ಇದ್ದಕ್ಕಿದ್ದಂತೆ ಎಎನ್ಐ ಸುದ್ದಿಸಂಸ್ಥೆಯ ಟ್ವಿಟರ್ ಖಾತೆ ಬ್ಲಾಕ್ – ಎಲಾನ್ ಮಸ್ಕ್ ಕೊಟ್ಟ ಕಾರಣ ಕೇಳಿದ್ರೆ ದಂಗಾಗ್ತಿರಾ..!!

ಇದ್ದಕ್ಕಿದ್ದಂತೆ ಎಎನ್ಐ ಸುದ್ದಿಸಂಸ್ಥೆಯ ಟ್ವಿಟರ್ ಖಾತೆ ಬ್ಲಾಕ್ – ಎಲಾನ್ ಮಸ್ಕ್ ಕೊಟ್ಟ ಕಾರಣ ಕೇಳಿದ್ರೆ ದಂಗಾಗ್ತಿರಾ..!!

ನ್ಯೂಸ್ ಆ್ಯರೋ : ಇತ್ತೀಚೆಗಷ್ಟೇ ಟ್ವಿಟರ್ ಮೇಲೆ ಅಧಿಪತ್ಯ ಸಾಧಿಸಿರುವ ಕುಬೇರ ಪುತ್ರ ಎಲಾನ್ ಮಸ್ಕ್ ಮೈಕ್ರೋ ಬ್ಲಾಗಿಂಗ್ ವೆಬ್ಸೈಟ್ ನಲ್ಲಿ ದಿನಕ್ಕೊಂದು ಬದಲಾವಣೆ, ನಿಯಮಗಳನ್ನು ತರುತ್ತಿದ್ದಾರೆ. ಇದೀಗ ದೇಶದ ಪ್ರಮುಖ ಸುದ್ದಿ ಸಂಸ್ಥೆಯಾದ ಎಎನ್ಐ (ANI) ಟ್ವಿಟ್ಟರ್ ಖಾತೆಯನ್ನು ಬ್ಲಾಕ್ ಮಾಡಲಾಗಿದ್ದು, ಇದಕ್ಕೆ ಕಂಪೆನಿ ಕೊಟ್ಟ ಉತ್ತರ ಕೇಳಿದ್ರೆ ನೀವು ಶಾಕ್ ಆಗ್ತೀರಾ..!!

ದೇಶದ ಪ್ರಮುಖ ಸುದ್ದಿ ಸಂಸ್ಥೆ ಎನಿಸಿಕೊಂಡಿರುವ ಎಎನ್ಐ ಟ್ವಿಟರ್ ಖಾತೆಯನ್ನು ಮೈಕ್ರೋ ಬ್ಲಾಗಿಂಗ್ ವೆಬ್ಸೈಟ್ ಇದ್ದಕ್ಕಿದ್ದಂತೆ ಬ್ಲಾಕ್ ಮಾಡಿದೆ‌. ಅನೇಕರು ಈ ಖಾತೆಯನ್ನು ಹುಡುಕಿದಾಗ ಲಭ್ಯವಿರಲಿಲ್ಲ. ಈ ಬಗ್ಗೆ ಎಎನ್ಐ ಎಡಿಟರ್ ಸ್ಮಿತಾ ಪ್ರಕಾಶ್ ವೈಯಕ್ತಿಕ ಟ್ವಿಟರ್ ಖಾತೆಯಿಂದ ಟ್ವೀಟ್ ಮಾಡಿದ್ದು, ‘ಎಎನ್ಐ ಅಧಿಕೃತ ಖಾತೆಯನ್ನು ಬ್ಲಾಕ್ ಮಾಡಲಾಗಿದ್ದು, ಖಾತೆ ರಚನೆಯಾಗಿ ಕನಿಷ್ಠ 13 ವರ್ಷವಾಗಿರಬೇಕು ಎಂದು ತಿಳಿಸಿದ್ದಾರೆ’ ಎಂದು ಬರೆದುಕೊಂಡಿದ್ದಾರೆ.

ಇದರ ಸ್ಕ್ರೀನ್‌ ಶಾಟ್ ಕೂಡ ಸ್ಮಿತಾ ಪ್ರಕಾಶ್ ತಮ್ಮ ವೈಯಕ್ತಿಕ ಖಾತೆಯಲ್ಲಿ ಹಂಚಿಕೊಂಡಿದ್ದು, ಎಲಾನ್ ಮಸ್ಕ್ ಅವರನ್ನು ಟ್ಯಾಗ್ ಮಾಡಿ ‘ನಾವು 13ವರ್ಷಗಳಿಂದ ಅಲ್ಲ, ಅದಕ್ಕಿಂತ ಹೆಚ್ಚಿನ ವರ್ಷದಿಂದ ಖಾತೆಯನ್ನು ಬಳಸುತ್ತಿದ್ದೇವೆ’ ಎಂದು ಬರೆದುಕೊಂಡಿದ್ದಾರೆ.

ಎಎನ್ಐ ಟ್ವಿಟ್ಟರ್ ನಲ್ಲಿ ‘ಎಎನ್ಐ ಭಾರತದ ನಂ.1 ಮಲ್ಟಿಮೀಡಿಯಾ ಸುದ್ದಿ ಸಂಸ್ಥೆ. ನಮ್ಮ ಸಂಸ್ಥೆಯು ANI-ಹಿಂದಿ, ANI-MP, ANI-ರಾಜಸ್ಥಾನ್, ANI UP, ಉತ್ತರಖಾಂಡ ಸೇರಿದಂತೆ ಇತರೆ ಟ್ವಿಟರ್ ಖಾತೆಗಳನ್ನು ನಿರ್ವಹಿಸುತ್ತಿದೆ’ ಎಂದು ಹೇಳಿಕೊಂಡಿದೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *