನಂತರ ಡ್ಯಾನ್ಸಿಂಗ್ ಸ್ಟಾರ್ ಮೂಲಕ ಮನೆಮಾತಾದರು. ಅನಂತರ ವೈಕ್ತಿಕ ಜೀವನದ ಕೆಲವು ಗಲಾಟೆಗಳಿಂದ ಸುದ್ದಿಯಿದ್ದರು. ಇತ್ತೀಚೆಗೆ ಬಿಗ್‌ಬಾಸ್ 9 ನಲ್ಲಿ ಭಾಗವಹಿಸಿ, ರೂಪೇಶ್ ಶೆಟ್ಟಿಯೊಂದಿಗೆ ಪ್ರೀತಿಯಲ್ಲಿದ್ದಾರೆ ಎನಿಸಿಕೊಂಡಿದ್ದರು. ಸದ್ಯ, ಇದೀಗ ಮತ್ತೆ ಪುತ್ತೂರಿನಲ್ಲಿ ನಡೆದ 30 ವರ್ಷದ ಕಂಬಳದಲ್ಲಿ ನಡದ ಗಲಾಟೆಯಿಂದ ಸುದ್ದಿಯಲ್ಲಿದ್ದಾರೆ.

ಹೌದು, ಪುತ್ತೂರಿನಲ್ಲಿ ಇತ್ತೀಚೆಗಷ್ಟೇ 30ನೇ ವರ್ಷದ ಕಂಬಳ ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಸಾನ್ಯಾ ಅಯ್ಯರ್, ಅವರ ತಾಯಿ ದೀಪಾ ಹಾಗೂ ಬೆಂಗಳೂರಿನ ಸ್ನೇಹಿತರ ಜೊತೆ ಆಗಮಿಸಿದ್ದರು. ಕಂಬಳ ವೀಕ್ಷಿಸುತ್ತಿದ್ದ ವೇಳೆ ಸೆಲ್ಪಿಗಾಗಿ ವೇದಿಕೆಯೇರಿ ಬಂದ ಅಭಿಮಾನಿಯೊಬ್ಬ, ಸಾನ್ಯಾರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ. ಇದರಿಂದ ಆಕ್ರೋಶಗೊಂಡ ಸಾನ್ಯಾ ತಾಯಿ ಹಾಗೂ ಸ್ನೇಹಿತರು ವೇದಿಕೆಯ ಮೇಲೆ ಗಲಾಟೆ ಮಾಡಿದ್ದಾರೆ.

ಸಾನ್ಯಾ ಅಯ್ಯರ್ ಭಾನುವಾರ ಕಂಬಳವನ್ನು ಉದ್ಘಾಟಿಸಿ ಕೊಂಚ ವಿರಾಮದ ನಂತರ, ಮತ್ತೆ ತಾಯಿ ಹಾಗೂ ಸ್ನೇಹಿತರೊಂದಿಗೆ ವೇದಿಕೆಯಲ್ಲಿ ಕುಳಿತು ಕಂಬಳ ವೀಕ್ಷಿಸುತ್ತಿದ್ದರು. ಈ ವೇಳೆ ಇಬ್ರಾಹಿಂ ಹೆಸರಿನ ಅಭಿಮಾನಿಯೊಬ್ಬ ಸೆಲ್ಫಿ ವೇದಿಕೆಯೇರಿ ಬಂದವನೇ ಸಾನ್ಯಾರ ಜುಟ್ಟು ಹಿಡಿದೆಳೆದು, ಅಸಭ್ಯವಾಗಿ ವರ್ತಿಸಿದ್ದಾನೆ. ಇದರಿಂದಾಗಿ ಸಾನ್ಯಾ ಹಾಗೂ ಇಬ್ರಾಹಿಂ ನಡುವೆ ಮಾತಿನ ಚಕಮಕಿ ನಡೆದಿದೆ. ಕೋಪದಿಂದ ಸಾನ್ಯಾ ಆತನ ಕಪಾಳಕ್ಕೆ ಭಾರಿಸಿದ್ದಾನೆ. ಆಕ್ರೋಶಿತಗೊಂಡ ಇಬ್ರಾಹಿಂ ಸಾನ್ಯಾರಿಗೂ ಕಪಾಳಮೋಕ್ಷ ಮಾಡಿದ್ದಾನೆ ಎನ್ನಲಾಗಿದೆ.

