Women’s T20 WC : ಸೆಮಿಫೈನಲ್ಸ್ ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತದ ವನಿತೆಯರಿಗೆ ಸೋಲು

Women’s T20 WC : ಸೆಮಿಫೈನಲ್ಸ್ ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತದ ವನಿತೆಯರಿಗೆ ಸೋಲು

ನ್ಯೂಸ್ ಆ್ಯರೋ : ದಕ್ಷಿಣ ಆಫ್ರಿಕಾದ ಕೇಪ್‌ಟೌನ್‌ನ ನ್ಯೂಲ್ಯಾಂಡ್ಸ್ ಅಂಗಳದಲ್ಲಿ ನಡೆಯುತ್ತಿರುವ ಟಿ20 ಮಹಿಳಾ ವಿಶ್ವಕಪ್ ಸೆಮಿಫೈನಲ್‌ ಪಂದ್ಯದಲ್ಲಿ ಆಸ್ಟ್ರೇಲಿಯಾ ಭಾರತದ ವಿರುದ್ಧ ಐದು ರನ್ ಗಳ ಗೆಲುವು ದಾಖಲಿಸಿದೆ.

ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ನಿಗದಿತ 20 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 174 ರನ್ ಕಲೆಹಾಕುವ ಮೂಲಕ ಭಾರತಕ್ಕೆ ಭಾರಿ ಗುರಿ ನೀಡಿತ್ತು. ಆರಂಭಿಕ ಬ್ಯಾಟರ್ ಗಳಾದ ಅಲಿಸ್ಸಾ ಹೀಲಿ ಮತ್ತು ಬೆತ್ ಮೂನಿ ಅತ್ಯುತ್ತಮ ಆರಂಭ ಒದಗಿಸಿದರು. 7.3 ಓವರ್ ಗಳಲ್ಲಿ ಈ ಜೋಡಿ 52 ರನ್ ಕಲೆ ಹಾಕುವ ಮೂಲಕ ಆಸ್ಟ್ರೇಲಿಯಾದ ಇನ್ನಿಂಗ್ಸ್‌ಗೆ ಉತ್ತಮ ಅಡಿಪಾಯ ಹಾಕಿದರು.

ಅಲಿಸ್ಸಾ ಹೀಲಿ 26 ಎಸೆತಗಳಲ್ಲಿ 25 ರನ್ ಗಳಿಸಿ ಔಟಾದರೆ, ಬೆತ್ ಮೂನಿ ಅತ್ಯುತ್ತಮ ಬ್ಯಾಟಿಂಗ್ ಮುಂದುವರೆಸಿದರು. 37 ಎಸೆತಗಳಲ್ಲಿ 7 ಬೌಂಡರಿ 1 ಸಿಕ್ಸರ್ ಸಹಿತ 54 ರನ್ ಗಳಿಸಿ ಈ ಬಾರಿ ವಿಶ್ವಕಪ್ ಟೂರ್ನಿಯಲ್ಲಿ ಎರಡನೇ ಅರ್ಧಶತಕ ಗಳಿಸಿದರು. ಭಾರತ ತಂಡದ ಫೀಲ್ಡಿಂಗ್‌ ಸಾಧಾರಣವಾಗಿತ್ತು, ಹಲವು ಕ್ಯಾಚ್‌ಗಳು, ಸ್ಟಂಪೌಟ್ ಅವಕಾಶಗಳನ್ನು ಕೈಚೆಲ್ಲಿದರು. ಆಶ್ಲೆ ಗಾರ್ಡನರ್ 18 ಎಸೆತಗಳಲ್ಲಿ 31 ರನ್ ಗಳಿಸಿ ಸ್ಫೋಟಕ ಬ್ಯಾಟಿಂಗ್ ಮಾಡಿದರು. ಗ್ರೇಸ್ ಹ್ಯಾರಿಸ್ 4 ಎಸೆತಗಳಲ್ಲಿ 7 ರನ್ ಗಳಿಸಿ ಶಿಖಾ ಪಾಂಡೆಗೆ ಕ್ಲೀನ್‌ ಬೌಲ್ಡ್ ಆದರು.

ನಾಯಕಿ ಮೆಗ್ ಲ್ಯಾನಿಂಗ್ ಜವಾಬ್ದಾರಿಯುತ ಇನ್ನಿಂಗ್ಸ್ ಆಡಿದರು. ಆರಂಭದಲ್ಲಿ ನಿಧಾನಗತಿಯಲ್ಲಿ ಆಡಿದ ಅವರು ಅಂತಿಮ ಓವರ್ ಗಳಲ್ಲಿ ಅಬ್ಬರಿಸಿದರು. 34 ಎಸೆತಗಳಲ್ಲಿ 3 ಬೌಂಡರಿ 2 ಸಿಕ್ಸರ್ ಸಹಿತ 49 ರನ್ ಗಳಿಸಿ ಮಿಂಚಿದರು. 20ನೇ ಓವರ್ ನಲ್ಲಿ ಅವರು 18 ರನ್ ಗಳಿಸಿ ಆಸ್ಟ್ರೇಲಿಯಾ ಬೃಹತ್ ಮೊತ್ತ ಕಲೆ ಹಾಕಲು ಸಹಕಾರಿಯಾದರು. ಭಾರತದ ಪರವಾಗಿ ಶಿಖಾ ಪಾಂಡೆ 4 ಓವರ್ ಗಳಲ್ಲಿ 32 ರನ್ ನೀಡಿ 2 ವಿಕೆಟ್ ಪಡೆದುಕೊಂಡರು. ರಾಧಾ ಯಾದವ್ ಮತ್ತು ದೀಪ್ತಿ ಶರ್ಮಾ ತಲಾ ಒಂದು ವಿಕೆಟ್ ಪಡೆದರು. ಪ್ರಮುಖ ವೇಗದ ಬೌಲರ್ ರೇಣುಕಾ ಸಿಂಗ್ ಠಾಕೂರ್ 4 ಓವರ್ ಗಳಲ್ಲಿ 41 ರನ್ ನೀಡುವ ಮೂಲಕ ದುಬಾರಿಯಾದರು.

ಭಾರೀ ಗುರಿ ಬೆನ್ನತ್ತಿದ್ದ ಭಾರತ ಆರಂಭಿಕ ಆಘಾತ ಅನುಭವಿಸಿ ಸತತ ಮೂರು ವಿಕೆಟ್ ಕಳೆದುಕೊಂಡಿತು. ಆದರೆ ನಾಲ್ಕನೇ ವಿಕೆಟ್ ಗೆ ನಾಯಕಿ ಹರ್ಮನ್ ಪ್ರೀತ್ ಕೌರ್ ಹಾಗೂ ಜೆಮಿಮಾ ರೋಡ್ರಿಗಸ್ ಅರ್ಧಶತಕದ ಜೊತೆಯಾಟ ನೀಡಿದರು.

ಕೆಟ್ಟ ಹೊಡೆತಕ್ಕೆ ಯತ್ನಿಸಿದ ಜೆಮಿಮಾ ರೋಡ್ರಿಗಸ್ 43 ರನ್ ಗಳಿಸಿ ಔಟಾದರೆ, ನಾಯಕಿ ಹರ್ಮನ್ ಪ್ರೀತ್ ಕೌರ್ 52 ರನ್ ಗಳಿಸಿ ರನೌಟ್ ಆದರು‌. ಕೊನೆಯಲ್ಲಿ ಸತತ ವಿಕೆಟ್ ಕಳೆದುಕೊಂಡ ಭಾರತ ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 167 ಕೇವಲ ರನ್ ಗಳಿಸಲಷ್ಟೇ ಶಕ್ತವಾಗಿ ಸೋಲನುಭವಿಸಿತು.

Related post

ಡೈರೆಕ್ಟರ್​ ಹುದ್ದೆಗೆ ಅರ್ಜಿ ಆಹ್ವಾನಿಸಿದ UIDAI; ತಿಂಗಳಿಗೆ 2 ಲಕ್ಷಕ್ಕೂ ಅಧಿಕ ಸಂಬಳ

ಡೈರೆಕ್ಟರ್​ ಹುದ್ದೆಗೆ ಅರ್ಜಿ ಆಹ್ವಾನಿಸಿದ UIDAI; ತಿಂಗಳಿಗೆ 2 ಲಕ್ಷಕ್ಕೂ ಅಧಿಕ…

ನ್ಯೂಸ್ ಆರೋ: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 3 ಡೈರೆಕ್ಟರ್, ಅಸಿಸ್ಟೆಂಟ್ ಡೈರೆಕ್ಟರ್​ ಹುದ್ದೆಗಳು…
ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡಿ ಸುಪ್ರೀಂ ಕೋರ್ಟ್ ಆದೇಶ

ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡಿ ಸುಪ್ರೀಂ ಕೋರ್ಟ್ ಆದೇಶ

ನ್ಯೂಸ್ ಆ್ಯರೋ : ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಅವರಿಗೆ ಮಧ್ಯಂತರ ಜಾಮೀನು ನೀಡಿ ಇಂದು…
ಆರೋಗ್ಯ ಸಮಸ್ಯೆ; 14 ತಿಂಗಳ ಬಳಿಕ ಸ್ಯಾಂಟ್ರೋ ರವಿಗೆ ಜಾಮೀನು ನೀಡಿದ ನ್ಯಾಯಾಲಯ

ಆರೋಗ್ಯ ಸಮಸ್ಯೆ; 14 ತಿಂಗಳ ಬಳಿಕ ಸ್ಯಾಂಟ್ರೋ ರವಿಗೆ ಜಾಮೀನು ನೀಡಿದ…

ನ್ಯೂಸ್ ಆ್ಯರೋ : ಅತ್ಯಾಚಾರ, ಕೊಲೆ ಬೆದರಿಕೆ ಪ್ರಕರಣದ ಆರೋಪಿ ಕೆ.ಎಸ್.ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿಗೆ ಮೈಸೂರಿನ ಆರನೇ ಹೆಚ್ಚುವರಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಪ್ರಕರಣದಲ್ಲಿ ಬಂಧಿತನಾಗಿ…

Leave a Reply

Your email address will not be published. Required fields are marked *