ದೇಶದಲ್ಲಿ ತಲೆಯೆತ್ತಲಿದೆ ಎಂಟು ಹೊಸ ನಗರಗಳು – ಕೇಂದ್ರ ಸರ್ಕಾರದ ಈ ಹೊಸ ಚಿಂತನೆಗೆ ಕಾರಣವೇನು?

ದೇಶದಲ್ಲಿ ತಲೆಯೆತ್ತಲಿದೆ ಎಂಟು ಹೊಸ ನಗರಗಳು – ಕೇಂದ್ರ ಸರ್ಕಾರದ ಈ ಹೊಸ ಚಿಂತನೆಗೆ ಕಾರಣವೇನು?

ನ್ಯೂಸ್ ಆ್ಯರೋ‌ : ದೇಶದಲ್ಲಿನ ಈಗಿರುವ ನಗರಗಳಲ್ಲಿ ಜನಸಂಖ್ಯೆ ಒತ್ತಡ ಹೆಚ್ಚಿ ಮೂಲ ಸೌಲಭ್ಯ ಒದಗಿಸುವುದು ಸೇರಿ ಅನೇಕ ಸಮಸ್ಯೆ ಎದುರಾಗುತ್ತಿದ್ದು, ಇದನ್ನು ತಪ್ಪಿಸಲು ಎಂಟು ಹೊಸ ನಗರಗಳನ್ನು ಅಭಿವೃದ್ಧಿ ಪಡಿಸಲು ಕೇಂದ್ರ ಸರಕಾರ ಚಿಂತನೆ ನಡೆಸಿದೆ. ಈ ಬಗ್ಗೆ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ದೇಶದಲ್ಲಿ ಹೊಸ ನಗರಗಳನ್ನು ಅಭಿವೃದ್ಧಿಪಡಿಸಬೇಕೆಂದು 15ನೇ ಹಣಕಾಸು ಆಯೋಗವು ಶಿಫಾರಸು ಮಾಡಿದೆ ಎಂದು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಇಲಾಖೆಯ ಜಿ 20 ಘಟಕದ ನಿರ್ದೇಶಕ ಎಂ.ಬಿ.ಸಿಂಗ್ ಹೇಳಿದ್ದಾರೆ.

26 ಹೊಸ ನಗರಗಳಿಗಾಗಿ ರಾಜ್ಯಗಳು ಕೇಂದ್ರಕ್ಕೆ ಪ್ರಸ್ತಾವ ಕಳುಹಿಸಿದ್ದು, ಪರಿಶೀಲನೆಯ ಬಳಿಕ ಎಂಟು ಹೊಸ ನಗರಗಳ ಅಭಿವೃದ್ಧಿ ಕುರಿತು ಚಿಂತನೆ ನಡೆಸಲಾಗುತ್ತಿದೆ. ಆದರೆ ಹೊಸ ನಗರಗಳು ಯಾವುವು, ಎಲ್ಲಿ ನಿರ್ಮಿಸಲಾಗುತ್ತಿದೆ, ಯಾವಾಗ ಕಾಮಗಾರಿ ಆರಂಭ? ಮುಂತಾದ ಪ್ರಶ್ನೆಗಳಿಗೆ ಸರಕಾರ ಸೂಕ್ತ ಸಮಯದಲ್ಲಿ ಉತ್ತರಿಸಲಿದೆ ಎಂದು ವಿವರಿಸಿದ್ದಾರೆ.

ಹೊಸ ನಗರಗಳನ್ನು ಅಭಿವೃದ್ಧಿ ಪಡಿಸಿದರೆ ಕನಿಷ್ಠ 200 ಕಿ.ಮೀ. ವ್ಯಾಪ್ತಿಯಲ್ಲಿ ಸಾಮಾಜಿಕ ಮತ್ತು ಆರ್ಥಿಕ ಚಟುವಟಿಕೆಗಳು ಹೆಚ್ಚಾಗುತ್ತವೆ. ಆದರೆ ಇನ್ನೂ ಹೊಸ ನಗರಗಳ ಸ್ಥಾಪನೆಗೆ ಆರ್ಥಿಕ ಮಾರ್ಗ ಸೂಚಿ ಅಂತಿಮಗೊಳಿಸಿಲ್ಲ ಎಂದು ಎಂ.ಬಿ.ಸಿಂಗ್ ತಿಳಿಸಿದ್ದಾರೆ.

