ಭಾಷಣದಲ್ಲಿ ಬ್ರಾಹ್ಮಣರಿಗೆ ಅವಮಾನ ಆರೋಪ – RSS ಮುಖ್ಯಸ್ಥ ಮೋಹನ್ ಭಾಗವತ್ ವಿರುದ್ಧ ಪ್ರಕರಣ ದಾಖಲು

ಭಾಷಣದಲ್ಲಿ ಬ್ರಾಹ್ಮಣರಿಗೆ ಅವಮಾನ ಆರೋಪ – RSS ಮುಖ್ಯಸ್ಥ ಮೋಹನ್ ಭಾಗವತ್ ವಿರುದ್ಧ ಪ್ರಕರಣ ದಾಖಲು

ನ್ಯೂಸ್ ಆ್ಯರೋ‌ : ಆರ್‌ಎಸ್‌ಎಸ್‌ ಸರ ಸಂಘ ಸಂಚಾಲಕ ಮೋಹನ್‌ ಭಾಗವತ್‌ ಅವರು ಇತ್ತೀಚೆಗೆ ಮಾಡಿದ್ದ ಭಾಷಣದಲ್ಲಿ ಬ್ರಾಹ್ಮಣರನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿ ಬಿಹಾರದ ನ್ಯಾಯಾಲಯದಲ್ಲಿ ಮಂಗಳವಾರ ದೂರು ದಾಖಲಿಸಲಾಗಿದೆ.

ಮುಂಬೈನಲ್ಲಿ ಸೋಮವಾರ ನಡೆದಿದ್ದ ಕಾರ್ಯಕ್ರಮವೊಂದ ರಲ್ಲಿ ಭಾಗವಹಿಸಿದ್ದ ಭಾಗವತ್‌ ಅವರು ಮಾಡಿದ್ದ ಭಾಷಣಕ್ಕೆ ಸಂಬಂಧಿಸಿದ ಮಾಧ್ಯಮ ವರದಿಗಳನ್ನು ಉಲ್ಲೇಖಿಸಿ ವಕೀಲ ಸುಧೀರ್ ಕುಮಾರ್‌ ಓಜಾ ಅವರು ಮುಜಾಫರ್‌ಪುರದ ಸಿಜೆಎಂ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಆರ್‌ಎಸ್‌ಎಸ್ ಮುಖ್ಯಸ್ಥರು ತಮ್ಮ ಮರಾಠಿ ಭಾಷಣದಲ್ಲಿ, ‘ಹಿಂದೂ ಸಮಾಜದಲ್ಲಿ ಚಾಲ್ತಿಯಲ್ಲಿರುವ ಕಠಿಣ ಜಾತಿ ವ್ಯವಸ್ಥೆಗೆ ಪಂಡಿತರು (ಪುರೋಹಿತ ವರ್ಗ) ಕಾರಣಕರ್ತರು’ ಎಂದು ದೂಷಿಸಿದ್ದರು. ಈ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ಇದೇ 20ಕ್ಕೆ ನಿಗದಿಮಾಡಿದೆ.

ಏನಿದು ವಿವಾದ?
ರವೀಂದ್ರ ನಾಟ್ಯ ಮಂದಿರದ ಸಭಾಂಗಣದಲ್ಲಿ ಸಂತ ಶಿರೋಮಣಿ ರೋಹಿದಾಸರ 647ನೇ ಜನ್ಮದಿನಾಚರಣೆಯ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಆರ್ ಎಸ್ ಎಸ್ ಮುಖ್ಯಸ್ಥರು, ‘ನಾವು ಜೀವನೋಪಾಯವನ್ನು ಗಳಿಸಿದಾಗ, ನಮಗೆ ಸಮಾಜದ ಬಗ್ಗೆ ಜವಾಬ್ದಾರಿಯೂ ಇರುತ್ತದೆ, ದೇಶದಲ್ಲಿ ಆತ್ಮಸಾಕ್ಷಿ ಮತ್ತು ಪ್ರಜ್ಞೆ ಒಂದೇ ಅಭಿಪ್ರಾಯಗಳು ಮಾತ್ರ ಬೇರೆ ಬೇರೆ ಎಂದರು.

ಮುಂದುವರೆಸಿ, ಪ್ರತಿಯೊಂದು ಕೆಲಸವು ಸಮಾಜದ ಹೆಚ್ಚಿನ ಒಳಿತಿಗಾಗಿ ಇರುವಂತಹದ್ದು. ಆದ್ದರಿಂದ ಕೆಲಸವಂಬುದು ಹೇಗೆ ದೊಡ್ಡದು ಅಥವಾ ಚಿಕ್ಕದು ಎಂದು ವಿಭಿನ್ನವಾಗಿರುತ್ತದೆ?’. ನಮ್ಮ ಸೃಷ್ಟಿಕರ್ತನಿಗೆ ನಾವು ಸಮಾನರು, ಯಾವುದೇ ಜಾತಿ ಅಥವಾ ಪಂಥವಿಲ್ಲ. ಈ ಭಿನ್ನಾಭಿಪ್ರಾಯಗಳನ್ನು ನಮ್ಮ ಪುರೋಹಿತರು ಸೃಷ್ಟಿಸಿದ್ದಾರೆ, ಅದು ತಪ್ಪು. ದೇಶದಲ್ಲಿ ಆತ್ಮಸಾಕ್ಷಿ ಮತ್ತು ಪ್ರಜ್ಞೆ ಒಂದೇ ಆಗಿರುತ್ತದೆ ಮತ್ತು ಅಭಿಪ್ರಾಯಗಳು ಮಾತ್ರ ವಿಭಿನ್ನವಾಗಿವೆ’ ಎಂದು ಹೇಳಿದ್ದರು.

ಶಾಸ್ತ್ರದಲ್ಲಿ ಬ್ರಾಹ್ಮಣರನ್ನು ಗೆಲ್ಲಲು ಸಾಧ್ಯವಾಗದಿದ್ದರೂ, ಅವರು ಅನೇಕ ಹೃದಯಗಳನ್ನು ಮುಟ್ಟಲು ಸಮರ್ಥರಾಗಿದ್ದರು ಮತ್ತು ಅವರನ್ನು ದೇವರಲ್ಲಿ ನಂಬುವಂತೆ ಮಾಡಿದರು ಎಂದಿದ್ದ ಮೋಹನ್ ಭಾಗವತ್ ಹೇಳಿಕೆ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು.

Related post

ಆಸ್ಪತ್ರೆಗೆ ದಾಖಲಾದ ಬಾಲಿವುಡ್‌ನ ಡ್ರಾಮಾ ಕ್ವೀನ್ ನಟಿ ರಾಖಿ ಸಾವಂತ್; ಸಾಮಾಜಿಕ ಜಾಲತಾಣದಲ್ಲಿ ಫೋಟೊ ವೈರಲ್‌..!

ಆಸ್ಪತ್ರೆಗೆ ದಾಖಲಾದ ಬಾಲಿವುಡ್‌ನ ಡ್ರಾಮಾ ಕ್ವೀನ್ ನಟಿ ರಾಖಿ ಸಾವಂತ್; ಸಾಮಾಜಿಕ…

ನ್ಯೂಸ್ ಆರೋ:  ಬಿಗ್ ಬಾಸ್ ಖ್ಯಾತಿಯ ರಾಖಿ ಸಾವಂತ್ ವೈಯಕ್ತಿಕ ವಿಚಾರಕ್ಕೆ ಸದಾ ಸುದ್ದಿಯಲ್ಲಿರುತ್ತಾರೆ. ಲವ್​, ಮದುವೆ, ಬ್ರೇಕಪ್ ಅಂತ ಸದಾ ಸುದ್ದಿಯಲ್ಲಿರುವ ರಾಖಿ ಸಾವಂತ್​, ಬಾಲಿವುಡ್‌ನ ಡ್ರಾಮಾ…
ಎಂಡೊಮೆಟ್ರಿಯೊಸಿಸ್ ಕಾಯಿಲೆಗೆ ತುತ್ತಾದ ಶಿಲ್ಪಾ ಶೆಟ್ಟಿ ಸಹೋದರಿ ಶಮಿತಾ ಶೆಟ್ಟಿ..!; ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ ಬೆಡ್​ ಮೇಲಿನ ವಿಡಿಯೋ

ಎಂಡೊಮೆಟ್ರಿಯೊಸಿಸ್ ಕಾಯಿಲೆಗೆ ತುತ್ತಾದ ಶಿಲ್ಪಾ ಶೆಟ್ಟಿ ಸಹೋದರಿ ಶಮಿತಾ ಶೆಟ್ಟಿ..!; ಸಾಮಾಜಿಕ…

ನ್ಯೂಸ್ ಆ್ಯರೋ :ಬಾಲಿವುಡ್​​ ನಟಿ ಶಿಲ್ಪಾ ಶೆಟ್ಟಿ ಸಹೋದರಿ, ನಟಿ ಶಮಿತಾ ಶೆಟ್ಟಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎಂಡೊಮೆಟ್ರಿಯೊಸಿಸ್ ಸಮಸ್ಯೆ ಇರುವುದು ಪತ್ತೆಯಾಗಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಇಂದು…
ಐಷಾರಾಮಿ ಬಂಗಲೆಯಲ್ಲೇ ವಾಸ, ದುಬಾರಿ ಕಾರಿನಲ್ಲೇ ಓಡಾಟ! ಬಿಜೆಪಿ ಅಭ್ಯರ್ಥಿ, ಬಾಲಿವುಡ್ ನಟಿ ಕಂಗನಾ ಆಸ್ತಿ ಎಷ್ಟು ಕೋಟಿ ಗೊತ್ತಾ?

ಐಷಾರಾಮಿ ಬಂಗಲೆಯಲ್ಲೇ ವಾಸ, ದುಬಾರಿ ಕಾರಿನಲ್ಲೇ ಓಡಾಟ! ಬಿಜೆಪಿ ಅಭ್ಯರ್ಥಿ, ಬಾಲಿವುಡ್…

ನ್ಯೂಸ್ ಆ್ಯರೋ : ಹಿಮಾಚಲ ಪ್ರದೇಶದಲ್ಲಿ ಚುನಾವಣಾ ಕಣ ರಂಗೇರಿದ್ದು ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಕೂಡ ಬಿರುಸಿನಿಂದ ಸಾಗಿದೆ. ಈ‌ ಬಾರಿ ಮಂಡಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಬಾಲಿವುಡ್‌…

Leave a Reply

Your email address will not be published. Required fields are marked *