ಛತ್ರಪತಿ ಶಿವಾಜಿಯ ಸೊಸೆ ಪಾತ್ರಕ್ಕೆ ಆಯ್ಕೆಯಾದ ರಶ್ಮಿಕಾ ಮಂದಣ್ಣ – ಮರಾಠ ಸಾಮ್ರಾಜ್ಯದ ಮಹಾರಾಣಿಯಾಗಿ ಮೆರೆಯಲಿದ್ದಾರೆ ಕನ್ನಡತಿ..!

ಛತ್ರಪತಿ ಶಿವಾಜಿಯ ಸೊಸೆ ಪಾತ್ರಕ್ಕೆ ಆಯ್ಕೆಯಾದ ರಶ್ಮಿಕಾ ಮಂದಣ್ಣ – ಮರಾಠ ಸಾಮ್ರಾಜ್ಯದ ಮಹಾರಾಣಿಯಾಗಿ ಮೆರೆಯಲಿದ್ದಾರೆ ಕನ್ನಡತಿ..!

ನ್ಯೂಸ್ ಆ್ಯರೋ : ಕನ್ನಡದ ಕಿರಿಕ್ ಪಾರ್ಟಿ ಸಿನಿಮಾ ಮೂಲಕ ಸಿನಿ ಜರ್ನಿ ಆರಂಭಿಸಿದ ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಈಗಾಗಲೇ ಬಾಲಿವುಡ್‌ನ ಮೂರು ಚಿತ್ರಗಳಲ್ಲಿ ಬಣ್ಣ ಹಚ್ಚಿದ್ದಾರೆ. ಇದೀಗ ಅವರ ‘ಎನಿಮಲ್’ ಸಿನಿಮಾ ಬಿಡುಗಡೆಗೂ ಮುನ್ನ ಮತ್ತೊಂದು ಬಂಪರ್ ಅವಕಾಶ ರಶ್ಮಿಕಾರನ್ನ ಅರಸಿ ಬಂದಿದ್ದು, ಸದ್ಯದಲ್ಲೇ ಕನ್ನಡತಿ ರಶ್ಮಿಕಾ ಮಂದಣ್ಣ ತೆರೆಯ ಮೇಲೆ ಮರಾಠ ಸಾಮ್ರಾಜ್ಯ ಮಹಾರಾಣಿಯಾಗಿ ಮೆರೆಯಲಿದ್ದಾರೆ. ಈ ಬಿಗ್ ಬಜೆಟ್ ಸಿನಿಮಾ ಯಾವುದು? ನಿರ್ದೇಶಕ ಯಾರು? ರಶ್ಮಿಕಾ ಪಾತ್ರ ಹೇಗಿರಲಿದೆ? ಎಂಬೆಲ್ಲ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ.

ರಶ್ಮಿಕಾ ಮಂದಣ್ಣ ನಟನೆಯ ಹಿಂದಿ ಚಿತ್ರಗಳಾದ ಗುಡ್ ಬೈ, ಮಿಷನ್ ಮಜ್ನು ಚಿತ್ರಗಳು ಹೆಚ್ಚು ಸದ್ದು ಮಾಡದೇ ಇದ್ದರೂ ರಶ್ಮಿಕಾ ತಮ್ಮ ನಟನೆಯಿಂದ ಬಾಲಿವುಡ್ ಮನಗೆದ್ದಿದ್ದರು. ತಮ್ಮ ಮೊದಲ ಚಿತ್ರದಲ್ಲೇ ಬಿಗ್ ಬಿ ಮಗಳ ಪಾತ್ರದಲ್ಲಿ ನಟಿಸುವ ಬಂಪರ್ ಚಾನ್ಸ್ ಪಡೆದ ಇವರು ಸದ್ಯ, ಬಾಲಿವುಡ್ ಸೇರಿದಂತೆ ಹಲವು ಚಿತ್ರರಂಗದಲ್ಲಿ ಬ್ಯುಸಿ ಆಗಿದ್ದಾರೆ. ಇದರೊಂದಿಗೆ ಇದೀಗ ಬಾಲಿವುಡ್‌ನ ಮತ್ತೊಂದು ಅದ್ದೂರಿ ಸಿನಿಮಾದಲ್ಲಿ ನಟಿಸಲು ಆಯ್ಕೆಯಾಗಿದ್ದಾರೆ.

ಭಾರತೀಯ ಚರಿತ್ರೆ ಕಂಡ ಮಹಾ ಪರಾಕ್ರಮಿ ಛತ್ರಪತಿ ಶಿವಾಜಿ ಮಗ ಸಂಭಾಜಿಯ ಜೀವನ ಚರಿತ್ರೆಯನ್ನ ದೊಡ್ಡ ಮಟ್ಟದಲ್ಲಿ ಸಿನಿಮಾ ಮಾಡಲು ಬಾಲಿವುಡ್‌ನಲ್ಲಿ ತಯಾರಿ ನಡೆಯುತ್ತಿದೆ. ಈಗಾಗಲೇ ಸಂಭಾಜಿ ಪಾತ್ರಕ್ಕೆ ನಟ ವಿಕ್ಕಿ ಕೌಶಲ್ ಹಾಗೂ ಅವರ ಪತ್ನಿ ಯೇಸುಭಾಯಿ ಬೋಸ್ಲೆ ಪಾತ್ರಕ್ಕೆ ರಶ್ಮಿಕಾ ಮಂದಣ್ಣ ಅವರು ಆಯ್ಕೆಯಾಗಿದ್ದಾರೆ. ಈಗಾಗಲೇ ಯೇಸುಭಾಯಿ ಪಾತ್ರಕ್ಕೆ ರಶ್ಮಿಕಾ ಸಿದ್ದತೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಿನಿಮಾದ ಕತೆ ಏನು?

ಶಿವಾಜಿಯ ಮಗ ಸಂಭಾಜಿ ಬೇರೆ ರಾಜ್ಯಗಳಿಗೆ ದಂಡೆತ್ತಿ ಹೋದಾಗ ಯೇಸುಭಾಯಿ ಮರಾಠ ಸಾಮ್ರಾಜ್ಯವನ್ನ ಹೇಗೆ ನಿಭಾಯಿಸುತ್ತಿದ್ದರು, ಅವರು ಹೇಗೆ ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದರು ಎಂಬುದನ್ನು ಚಿತ್ರದಲ್ಲಿ ತೋರಿಸಲಾಗುತ್ತದೆ. ಈ ಚಿತ್ರಕ್ಕೆ ‘ಚಾವʼ ಎಂಬ ಟೈಟಲ್ ಇಡಲು ಚಿತ್ರತಂಡ ಪ್ಲ್ಯಾನ್ ಮಾಡಿದೆಯಂತೆ. ಈ ಹಿಂದೆ ಜಾಹೀರಾತೊಂದರಲ್ಲಿ ವಿಕ್ಕಿ- ರಶ್ಮಿಕಾ ಒಟ್ಟಿಗೆ ಕಾಣಿಸಿಕೊಂಡಿದ್ದರು. ಈ ಸಿನಿಮಾದಲ್ಲಿ ಜೋಡಿ ಹೇಗೆ ಮೋಡಿ ಮಾಡಲಿದೆ ಎಂಬುದನ್ನು ಕಾದು ನೋಡಬೇಕಾಗಿದೆ‌.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *