IPL 2023 : ಅರ್ಜುನ್ ತೆಂಡೂಲ್ಕರ್ ಗೆ ನಾಯಿ ಕಚ್ಚಿದೆ‌ಯಂತೆ – ಹೇಳಿದ್ಯಾರು? ಈ ವಿಡಿಯೋ ನೋಡಿ…

IPL 2023 : ಅರ್ಜುನ್ ತೆಂಡೂಲ್ಕರ್ ಗೆ ನಾಯಿ ಕಚ್ಚಿದೆ‌ಯಂತೆ – ಹೇಳಿದ್ಯಾರು? ಈ ವಿಡಿಯೋ ನೋಡಿ…

ನ್ಯೂಸ್ ಆ್ಯರೋ : ಈ ಬಾರಿಯ ಐಪಿಎಲ್ ನ ಬಹುತೇಕ ಪಂದ್ಯಗಳು ವೀಕ್ಷಕರಿಗೆ ಸಕತ್ ಥ್ರಿಲ್ ನೀಡಿದ್ದು, ಲೀಗ್ ನ ಕೊನೆಯ ಕೆಲವೇ ಪಂದ್ಯಗಳಿದ್ದರೂ ಪ್ಲೇ ಆಫ್ ಗೆ ಅರ್ಹತೆ ಯಾರಿಗೆ ಸಿಗಲಿದೆ ಎಂಬುದೇ ಕುತೂಹಲಕಾರಿಯಾಗಿದೆ. ಇಂದು ಸಂಜೆ ಮುಂಬೈ ಇಂಡಿಯನ್ಸ್ ತಂಡವು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಆಡಲಿದೆ. ಆದರೆ ಈ ಪಂದ್ಯಕ್ಕೂ ಮೊದಲು ಮುಂಬೈ ಇಂಡಿಯನ್ಸ್ ತಂಡದ ಬೌಲರ್ ಅರ್ಜುನ್ ತೆಂಡೂಲ್ಕರ್ ಅವರಿಗೆ ನಾಯಿ ಕಚ್ಚಿರುವ ಮಾಹಿತಿ ಲಭಿಸಿದೆ‌.

ಲಕ್ನೋ ವಿರುದ್ಧದ ಪಂದ್ಯಕ್ಕಾಗಿ ಈಗಾಗಲೇ ಮುಂಬಯಿ ಇಂಡಿಯನ್ಸ್ ತಂಡ ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣಕ್ಕೆ ಆಗಮಿಸಿದ್ದು ನೆಟ್ ಪ್ರ್ಯಾಕ್ಟೀಸ್ ಆರಂಭಿಸಿದೆ. ಈ ವೇಳೆ ಲಕ್ನೋ ತಂಡದ ಬೌಲರ್ ಗಳಾದ ಯುಧ್ವೀರ್ ಸಿಂಗ್ ಮತ್ತು ಮೊಹ್ಸೀನ್ ಖಾನ್ ಜತೆಗೆ ಮಾತನಾಡುವಾಗ ಅರ್ಜುನ್ ತೆಂಡೂಲ್ಕರ್ ತಮಗೆ ನಾಯಿ ಕಚ್ಚಿರುವ ಬಗ್ಗೆ ಹೇಳಿಕೊಂಡಿದ್ದಾರೆ.

ಕಳೆದೆರಡು ಸೀಸನ್ ನಲ್ಲಿ ಮುಂಬಯಿ ಇಂಡಿಯನ್ಸ್ ತಂಡದಲ್ಲಿದ್ದರೂ ಅರ್ಜುನ್ ತೆಂಡೂಲ್ಕರ್ ಯಾವುದೇ ಪಂದ್ಯದಲ್ಲಿ ಆಡಿರಲಿಲ್ಲ. ಆದರೆ ಎಡಗೈ ಮಧ್ಯಮ ವೇಗಿಯಾಗಿರುವ ಅರ್ಜುನ್ ತೆಂಡೂಲ್ಕರ್ ಅವರು ಈ ಸೀಸನ್ ನಲ್ಲಿ ಐಪಿಎಲ್ ಗೆ ಪದಾರ್ಪಣೆ ಮಾಡಿದ್ದಲ್ಲದೆ ಇಂಡಿಯನ್ಸ್ ಪರ ನಾಲ್ಕು ಪಂದ್ಯಗಳಲ್ಲಿ ಆಡಿದ್ದಾರೆ.

ಇದುವರೆಗೆ ಒಟ್ಟು 12 ಪಂದ್ಯಗಳಲ್ಲಿ ಏಳು ಪಂದ್ಯಗಳನ್ನು ಗೆದ್ದುಕೊಂಡಿರುವ ಮುಂಬೈ ಇಂಡಿಯನ್ಸ್ ತಂಡವು ಸದ್ಯ ಮೂರನೇ ಸ್ಥಾನದಲ್ಲಿದೆ. ಇಂದಿನ ಪಂದ್ಯ ಗೆದ್ದರೆ ಮುಂಬೈನ ಪ್ಲೇ ಆಫ್ ಸ್ಥಾನ ಬಹುತೇಕ ಖಚಿತವಾಗಲಿದ್ದು ಲಕ್ನೋ ಕೂಡ ಈ ಪಂದ್ಯ ಗೆದ್ದು ಪ್ಲೇ ಆಫ್ ಸ್ಥಾನ ಖಚಿತಪಡಿಸಿಕೊಳ್ಳಲು ಉತ್ಸುಕವಾಗಿದೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *