ಸಾಧಕರೆಲ್ಲ ಓದಿದ್ದು ಸರ್ಕಾರಿ ಶಾಲೆಯಲ್ಲಿ ಎಂದ ರಿಷಬ್ – ಸರ್ಕಾರಿ ಶಾಲೆ ಉದ್ಘಾಟಿಸಿ ಪೋಷಕರಿಗೆ ಕಿವಿಮಾತು ಹೇಳಿದ್ದೇನು?
- ಮನರಂಜನೆ
- March 20, 2023
- No Comment
- 242
ನ್ಯೂಸ್ ಆ್ಯರೋ : ಸರ್ಕಾರಿ ಶಾಲೆ ಉಳಿವಿಗಾಗಿ ಮಕ್ಕಳು, ಗ್ರಾಮಸ್ಥರು ಹೋರಾಡುವ ಕಥೆಯನ್ನು ಸಿನಿಮಾ ಮಾಡಿ ಎಲ್ಲರ ಮನಸ್ಸನ್ನು ಗೆದ್ದಿದ್ದ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು ನಾನು ಕೂಡಾ ಸರ್ಕಾರಿ ಶಾಲೆಯ ವಿದ್ಯಾರ್ಥಿ ಎಂದು ನೆನಪಿಸಿಕೊಂಡಿದ್ದಾರೆ.
ಅವರು ಈಚೆಗೆ ಬೆಂಗಳೂರಿನ ಸುಬ್ರಮಣ್ಯ ನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು.
‘ನಾನು ಕೂಡಾ ಸರ್ಕಾರಿ ಶಾಲೆಯಲ್ಲಿ ಓದಿದ್ದು. ಸರ್ಕಾರಿ ಶಾಲೆಯನ್ನು ಪೋಷಕರು ತಾತ್ಸಾರ ಮಾಡುವುದು ಸರಿಯಲ್ಲ, ಏಕೆಂದರೆ ಬಹಳಷ್ಟು ಸಾಧಕರು ಓದಿದ್ದು ಸರ್ಕಾರಿ ಶಾಲೆಯಲ್ಲಿ’ ಎಂದರು.
ಕಾರ್ಯಕ್ರಮದಲ್ಲಿ ಮಲ್ಲೇಶ್ವರಂ ಶಾಸಕ ಅಶ್ವತ್ಥ ನಾರಾಯಣ, ಶ್ರೀ ಯದುಗಿರಿ ಯತಿರಾಜ ರಾಮಾನುಜ ಜೀಯರ್ ಸ್ವಾಮೀಜಿ, ಶಿಕ್ಷಣ ಫೌಂಡೇಶನ್ ಸಂಸ್ಥಾಪಕ ಪ್ರಸನ್ನ ಇದ್ದರು.
2018ರಲ್ಲಿ ರಿಷಬ್ ಶೆಟ್ಟಿ ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು’ ಎಂಬ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿ, ನಟಿಸಿದ್ದರು. ಈ ಚಿತ್ರದ ಮೂಲಕ ಅವರು ನಿರ್ಮಾಪಕನಾಗಿ ಕೂಡಾ ಗುರುತಿಸಿಕೊಂಡಿದ್ದರು.