Related post

11 ವರ್ಷಗಳ ದಾಂಪತ್ಯದಲ್ಲಿ ಬಿರುಕು; ಡಿವೋರ್ಸ್‌ ವಿಚಾರಕ್ಕೆ ಟ್ರೋಲ್‌ ಮಾಡಿದವರಿಗೆ ಖ್ಯಾತ ಸಂಗೀತ ನಿರ್ದೇಶಕ ಹೇಳಿದಿಷ್ಟು…!

11 ವರ್ಷಗಳ ದಾಂಪತ್ಯದಲ್ಲಿ ಬಿರುಕು; ಡಿವೋರ್ಸ್‌ ವಿಚಾರಕ್ಕೆ ಟ್ರೋಲ್‌ ಮಾಡಿದವರಿಗೆ ಖ್ಯಾತ…

ನ್ಯೂಸ್ ಆರೋ: ತಮಿಳಿನ ಖ್ಯಾತ ಮ್ಯೂಸಿಕ್ ಡೈರೆಕ್ಟರ್ ಜಿ.ವಿ ಪ್ರಕಾಶ್ ಕುಮಾರ್ ಈಗ ಸುದ್ದಿಯಲ್ಲಿದ್ದು,11 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಿದ ಬೆನ್ನಲ್ಲೇ ಅವರ ವೈಯುಕ್ತಿಕ ವಿಚಾರಗಳನ್ನು ಟ್ರೋಲ್ ಮಾಡಲಾಗುತ್ತಿದೆ.…
ದೇವರ ನಾಡಿನಲ್ಲಿ ಮತ್ತೊಮ್ಮೆ ವೈರಸ್ ಆತಂಕ; ಕೊರೊನಾ, ನಿಫಾ ಬಳಿಕ ಆತಂಕ ಹೆಚ್ಚಿಸಿದ ವೆಸ್ಟ್‌ನೈಲ್‌

ದೇವರ ನಾಡಿನಲ್ಲಿ ಮತ್ತೊಮ್ಮೆ ವೈರಸ್ ಆತಂಕ; ಕೊರೊನಾ, ನಿಫಾ ಬಳಿಕ ಆತಂಕ…

ನ್ಯೂಸ್ ಆರೋ: ಕೊರೋನಾ ವೈರಸ್ ನ ಆತಂಕ ಮುಗಿಯುತ್ತಿದ್ದಂತೆ ಇದೀಗ ಮತ್ತೆ ಹೊಸದೊಂದು ವೈರಸ್ ಪತ್ತೆಯಾಗಿದೆ. ದಿನಕಳೆದಂತೆ ನಾನಾರೀತಿಯ ವೈರಸ್‌ಗಳು ಸೃಷ್ಠಿಯಾಗುತ್ತಿದ್ದು ಆತಂಕ ಹೆಚ್ಚಾಗುತ್ತಿದೆ. ಕೆಲವು ದಿನಗಳ ಹಿಂದಷ್ಟೇ ನೆರೆಯ…
ಮನೆಕೆಲಸದಾಕೆಯಿಂದ ನಟಿ ಛಾಯಾ ಸಿಂಗ್ ತಾಯಿ ಮನೆಯಲ್ಲಿ ಚಿನ್ನಾಭರಣ ಕಳ್ಳತನ; 66 ಗ್ರಾಂ ಚಿನ್ನ, 150 ಗ್ರಾಂ ಬೆಳ್ಳಿ ವಶ

ಮನೆಕೆಲಸದಾಕೆಯಿಂದ ನಟಿ ಛಾಯಾ ಸಿಂಗ್ ತಾಯಿ ಮನೆಯಲ್ಲಿ ಚಿನ್ನಾಭರಣ ಕಳ್ಳತನ; 66 ಗ್ರಾಂ…

ನ್ಯೂಸ್ ಆರೋ: ಕನ್ನಡ ಹಾಗೂ ಪರಭಾಷೆಯ ಸಿನಿಮಾಗಳಲ್ಲೂ ಮಿಂಚಿರುವ ನಟಿ ಛಾಯಾ ಸಿಂಗ್ ಅವರ ತಾಯಿ ಮನೆಯಲ್ಲಿ ಕಳ್ಳತನ ನಡೆದಿದೆ. ಚಿನ್ನಾಭರಣ ಕಳುವಾಗಿರುವ ಬಗ್ಗೆ ಛಾಯಾ ಸಿಂಗ್ ತಾಯಿ…

Leave a Reply

Your email address will not be published. Required fields are marked *