ತಾನೂರ್ ದೋಣಿ ಅಪಘಾತ – ಸಾವಿನ ಸಂಖ್ಯೆ 22ಕ್ಕೆ ಏರಿಕೆ, ಘಟನೆಗೆ ಕಾರಣ ಏನು?

ತಾನೂರ್ ದೋಣಿ ಅಪಘಾತ – ಸಾವಿನ ಸಂಖ್ಯೆ 22ಕ್ಕೆ ಏರಿಕೆ, ಘಟನೆಗೆ ಕಾರಣ ಏನು?

ನ್ಯೂಸ್ ಆ್ಯರೋ‌ : ಕೇರಳದ ಮಲಪ್ಪುರಂ ಜಿಲ್ಲೆಯ ತೂವಲ್‌ ತೀರಮ್‌ ಕಡಲತೀರದಲ್ಲಿ ಭಾನುವಾರ ಸಾಯಂಕಾಲ ಸಂಭವಿಸಿದ ಬೋಟ್‌ ದುರಂತದಲ್ಲಿ ಸುಮಾರು 22 ಮಂದಿ ಮೃತಪಟ್ಟಿದ್ದಾರೆ. ಘಟನೆ ನಡೆದಾಗ ಹೌಸ್‌ಬೋಟ್‌ನಲ್ಲಿ ಸುಮಾರು 35 ಜನರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ರಜೆ ಅವಧಿಯಾಗಿದ್ದರಿಂದ ಇವರು ಪ್ರವಾಸಕ್ಕಾಗಿ ಆಗಮಿಸಿದ್ದರು.

ಸಂಜೆ 5 ಗಂಟೆ ಬಳಿಕ ಇಂಥ ಪ್ರವಾಸಿ ಬೋಟ್‌ಗಳ ಸಂಚಾರಕ್ಕೆ ನಿಷೇಧವಿದ್ದರೂ 2 ಅಂತಸ್ತು ಹೊಂದಿರುವ, ಕೇವಲ 2 ಬಾಗಿಲು ಹೊಂದಿರುವ ಹೌಸ್‌ಬೋಟ್‌ ಕಾರ್ಯಾಚರಣೆ ನಡೆಸುತ್ತಿತ್ತು. ಸಾಮರ್ಥ್ಯಕ್ಕಿಂತ ಹೆಚ್ಚು ಜನರನ್ನು ತುಂಬಿದ್ದ ಕಾರಣ ಸಂಜೆ ಸುಮಾರು 7.40ರ ವೇಳೆಗೆ ಏಕಾಏಕಿ ಬೋಟ್‌ ಮಗುಚಿಕೊಂಡು ದುರ್ಘಟನೆ ಸಂಭವಿಸಿದೆ. ಈ ದುರಂತದಲ್ಲಿ ಮಡಿದವರಿಗೆ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ವಿಪತ್ತು ನಿರ್ವಹಣಾ ಫಂಡ್‌ನಿಂದ 2 ಲಕ್ಷ ರೂ.ಗಳ ಪರಿಹಾರ ಘೋಷಿಸಿದ್ದಾರೆ. ಇತ್ತ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಡಿದ ಕುಟುಂಬಗಳಿಗೆ 10 ಲಕ್ಷ ರೂ. ಪರಿಹಾರದ ಭರವಸೆ ನೀಡಿದ್ದಾರೆ.

ಮೀನುಗಾರಿಕೆಗೆ ಬಳಸುತ್ತಿದ್ದ ಬೋಟನ್ನು ಪ್ರವಾಸಿ ಬೋಟನ್ನಾಗಿ ಪರಿವರ್ತಿಸಲಾಗಿದ್ದು, ಈ ವೇಳೆ ಯಾವ ನಿಯಮವನ್ನು ಪಾಲಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತಾನೂರ್ ನಿವಾಸಿ ನಾಸರ್ ಹೆಸರಿನಲ್ಲಿ ಬೋಟ್ ಇದ್ದು, ಆತನ ವಿರುದ್ಧ ದೂರು ದಾಖಲಿಸಲಾಗಿದೆ. ಸದ್ಯ ಆತ ತಲೆ ಮರೆಸಿಕೊಂಡಿದ್ದಾನೆ.

“ಮಲಪ್ಪುರಂನ ತಾನೂರ್ ದೋಣಿ ಅಪಘಾತದಲ್ಲಿ ಸಂಭವಿಸಿದ ದುರಂತದ ಜೀವಹಾನಿಯಿಂದ ತೀವ್ರ ದುಃಖವಾಗಿದೆ. ರಕ್ಷಣಾ ಕಾರ್ಯಾಚರಣೆಗಳನ್ನು ಪರಿಣಾಮಕಾರಿಯಾಗಿ ಸಂಘಟಿಸಲು ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಲಾಗಿದೆ. ಇದನ್ನು ಸಂಪುಟ ಸಚಿವರು ನೋಡಿಕೊಳ್ಳುತ್ತಿದ್ದಾರೆ. ದುಃಖದಲ್ಲಿರುವ ಕುಟುಂಬಗಳು ಮತ್ತು ಸ್ನೇಹಿತರಿಗೆ ಸಂತಾಪ” ಎಂದು ಪಿಣರಾಯಿ ವಿಜಯನ್ ಟ್ವೀಟ್‌ನಲ್ಲಿ ಹೇಳಿದ್ದಾರೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *