ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ – ಮೂರು ರಾಜ್ಯಗಳ 41 ಕಡೆ ಎನ್ಐಎ ದಾಳಿ, ಮತ್ತಿಬ್ಬರು ಶಂಕಿತ ಉಗ್ರರು ತಮಿಳುನಾಡಿನಲ್ಲಿ ಅರೆಸ್ಟ್

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ – ಮೂರು ರಾಜ್ಯಗಳ 41 ಕಡೆ ಎನ್ಐಎ ದಾಳಿ, ಮತ್ತಿಬ್ಬರು ಶಂಕಿತ ಉಗ್ರರು ತಮಿಳುನಾಡಿನಲ್ಲಿ ಅರೆಸ್ಟ್

ನ್ಯೂಸ್ ಆ್ಯರೋ‌ : ಮಂಗಳೂರಲ್ಲಿ ನಡೆದ ಕುಕ್ಕರ್‌ ಬಾಂಬ್‌ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಇಂದು ಬೆಳಿಗ್ಗೆ ಕರ್ನಾಟಕ, ಕೇರಳ, ತಮಿಳುನಾಡು ಸೇರಿ 41 ಸ್ಥಳಗಳಲ್ಲಿ ಶಂಕಿತ ಐಎಸ್‌ಐಎಸ್ ಬೆಂಬಲಿಗರಿಗಾಗಿ ಶೋಧ ಕಾರ್ಯಾಚರಣೆ ನಡೆಸಿದ್ದು, ತಮಿಳುನಾಡು ಲಿಂಕ್‌ ಹಿನ್ನೆಲೆಯಲ್ಲಿ ತಿರುಪ್ಪೂರು ಜಿಲ್ಲೆಯ 2 ಸ್ಥಳಗಳಲ್ಲಿ ದಾಳಿ ನಡೆಸಿದ್ದು, ಇಬ್ಬರನ್ನು ಬಂಧಿಸಿದೆ.

ಇಂದು ಬೆಳ್ಳಂಬೆಳಗ್ಗೆ ತಮಿಳುನಾಡಿನ ತಿರುಪ್ಪೂರು ಜಿಲ್ಲೆಗಳಲ್ಲಿ ಎನ್‌ಐಎ ದಾಳಿ ನಡೆಸಿ, ಕುಕ್ಕರ್‌ ಬಾಂಬ್‌ ಬ್ಲಾಸ್ಟ್‌ ಕೇಸ್‌ ಸಂಬಂಧಿಸಿದ ಇಬ್ಬರ ಮನೆಯಲ್ಲಿ 5 ಗಂಟೆಗಳ ಕಾಲ ಶೋಧ ಕಾರ್ಯಾಚರಣೆ ನಡೆಸಿ ಬಳಿಕ ಬಂಧಿಸಿದ್ದಾರೆ.

ನ.19 ರಂದು ಮಂಗಳೂರಿನಲ್ಲಿ ಆಟೋದಲ್ಲಿ ಕುಕ್ಕರ್‌ ಬಾಂಬ್‌ ಸ್ಫೋಟಗೊಂಡಿತ್ತು. ಘಟನೆಯಲ್ಲಿ ಶಂಕಿತ ಉಗ್ರ ಮೊಹಮ್ಮದ್‌ ಶಾರೀಕ್‌ ಹಾಗೂ ಆಟೋ ಚಾಲಕ ಸೇರಿ ಇಬ್ಬರು ಗಾಯಗೊಂಡಿದ್ದರು.

ಹೆಚ್ಚಿನ ಚಿಕಿತ್ಸೆಗಾಗಿ ಶಾರೀಕ್‌ನನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಗಾಯದಿಂದ ಚೇತರಿಸಿಕೊಂಡ ಬಳಿಕ ಆತನನ್ನು ಎನ್ಐಎ ವಶಕ್ಕೆ ಪಡೆದಿತ್ತು.‌ ಸದ್ಯ ಈ ಪ್ರಕರಣ ಸಂಬಂಧ ತಮಿಳುನಾಡು ಲಿಂಕ್‌ ಪತ್ತೆಯಾದ ಬೆನ್ನಲ್ಲೇ ಇಂದು ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ.

ಅಕ್ಟೋಬರ್ 23, 2020ರಂದು ಕೊಯಮತ್ತೂರಿನ ಕೈಗಾರಿಕಾ ಪ್ರದೇಶದ ದೇವಸ್ಥಾನದಿಂದ ಕೆಲ ಮೀಟರ್‌ಗಳ ದೂರದಲ್ಲಿ ನಿಂತಿದ್ದ ಮಾರುತಿ 800 ಕಾರಿನಲ್ಲಿ ಸಿಲಿಂಡರ್ ಸ್ಫೋಟಗೊಂಡಿತ್ತು. ಘಟನೆಯಲ್ಲಿ 29 ವರ್ಷದ ಜಮೀಶಾ ಮುಬಿನ್ ಎಂಬುವರು ಮೃತಪಟ್ಟಿದ್ದರು.

Related post

ಯಶ್ ಮೂವಿಯಲ್ಲಿ ಶೂರ್ಪನಖಿಯಾಗಿ ಮಿಂಚಲಿದ್ದಾರೆ ರಾಕುಲ್!

ಯಶ್ ಮೂವಿಯಲ್ಲಿ ಶೂರ್ಪನಖಿಯಾಗಿ ಮಿಂಚಲಿದ್ದಾರೆ ರಾಕುಲ್!

ನ್ಯೂಸ್ ಆರೋ: ಕೆಜಿಎಫ್ ನಂತರ ಹಿಟ್ ಸಿನಿಮಾಗಳಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಿರುವ ಯಶ್ ಇದೀಗ ಮತ್ತೊಂದು ಸಿನಿಮಾ ನಿರ್ಮಾಣಕ್ಕೆ ಕೈ ಹಾಕಿದ್ದಾರೆ. ಆ ಚಿತ್ರಕ್ಕೆ ಶೂರ್ಪನಖಿಯಾಗಿ ರಕುಲ್ ಕಾಣಿಸಿಕೊಳ್ಳಲಿದ್ದಾರೆ. ಹೌದು,ಶೂರ್ಪನಕಿಯಾಗಿ…
ಪಾಕ್ ಆಕ್ರಮಿತ ಕಾಶ್ಮೀರ ಜನರಿಗೆ ಬಂಪರ್ ಪ್ಯಾಕೇಜ್; ಆಹಾರ ಉತ್ಪನ್ನಗಳ- ವಿದ್ಯುತ್‌ ದರ ಇಳಿಕೆ ಮಾಡಿದ ಪಾಕ್‌ ಸರ್ಕಾರ

ಪಾಕ್ ಆಕ್ರಮಿತ ಕಾಶ್ಮೀರ ಜನರಿಗೆ ಬಂಪರ್ ಪ್ಯಾಕೇಜ್; ಆಹಾರ ಉತ್ಪನ್ನಗಳ- ವಿದ್ಯುತ್‌…

ನ್ಯೂಸ್ ಆರೋ: ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಜನರು ಭಾರತಕ್ಕೆ ಸೇರುತ್ತೇವೆ ಎಂದು ನಡೆಸುತ್ತಿದ್ದ ಪ್ರತಿಭಟನೆಗೆ ಪಾಕಿಸ್ತಾನದ ಸರ್ಕಾರ ಮಣಿದಿದೆ. ಹೌದು, ಜನರ ಪ್ರತಿಭಟನೆ ಬೆನ್ನಲ್ಲೇ ಪಾಕ್‌ ಆಕ್ರಮಿತ ಕಾಶ್ಮೀರದ…
ಸಂಜೆಯ ಸ್ನ್ಯಾಕ್ಸ್‌ಗೆ ಮಾಡಿ ರುಚಿರುಚಿಯಾದ ಗೋಧಿ ಉಸ್ಲಿ; ಆರೋಗ್ಯಕ್ಕೂ ಒಳ್ಳೆಯದು, ರುಚಿನೂ ಸೂಪರ್

ಸಂಜೆಯ ಸ್ನ್ಯಾಕ್ಸ್‌ಗೆ ಮಾಡಿ ರುಚಿರುಚಿಯಾದ ಗೋಧಿ ಉಸ್ಲಿ; ಆರೋಗ್ಯಕ್ಕೂ ಒಳ್ಳೆಯದು, ರುಚಿನೂ…

ನ್ಯೂಸ್ ಆರೋ: ಆರೋಗ್ಯಕ್ಕೆ ಹಿತ ಎನಿಸುವ ಹಾಗೂ ರುಚಿಕಟ್ಟಾದ ರೆಸಿಪಿಯೊಂದನ್ನು ನಾವಿಂದು ಹೇಳಿಕೊಡುತ್ತೇವೆ. ಈ ಗೋಧಿ ಉಸ್ಲಿ ರೆಸಿಪಿಯನ್ನು ನೀವು ಬೇಕೆಂದರೆ ಸ್ನ್ಯಾಕ್ಸ್ ಆಗಿಯೂ ಬೆಳಗ್ಗಿನ ಉಪಾಹಾರವಾಗಿಯೂ ಮಾಡಿ…

Leave a Reply

Your email address will not be published. Required fields are marked *