Video credit : Asianet Suvarna News

ವೇದಿಕೆಯಲ್ಲಿ ಸಾನ್ಯಾರಿಗೆ ಆದ ಅವಮಾನವನ್ನು ಕಂಡು ಆಕ್ರೋಶಗೊಂಡ ಸಾನ್ಯಾ ತಾಯಿ ಹಾಗೂ ಸ್ನೇಹಿತರು ವೇದಿಕೆಗೆ ಬಂದು ಆಯೋಜಕರೊಂದಿಗೆ ಗಲಾಟೆ ಮಾಡಿದ್ದಾರೆ. ಅಸಭ್ಯವಾಗಿ ವರ್ತಿಸಿದ ಇಬ್ರಾಹಿಂಗೆ ಸ್ಥಳಿಯರು ಧರ್ಮದೇಟು ನೀಡಿದ್ದಾರೆ. ಕೆಲ ಹೊತ್ತು ಕಂಬಳ ಆಯೋಜನೆಗೊಂಡಿದ್ದ ಸುತ್ತಮುತ್ತಲಿನ ಪರಿಸರ ಉದ್ವಿಗ್ನಗೊಂಡಿತ್ತು. ಕೊನೆಗೆ ಆಯೋಜಕರು ಹಾಗೂ ಸಾನ್ಯಾ ತಾಯಿಯೊಂದಿಗೆ ಮಾತನಾಡಿ ಪರಿಸ್ಥಿತಿ ತಿಳಿಗೊಳಿಸಲಾಗಿದೆ. ಈ ಬಗ್ಗೆ ಯಾವುದೇ ಪೊಲೀಸ್ ದೂರು ದಾಖಲಾಗಿಲ್ಲ ಎಂದು ತಿಳಿದು ಬಂದಿದೆ.

ವರದಿಗಳ ಪ್ರಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಸಾನ್ಯಾ ಐ ಲವ್ ಯು ಪುತ್ತೂರು ಎಂದು ಹೇಳಿದ್ದರಂತೆ ,ಇದನ್ನು ಕೇಳಿಸಿಕೊಂಡು ಇಬ್ರಾಹಿಂ ಐ ಲವ್ ಯು ಸಾನ್ಯಾ ಎಂದು ಅರಚಾಡುತ್ತಿದ್ದನಂತೆ. ಕಾರ್ಯಕ್ರಮ ಮುಗಿಯುತ್ತಿದ್ದಂತೆ ಆತ ಸಾನ್ಯಾ ಒಳಿ ಓಡೋಡಿ ಬಂದು ಅಸಭ್ಯವಾಗಿ ವರ್ತಿಸಿದ್ದಾನಂತೆ. ವೇದಿಕೆಯಿಂದ ಸಾನ್ಯಾ ಇಳಿಯುತ್ತಿದ್ದಂತೆ ಕೈ ಹಿಡಿದು ಎಳೆದಾಡಿದ್ದಾನೆ. ಕುಡಿತದ ನಶೆಯಲ್ಲಿದ್ದ ಇಬ್ರಾಹಿಂನಿಗೆ ಸ್ಥಳಿಯರು ಧರ್ಮದೇಟು ನೀಡಿ ಕಾರ್ಯಕ್ರಮದಿಂದ ಹೊರದಬ್ಬಿದ್ದಾರೆ ಎಂದು ತಿಳಿದು ಬಂದಿದೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *