Adani Group : ಲಾಭದಲ್ಲಿ ಏರಿಕೆ ಕಂಡ ಅದಾನಿ ಗ್ರೀನ್ ಎನರ್ಜಿ ಲಿಮಿಟೆಡ್ – ಆದಾಯದಲ್ಲಿ ಎಷ್ಟು ಹೆಚ್ಚಳವಾಗಿದೆ ಗೊತ್ತಾ?

Adani Group : ಲಾಭದಲ್ಲಿ ಏರಿಕೆ ಕಂಡ ಅದಾನಿ ಗ್ರೀನ್ ಎನರ್ಜಿ ಲಿಮಿಟೆಡ್ – ಆದಾಯದಲ್ಲಿ ಎಷ್ಟು ಹೆಚ್ಚಳವಾಗಿದೆ ಗೊತ್ತಾ?

ನ್ಯೂಸ್ ಆ್ಯರೋ‌ : ಗ್ರೀನ್ ಎನರ್ಜಿ ಕ್ಷೇತ್ರದಲ್ಲಿ ಪ್ರಬಲವಾಗಿ ಬೆಳೆಯುತ್ತಿರುವ ಅದಾನಿ ಗ್ರೂಪ್‌ನ ಅದಾನಿ ಗ್ರೀನ್ ಎನರ್ಜಿ ಲಿಮಿಟೆಡ್ ಸೋಮವಾರ ನಾಲ್ಕನೇ ತ್ರೈಮಾಸಿಕದ ವರದಿ ಬಿಡುಗಡೆ ಮಾಡಿದ್ದು, ಸಂಸ್ಥೆಯ ನಿವ್ವಳ ಲಾಭವು 507 ಕೋಟಿ ರೂ.ಗೆ ತಲುಪಿದೆ. ಒಂದು ವರ್ಷಕ್ಕೂ ಹಿಂದೆ ನಿವ್ವಳ ಲಾಭವು 121 ಕೋಟಿ ರೂ. ಆಗಿತ್ತು. ಅಂದರೆ ಒಂದು ವರ್ಷದಲ್ಲೇ ಶೇ. 319ರಷ್ಟು ಜಿಗಿತ ಕಂಡಿದೆ.

2022ರ ನಾಲ್ಕನೇ ತ್ರೈಮಾಸಿಕದಲ್ಲಿ ಅದಾನಿ ಸಂಸ್ಥೆಯ ಒಟ್ಟು ಆದಾಯ(1,587 ಕೋಟಿ ರೂ.)ಕ್ಕೆ ಹೋಲಿಸಿದರೆ 2023ರ ನಾಲ್ಕನೇ ತ್ರೈಮಾಸಿಕದಲ್ಲಿ ಶೇ. 88ರಷ್ಟು ಏರಿಕೆ ಕಂಡಿದೆ. ಸಂಸ್ಥೆಯ ಆದಾಯ, ಇಬಿಐಟಿಡಿಎ ಮತ್ತು ನಗದು ಲಾಭದ ಬೆಳವಣಿಗೆಯು ಇಬಿಐಟಿಡಿಎ ಏರಿಕೆಗೆ ಕಾರಣವಾಗಿದೆ. ಶುಕ್ರವಾರ, ಬಿಎಸ್‌ಇಯಲ್ಲಿ ಅದಾನಿ ಗ್ರೀನ್ ಎನರ್ಜಿ 952 ರೂ.(ಶೇ. 3.8ರಷ್ಟು ಏರಿಕೆ)ಗೆ ತಲುಪಿದೆ.

ಅದಾನಿ ಸಮೂಹದ ಅಧ್ಯಕ್ಷ ಗೌತಮ್ ಅದಾನಿ ಪ್ರತಿಕ್ರಿಯಿಸಿ, “ನಮ್ಮ ವ್ಯವಹಾರ ಮಾದರಿಯು ಗಮನಾರ್ಹವಾಗಿ ಸ್ಥಿರತೆ ಕಾಯ್ದುಕೊಂಡಿದೆ. ಇದು ನಮ್ಮ ಬಲವಾದ ಆರ್ಥಿಕ ಕಾರ್ಯಕ್ಷಮತೆಯ ಸಾಕ್ಷಿಯಾಗಿದೆ. ಭಾರತಕ್ಕೆ ಗ್ರೀನ್ ಎನರ್ಜಿ ಪೂರೈಕೆಗೆ ಸಹಾಯ ಮಾಡಲು ನಾವು ಪ್ರಮುಖ ಪಾತ್ರ ವಹಿಸುತ್ತೇವೆ” ಎಂದಿದ್ದಾರೆ.

”ನಾವು ಈ ವರ್ಷ 2,676 ಮೆಗಾ ವ್ಯಾಟ್ ನವೀಕರಿಸಬಹುದಾದ ಬೃಹತ್ ಗ್ರೀನ್‌ಫೀಲ್ಡ್ ಸಾಮರ್ಥ್ಯವನ್ನು ಹೊಂದಿದ್ದೇವೆ. ಎಜಿಎಲ್‌ನ ಕಾರ್ಯಾಚರಣೆಯ ಸಾಮರ್ಥ್ಯವು ಐದು ವರ್ಷಗಳಲ್ಲಿ ಶೇ. 33ರಷ್ಟು ಬೆಳವಣಿಗೆ ಕಂಡಿದೆ” ಎಂದು ಅದಾನಿ ಗ್ರೀನ್ ಎನರ್ಜಿ ಲಿಮಿಟೆಡ್‌ನ ಎಂಡಿ, ಸಿಇಒ ವಿನೀತ್ ಎಸ್ ಜೈನ್ ತಿಳಿಸಿದ್ದಾರೆ. 2023ರ ಹಣಕಾಸು ವರ್ಷದಲ್ಲಿ ಇಂಧನ ಮಾರಾಟವು 14,880 ಮಿಲಿಯನ್ ಯುನಿಟ್‌ಗೆ ತಲುಪಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಪರಿಣಾಮ ಬೀರಿದ ಹಿಂಡನ್‌ಬರ್ಗ್ ವರದಿ

ವರ್ಷಾರಂಭ (ಜ. 24ರಂದು)ದಲ್ಲಿ ವರದಿ ಬಿಡುಗಡೆ ಮಾಡಿದ್ದ ಹಿಂಡನ್‌ಬರ್ಗ್, ಅದಾನಿ ಗ್ರೂಪ್ ಸ್ಟಾಕ್ ಮಾರುಕಟ್ಟೆಯಲ್ಲಿ ವಂಚನೆ ಮಾಡಿರುವ ಬಗ್ಗೆ ಆರೋಪಿಸಿತ್ತು. ನಾವು ಹಲವಾರು ದಾಖಲೆಗಳನ್ನು ಪರಿಶೀಲನೆ ಮಾಡಿದ್ದೇವೆ. 12ರಷ್ಟು ದೇಶಗಳಿಗೆ ಭೇಟಿ ನೀಡಿ ಸ್ವತಃ ಸ್ಥಳ ಪರಿಶೀಲನೆ ಮಾಡಿದ್ದು, ಅದಾನಿ ಗ್ರೂಪ್‌ ವಂಚನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ ಎಂದಿತ್ತು.

ಅದಾನಿ ಗ್ರೂಪ್ ವಂಚನೆಯಲ್ಲಿ ಭಾಗಿಯಾಗಿದೆ. ದಶಕಗಳಿಂದ ವಂಚನೆ ನಡೆಸುತ್ತಿದೆ. ಅದಾನಿ ಗ್ರೂಪ್‌ ಬಗ್ಗೆ ಸುಮಾರು ಎರಡು ವರ್ಷಗಳ ಕಾಲ ತನಿಖೆಯನ್ನು ನಡೆಸಿ ವರದಿ ನೀಡಲಾಗಿದೆ. ಅದಾನಿ ಗ್ರೂಪ್‌ನ ಹಲವಾರು ವ್ಯಕ್ತಿಗಳ ಸಂದರ್ಶನ ಮಾಡಲಾಗಿದೆ. ಮಾಜಿ ಹಿರಿಯ ಅಧಿಕಾರಿಗಳ ಸಂದರ್ಶನವನ್ನು ಕೂಡಾ ಮಾಡಲಾಗಿದೆ. ದಾಖಲೆಗಳು ನಮ್ಮಲ್ಲಿದೆ ಎಂದು ಹಿಂಡನ್‌ಬರ್ಗ್ ನೀಡಿದ ಹೇಳಿಕೆ ಸಂಚಲನ ಮೂಡಿಸಿತ್ತು.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *