ಬೆಳ್ಳಿ-ಬೊಮ್ಮನ್ ದಂಪತಿಯನ್ನ ಭೇಟಿ ಮಾಡಲಿದ್ದಾರೆ ಮೋದಿ – ‘ದಿ ಎಲಿಫೆಂಟ್ ವಿಸ್ಪರರ್ಸ್’ ಖ್ಯಾತಿಯ ಮಾವುತ ದಂಪತಿಗೆ ಪ್ರಧಾನಿ ಭೇಟಿ ಭಾಗ್ಯ..!!

ಬೆಳ್ಳಿ-ಬೊಮ್ಮನ್ ದಂಪತಿಯನ್ನ ಭೇಟಿ ಮಾಡಲಿದ್ದಾರೆ ಮೋದಿ – ‘ದಿ ಎಲಿಫೆಂಟ್ ವಿಸ್ಪರರ್ಸ್’ ಖ್ಯಾತಿಯ ಮಾವುತ ದಂಪತಿಗೆ ಪ್ರಧಾನಿ ಭೇಟಿ ಭಾಗ್ಯ..!!

ನ್ಯೂಸ್ ಆ್ಯರೋ : ಇತ್ತೀಚೆಗಷ್ಟೇ ಲಾಸ್ ಏಂಜಲೀಸ್ ನಲ್ಲಿ ಅಕಾಡೆಮಿ ಅವಾರ್ಡ್ಸ್ ಪ್ರಶಸ್ತಿ ಪ್ರಧಾನ ಸಮಾರಂಭ ಏರ್ಪಟ್ಟಿತ್ತು. ಆ ಕಾರ್ಯಕ್ರಮದಲ್ಲಿ ಭಾರತೀಯ ಮೂಲದ ‘ದಿ ಎಲಿಫೆಂಟ್ ವಿಸ್ಪರರ್ಸ್ ಸಾಕ್ಷ್ಯಚಿತ್ರ ಆಸ್ಕರ್ ಅವಾರ್ಡ್ ಗೆದ್ದು ಇತಿಹಾಸ ಬರೆದಿತ್ತು. ಈ ಸಾಕ್ಷ್ಯಚಿತ್ರದಲ್ಲಿ ನೋಡುಗ ಕಂಬನಿ ಮಿಡಿಯುವಂತೆ ಅನಾಥ ಕಾಡಾನೆ ಮರಿಯ ಪೋಷಕರಾಗಿ ನಟಿಸಿದ್ದು ಅಥವಾ ಜೀವಿಸಿದ್ದು ಬೆಳ್ಳಿ ಹಾಗೂ ಬೊಮ್ಮನ್. ಇದೀಗ ಈ ಮಾವುತ ದಂಪತಿಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗುವ ಅವಕಾಶ ಲಭಿಸಿದೆ.

ಹೌದು.. ಇತ್ತೀಚೆಗಷ್ಟೇ ಆಸ್ಕರ್ ಗೆದ್ದ ‘ಎಲಿಫೆಂಟ್ ವಿಸ್ಪರರ್ಸ್’ ಸಾಕ್ಷ್ಯಚಿತ್ರದ ನಿರ್ದೇಶಕಿ ಹಾಗೂ ನಿರ್ಮಾಪಕರನ್ನು ಪ್ರಧಾನಿಗಳು ಭೇಟಿ ಮಾಡಿ ಶುಭಾಶಯ ತಿಳಿಸಿದ್ದರು. ಇದೀಗ, ಅನಾಥ ಆನೆಗಳನ್ನು ಸಾಕುತ್ತಲೇ ಜೀವಿಸುತ್ತಿರುವ ಬೆಳ್ಳಿ-ಬೊಮ್ಮನ್ ದಂಪತಿಯನ್ನು ಮೋದಿ ಭೇಟಿ ಮಾಡಲಿದ್ದಾರೆ. ಅದಕ್ಕಾಗಿ ಅವರು ಏಪ್ರಿಲ್ 9ರಂದು ಮೋದಿ ತಮಿಳುನಾಡಿನ ಮುದುಮಲೈ ಹುಲಿ ಸಂರಕ್ಷಿತ ಅರಣ್ಯದ ತೆಪ್ಪಕಾಡು ಪ್ರದೇಶಕ್ಕೆ ಆಗಮಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನಲೆಯಲ್ಲಿ ತೆಪ್ಪಕಾಡು ಬುಡಕಟ್ಟು ಪ್ರದೇಶದಲ್ಲಿ ಭರ್ಜರಿ ಕಾಮಗಾರಿಗಳು ನಡೆಯುತ್ತಿವೆ. ವಿದ್ಯುತ್ ಬೆಳಕಿನ ಪರಿಚಯವೇ ಇಲ್ಲದ ಕಗ್ಗಾಡಿನಲ್ಲಿ ಇದೀಗ 30ಕ್ಕೂ ಅಧಿಕ ಕಂಬಗಳನ್ನು ನಿಲ್ಲಿಸಿ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ಜೊತೆಗೆ ರಸ್ತೆಗಳನ್ನು ನವೀಕರಿಸಲಾಗುತ್ತಿದೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *