ದಶಕಕ್ಕೂ ಹೆಚ್ಚು ಕಾಲ ಬಾಳಿಕೆ ಬಂದ ಉಪಗ್ರಹ ಬೀಳಿಸೋಕೆ ಇಸ್ರೋ ಸಜ್ಜು – ಅನಾಹುತವಾಗದಂತೆ ತಪ್ಪಿಸಲು ಇಸ್ರೋ ಭರ್ಜರಿ ಪ್ಲ್ಯಾನ್….!!

ದಶಕಕ್ಕೂ ಹೆಚ್ಚು ಕಾಲ ಬಾಳಿಕೆ ಬಂದ ಉಪಗ್ರಹ ಬೀಳಿಸೋಕೆ ಇಸ್ರೋ ಸಜ್ಜು – ಅನಾಹುತವಾಗದಂತೆ ತಪ್ಪಿಸಲು ಇಸ್ರೋ ಭರ್ಜರಿ ಪ್ಲ್ಯಾನ್….!!

ನ್ಯೂಸ್ ಆ್ಯರೋ : ದಶಕಕ್ಕೂ ಹೆಚ್ಚು ಕಾಲ ಸೇವೆ ಸಲ್ಲಿಸಿ ಸದ್ಯ ಅಂತರಿಕ್ಷದಲ್ಲಿ ನಿರುಪಯುಕ್ತವಾಗಿರುವ ಉಪಗ್ರಹವೊಂದನ್ನು ಮರಳಿ ಭೂ ವಾತಾವರಣಕ್ಕೆ ತಂದು ಸಾಗರದಲ್ಲಿ ಬೀಳಿಸುವ ಅತ್ಯಂತ ಸವಾಲಿನ ಪ್ರಯೋಗವನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಇಂದು ಸಂಜೆ ನಡೆಸಲಿದೆ.

ಉಷ್ಣ ವಲಯದ ವಾತಾವರಣ ಹಾಗೂ ಹವಾಮಾನ ಅಧ್ಯಯನ ನಡೆಸಲು ಫ್ರಾನ್ಸ್‌ನ ಬಾಹ್ಯಾಕಾಶ ಸಂಸ್ಥೆ ಸಿಎನ್‌ಇಎಸ್‌ (CNES) ಜತೆಗೂಡಿ ಇಸ್ರೋ (ISRO) 2011ರ ಅಕ್ಟೋಬರ್‌ 12ರಂದು ಮೇಘ ಟ್ರಾಪಿಕ್ಸ್‌-1 (Megha-Tropiques-1) (MT1) ಎಂಬ ಕೆಳ ಭೂಕಕ್ಷೆ ಉಪಗ್ರಹವನ್ನು ಉಡಾವಣೆ ಮಾಡಿತ್ತು.

ಈ ಉಪಗ್ರಹದ ಜೀವಿತಾವಧಿ ಮೂರು ವರ್ಷಗಳಾಗಿತ್ತಾದರೂ, ಉಪಗ್ರಹ ಒಂದು ದಶಕ ಸೇವೆ ಸಲ್ಲಿಸಿದೆ. ಇದೀಗ ನಿರುಪಯುಕ್ತವಾಗಿರುವ 1 ಟನ್‌ ತೂಕದ ಉಪಗ್ರಹವನ್ನು ಮರಳಿ ಭೂಮಿಗೆ ತರಲು ಇಸ್ರೋ ಉದ್ದೇಶಿಸಿದೆ.

ಮೇಘ ಟ್ರಾಫಿಕ್ಸ್ 1 ಉಪಗ್ರಹದಲ್ಲಿ ಇನ್ನೂ ಕೂಡ125 ಕೆಜಿ ಇಂಧನವಿದ್ದು, ಮರಳಿ ಭೂಮಿಗೆ ಬರುವಾಗ ಎಡವಟ್ಟಾದರೆ ಅಪಾಯ ಸಂಭವಿಸುವ ಸಾಧ್ಯತೆ ಇದೆ. ಆದಾಗ್ಯೂ ಪೆಸಿಫಿಕ್‌ ಸಾಗರದಲ್ಲಿ ಜನವಸತಿ ಇಲ್ಲದ ಕಡೆ ಈ ಉಪಗ್ರಹವನ್ನು ಬೀಳಿಸಲು ಇಸ್ರೋ ಸಕಲ ಸಿದ್ಧತೆಗಳನ್ನೂ ಕೈಗೊಂಡಿದೆ.

ಉಪಗ್ರಹದಲ್ಲಿರುವ ಇಂಧನವು ಅದನ್ನು ಭೂ ವಾತಾವರಣಕ್ಕೆ ಮರುಪ್ರವೇಶ ಮಾಡಿಸಿ, ನಿಯಂತ್ರಿತ ರೀತಿಯಲ್ಲಿ ಉದ್ದೇಶಿತ ಸ್ಥಳದಲ್ಲಿ ಬೀಳಿಸಲು ಸಹಕಾರಿಯಾಗಲಿದೆ. ಇಂದು ಸಂಜೆ 4.30ರಿಂದ ರಾತ್ರಿ 7.30ರವರೆಗೆ ಈ ಕಾರ್ಯಾಚರಣೆಯನ್ನು ನಡೆಸಲು ಇಸ್ರೋ ಉದ್ದೇಶಿಸಿದ್ದು, ಈ ಕಾರ್ಯ ದೇಶದ ಜನರಲ್ಲಿ ಕುತೂಹಲಕ್ಕೆ ಕಾರಣವಾಗಿದೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *