ಹೊಸ ಸಿನಿಮಾಗೆ ಪ್ಲ್ಯಾನ್ ಮಾಡುತ್ತಿರುವಾಗಲೇ ಕಾಡಿದ ಯಮ – ‘ನಂದ ಲವ್ಸ್ ನಂದಿತಾ’ ಖ್ಯಾತಿಯ ಟಪೋರಿ ಸತ್ಯ ವಿಧಿವಶ

ಹೊಸ ಸಿನಿಮಾಗೆ ಪ್ಲ್ಯಾನ್ ಮಾಡುತ್ತಿರುವಾಗಲೇ ಕಾಡಿದ ಯಮ – ‘ನಂದ ಲವ್ಸ್ ನಂದಿತಾ’ ಖ್ಯಾತಿಯ ಟಪೋರಿ ಸತ್ಯ ವಿಧಿವಶ

ನ್ಯೂಸ್ ಆ್ಯರೋ : ಕನ್ನಡದ ಖ್ಯಾತ ನಿರ್ದೇಶಕ, ಸುಮಾರು 30ಕ್ಕೂ ಹೆಚ್ಚು ಕನ್ನಡ ಸಿನಿಮಾಗಳಲ್ಲಿ ಸಹ ಕಲಾವಿದನಾಗಿ ‌ನಟಿಸಿದ್ದ ಟಪೋರಿ ಸತ್ಯ(೪೬) ಅವರು ಕಳೆದ ರಾತ್ರಿ ವಿಧಿವಶರಾಗಿದ್ದಾರೆ.

ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಅವರಿಗೆ ಬೆಂಗಳೂರಿನ‌ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.‌ ಚಿಕಿತ್ಸೆಗೆ ಸ್ಪಂದಿಸದೆ ನಿನ್ನೆ ರಾತ್ರಿ‌ ಸತ್ಯ ಅವರು ಕೊನೆಯುಸಿರೆಳೆದಿದ್ದಾರೆ.

ಟಪೋರಿ ಸತ್ಯ ನಿಧನಕ್ಕೆ ಅವರ ಅಭಿಮಾನಿಗಳು ಮತ್ತು ಕುಟುಂಬಸ್ಥರು ಕಂಬನಿ ಮಿಡಿದಿದ್ದಾರೆ.

30ಕ್ಕೂ ಹೆಚ್ಚು ಕನ್ನಡ ಸಿನಿಮಾಗಳಲ್ಲಿ ಪೋಷಕ ಪಾತ್ರಗಳಲ್ಲಿ ನಟಿಸಿದ್ದ‌ ಇವರಿಗೆ, ಲೂಸ್ ಮಾದ ಮೊದಲ ಬಾರಿಗೆ ಯೋಗಿ ನಾಯಕನಾಗಿ ನಟಿಸಿದ್ದ ‘ನಂದ ಲವ್ಸ್ ನಂದಿತಾ’ ಜನಪ್ರಿಯತೆ ತಂದುಕೊಟ್ಟಿತ್ತು. ಈ ಸಿನಿಮಾದಲ್ಲಿ ಟಪೋರಿ ಸತ್ಯ ಕ್ವಾಟ್ರು ಅನ್ನೋ ಪಾತ್ರದಲ್ಲಿ ನಟಿಸಿ, ಎಲ್ಲರ‌ ಮೆಚ್ಚುಗೆಗೆ ಪಾತ್ರರಾಗಿದ್ದರು.

ಮೇಳ ಹೆಸರಿನ ಸಿನಿಮಾವನ್ನು ನಿರ್ದೇಶನ ಸಹ ಮಾಡಿದ್ದ ಅವರು ಇತ್ತೀಚೆಗೆ ಮತ್ತೊಂದು ಹೊಸ ಸಿನಿಮಾವನ್ನು ನಿರ್ದೇಶನ ಮಾಡುವ ಯೋಜನೆ ಹಾಕಿಕೊಂಡಿದ್ದರು.‌ ಆದರೆ‌ ಈಚೆಗೆ ಅವರ ಆರೋಗ್ಯ ಹದಗೆಟ್ಟು, ಆಸ್ಪತ್ರೆ ಸೇರಿದ್ದು‌ ಸದ್ಯ ಇಹಲೋಕ ತ್ಯಜಿಸಿದ್ದಾರೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *