ಹಣೆಗೆ ತಿಲಕ ಇಡಲು ತಿರಸ್ಕರಿಸಿದ ಟೀಂ ಇಂಡಿಯಾದ ಸಿರಾಜ್, ಉಮ್ರಾನ್ ಮಲಿಕ್ – ಪರ ವಿರೋಧ ಚರ್ಚೆಗೆ ಕಾರಣವಾಯ್ತು ವೈರಲ್ ವಿಡಿಯೋ…!!

ಹಣೆಗೆ ತಿಲಕ ಇಡಲು ತಿರಸ್ಕರಿಸಿದ ಟೀಂ ಇಂಡಿಯಾದ ಸಿರಾಜ್, ಉಮ್ರಾನ್ ಮಲಿಕ್ – ಪರ ವಿರೋಧ ಚರ್ಚೆಗೆ ಕಾರಣವಾಯ್ತು ವೈರಲ್ ವಿಡಿಯೋ…!!

ನ್ಯೂಸ್ ಆ್ಯರೋ : ಟೀಂ ಇಂಡಿಯಾದ ಆಟಗಾರರಾದ ಮೊಹಮ್ಮದ್ ಸಿರಾಜ್ ಹಾಗೂ ಉಮ್ರಾನ್‌ ಮಲಿಕ್‌ ತಮ್ಮ ಹಣೆಗೆ ತಿಲಕ ಇಡುವುದನ್ನು ತಿರಸ್ಕರಿಸಿದ್ದಾರೆ ಎಂಬ ಕಾರಣಕ್ಕೆ ಭಾರೀ ಚರ್ಚೆಗೆ ಕಾರಣವಾಗಿದ್ದಾರೆ. ಸದ್ಯ, ಈ ಇಬ್ಬರು ಆಟಗಾರರಿಗೆ ಸ್ವಾಗತ ಕೋರುವವರು ಕುಂಕುಮ‌ ಇಡುತ್ತಿದ್ದಂತೆ ಬೇಡ ಎಂದು ತಿರಸ್ಕರಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಕ್ಕತ್ ವೈರಲ್ ಆಗಿದೆ.

ಟೀಂ ಇಂಡಿಯಾದ ಆಟಗಾರರು ಹೋಟೆಲ್‌ಗೆ ತೆರಳುತ್ತಿದ್ದ ವಿಡಿಯೋ ವೈರಲ್ ಆಗಿದೆ. ಈ ಸಂದರ್ಭದಲ್ಲಿ ಆಟಗಾರರಿಗೆ ಸ್ವಾಗತ ಏರ್ಪಡಿಸಲಾಗಿತ್ತು. ಭಾರತೀಯ ಬೌಲರ್‌ಗಳಾದ ಸಿರಾಜ್ ಹಾಗೂ ಉಮ್ರಾನ್ ಮಲಿಕ್ ಈ ವೇಳೆ ತಮ್ಮ ಹಣೆಗೆ ತಿಲಕ ಇಡದಂತೆ ಹೊಟೇಲ್ ಸಿಬ್ಬಂದಿಗಳನ್ನು‌ ತಡೆದಿದ್ದಾರೆ. ಈ ವಿಡಿಯೋವನ್ನು ನೋಡಿದ ನೆಟ್ಟಿಗರಲ್ಲಿ ಕೆಲವರು ‘ಹಾಗೆ ಮಾಡಬಾರದಿತ್ತು, ಅದು ಭಾರತೀಯ ಸಂಸ್ಕೃತಿಯ ಪ್ರಕಾರ ಸ್ವಾಗತಿಸುವುದಲ್ಲವೇ’ ಎಂದರೆ, ಮತ್ತೆ ಕೆಲವರು ‘ಆಟಗಾರರು ಮಾಡಿದ್ದು‌ ಸರಿ, ಅವರು ಅವರ ಧರ್ಮದ‌ ಪ್ರಕಾರ ನಡೆದುಕೊಂಡಿದ್ದಾರೆ ಅದರಲ್ಲೇನು ತಪ್ಪದೆ’ ಎಂದು ಪ್ರಶ್ನಿಸಿದ್ದಾರೆ.

ಆದರೆ ಇದೇ ವೇಳೆ ತಿಲಕವನ್ನು ತಿರಸ್ಕರಿಸಿದ ಟೀಂ ಇಂಡಿಯಾದ ಬ್ಯಾಟಿಂಗ್‌ ಕೋಚ್ ವಿಕ್ರಮ್ ರಾಥೋರ್ ಅವರನ್ನು‌ ನೆಟ್ಟಿಗರು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಆದರೆ ಕೆಲವರ ಪ್ರಕಾರ, ಇದು ಹಳೆಯ ವಿಡಿಯೋ. ಏಕೆಂದರೆ ಆಸ್ಟ್ರೇಲಿಯಾ ಪರ ಟೆಸ್ಟ್ ಸರಣಿಗೆ ಆಯ್ಕೆಯಾಗಿಲ್ಲ. ಆದರೂ ವಿಡಿಯೋದಲ್ಲಿ ಅವರಿದ್ದಾರೆ. ಇದು ಶ್ರೀಲಂಕಾ ಅಥವಾ ನ್ಯೂಜಿಲೆಂಡ್ ವಿರುದ್ಧ ನಡೆದ ಪಂದ್ಯದ ವೇಳೆ ನಡೆದಿರುವ ಘಟನೆಯಾಗಿರಬಹುದು ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ. ಆದರೆ ವಿಡಿಯೋ ಮಾತ್ರ ಪರ – ವಿರೋಧ ಚರ್ಚೆಗೆ ಆಹಾರವಾಗಿದೆ.

Related post

11 ವರ್ಷಗಳ ದಾಂಪತ್ಯದಲ್ಲಿ ಬಿರುಕು; ಡಿವೋರ್ಸ್‌ ವಿಚಾರಕ್ಕೆ ಟ್ರೋಲ್‌ ಮಾಡಿದವರಿಗೆ ಖ್ಯಾತ ಸಂಗೀತ ನಿರ್ದೇಶಕ ಹೇಳಿದಿಷ್ಟು…!

11 ವರ್ಷಗಳ ದಾಂಪತ್ಯದಲ್ಲಿ ಬಿರುಕು; ಡಿವೋರ್ಸ್‌ ವಿಚಾರಕ್ಕೆ ಟ್ರೋಲ್‌ ಮಾಡಿದವರಿಗೆ ಖ್ಯಾತ…

ನ್ಯೂಸ್ ಆರೋ: ತಮಿಳಿನ ಖ್ಯಾತ ಮ್ಯೂಸಿಕ್ ಡೈರೆಕ್ಟರ್ ಜಿ.ವಿ ಪ್ರಕಾಶ್ ಕುಮಾರ್ ಈಗ ಸುದ್ದಿಯಲ್ಲಿದ್ದು,11 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಿದ ಬೆನ್ನಲ್ಲೇ ಅವರ ವೈಯುಕ್ತಿಕ ವಿಚಾರಗಳನ್ನು ಟ್ರೋಲ್ ಮಾಡಲಾಗುತ್ತಿದೆ.…
ದೇವರ ನಾಡಿನಲ್ಲಿ ಮತ್ತೊಮ್ಮೆ ವೈರಸ್ ಆತಂಕ; ಕೊರೊನಾ, ನಿಫಾ ಬಳಿಕ ಆತಂಕ ಹೆಚ್ಚಿಸಿದ ವೆಸ್ಟ್‌ನೈಲ್‌

ದೇವರ ನಾಡಿನಲ್ಲಿ ಮತ್ತೊಮ್ಮೆ ವೈರಸ್ ಆತಂಕ; ಕೊರೊನಾ, ನಿಫಾ ಬಳಿಕ ಆತಂಕ…

ನ್ಯೂಸ್ ಆರೋ: ಕೊರೋನಾ ವೈರಸ್ ನ ಆತಂಕ ಮುಗಿಯುತ್ತಿದ್ದಂತೆ ಇದೀಗ ಮತ್ತೆ ಹೊಸದೊಂದು ವೈರಸ್ ಪತ್ತೆಯಾಗಿದೆ. ದಿನಕಳೆದಂತೆ ನಾನಾರೀತಿಯ ವೈರಸ್‌ಗಳು ಸೃಷ್ಠಿಯಾಗುತ್ತಿದ್ದು ಆತಂಕ ಹೆಚ್ಚಾಗುತ್ತಿದೆ. ಕೆಲವು ದಿನಗಳ ಹಿಂದಷ್ಟೇ ನೆರೆಯ…
ಮನೆಕೆಲಸದಾಕೆಯಿಂದ ನಟಿ ಛಾಯಾ ಸಿಂಗ್ ತಾಯಿ ಮನೆಯಲ್ಲಿ ಚಿನ್ನಾಭರಣ ಕಳ್ಳತನ; 66 ಗ್ರಾಂ ಚಿನ್ನ, 150 ಗ್ರಾಂ ಬೆಳ್ಳಿ ವಶ

ಮನೆಕೆಲಸದಾಕೆಯಿಂದ ನಟಿ ಛಾಯಾ ಸಿಂಗ್ ತಾಯಿ ಮನೆಯಲ್ಲಿ ಚಿನ್ನಾಭರಣ ಕಳ್ಳತನ; 66 ಗ್ರಾಂ…

ನ್ಯೂಸ್ ಆರೋ: ಕನ್ನಡ ಹಾಗೂ ಪರಭಾಷೆಯ ಸಿನಿಮಾಗಳಲ್ಲೂ ಮಿಂಚಿರುವ ನಟಿ ಛಾಯಾ ಸಿಂಗ್ ಅವರ ತಾಯಿ ಮನೆಯಲ್ಲಿ ಕಳ್ಳತನ ನಡೆದಿದೆ. ಚಿನ್ನಾಭರಣ ಕಳುವಾಗಿರುವ ಬಗ್ಗೆ ಛಾಯಾ ಸಿಂಗ್ ತಾಯಿ…

Leave a Reply

Your email address will not be published. Required fields are marked *