ಕತಾರ್ ವಿಮಾನ ನಿಲ್ದಾಣದಲ್ಲಿ ಡಾಲರ್‌ನಂತೆ ರೂಪಾಯಿಗೂ ರಾಜಮರ್ಯಾದೆ – ಎಲ್ಲಾ ಕಡೆ ದೇಸಿ ಕರೆನ್ಸಿ ಬಳಕೆ, ಪ್ರಧಾನಿ ಮೋದಿಗೆ ಧನ್ಯವಾದ ಹೇಳಿದ ಗಾಯಕ ಮಿಕಾ ಸಿಂಗ್

ಕತಾರ್ ವಿಮಾನ ನಿಲ್ದಾಣದಲ್ಲಿ ಡಾಲರ್‌ನಂತೆ ರೂಪಾಯಿಗೂ ರಾಜಮರ್ಯಾದೆ – ಎಲ್ಲಾ ಕಡೆ ದೇಸಿ ಕರೆನ್ಸಿ ಬಳಕೆ, ಪ್ರಧಾನಿ ಮೋದಿಗೆ ಧನ್ಯವಾದ ಹೇಳಿದ ಗಾಯಕ ಮಿಕಾ ಸಿಂಗ್

ನ್ಯೂಸ್‌ ಆ್ಯರೋ : ಕತಾರ್‌ನ ಐಷಾರಾಮಿ ಮಳಿಗೆಯಲ್ಲಿ ಡಾಲರ್‌ನಂತೆ ಭಾರತೀಯ ಕರೆನ್ಸಿ ಬಳಸಿ, ಶಾಪಿಂಗ್ ಮಾಡಿರುವುದಾಗಿ ಹಾಡುಗಾರ ಮಿಕಾ ಸಿಂಗ್ ಟ್ವೀಟ್ ಮಾಡಿದ್ದಾರೆ.

ಡಾಲರ್‌ನಂತೆ ನಮ್ಮ ಭಾರತೀಯ ಹಣವನ್ನು ಬಳಸಿ ಶಾಪಿಂಗ್ ಮಾಡಲು ಅವಕಾಶ ಮಾಡಿಕೊಟ್ಟ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸೆಲ್ಯೂಟ್ ಎಂದು ಹೇಳಿದ್ದಾರೆ.

ಕತಾರ್ ವಿಮಾನ ನಿಲ್ದಾಣದಲ್ಲಿ ಡಾಲರ್‌ನಂತೆ ರೂಪಾಯಿ ಬಳಸಿ ಶಾಪಿಂಗ್ ಮಾಡಿರುವ ವಿಚಾರದ ಬಗ್ಗೆ ಮಿಕಾ ಸಿಂಗ್ ಟ್ವೀಟ್ ಮಾಡಿದ್ದಾರೆ. ಟ್ವೀಟ್‌ಗೆ ಸಾವಿರಾರು ಬಳಕೆದಾರರು ಲೈಕ್ಸ್ ಮಾಡಿದ್ದು, ಈ ವಿಷಯವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವುದನ್ನು ಸ್ವಾಗತಿಸಿದ್ದಾರೆ.

‘ಶುಭೋದಯ, ನನಗೆ ದೋಹಾ ವಿಮಾನ ನಿಲ್ದಾಣದಲ್ಲಿ ಮಾಲ್ ನಲ್ಲಿ ಶಾಪಿಂಗ್ ಮಾಡುವಾಗ ಭಾರತೀಯ ರೂಪಾಯಿಗಳನ್ನು ಬಳಸಲು ತುಂಬಾ ಹೆಮ್ಮೆ ಎನಿಸುತ್ತಿದೆ’ ಮಿಕಾ ಸಿಂಗ್ ಟ್ವೀಟ್‌ನಲ್ಲಿ ತಿಳಿಸಿದ್ದರು.

ಕುವೈತ್‌ನ ಶಾಪಿಂಗ್ ಮಾಲ್ ಮಾತ್ರವಲ್ಲ, ಯಾವುದೇ ರೆಸ್ಟೋರೆಂಟ್‌ನಲ್ಲಿಯೂ ರೂಪಾಯಿಯನ್ನು ಬಳಸಬಹುದಾಗಿದೆ. ಇದು ಅದ್ಭುತವಾದ ವಿಷಯವಲ್ಲವೇ? ನಮ್ಮ ಹಣವನ್ನು ಡಾಲರ್‌ನಂತೆ ಬಳಸಲು ಅನುವು ಮಾಡಿಕೊಟ್ಟ ಪ್ರಧಾನಿ ನರೇಂದ್ರ ಮೋದಿ ಸಾಬ್‌ಗೆ ಧನ್ಯವಾದಗಳು ಎಂದು ಅವರು ಟ್ವೀಟ್‌ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.

ಭಾರತೀಯ ಕರೆನ್ಸಿ ಇನ್ನಷ್ಟು ಬಲಿಷ್ಠವಾಗಿದೆ ಎಂದು ಟ್ವೀಟ್ ಬಳಕೆದಾರರೊಬ್ಬರು ತಿಳಿಸಿದ್ದು, ಇದು ನವ ಭಾರತದ ಶಕ್ತಿ ಎಂದು ಮತ್ತೊಬ್ಬರು ಟ್ವೀಟ್ ಮೂಲಕ ಸಂತಸ ವ್ಯಕ್ತಪಡಿಸಿದ್ದಾರೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *