ಎರಡು ತಿಂಗಳ ಕಾಲ ಮಾಂಸಾಹಾರ ತ್ಯಜಿಸಿದ್ದ ಸಿದ್ದರಾಮಯ್ಯ – ನಾಟಿ ಕೋಳಿ, ರಾಗಿಮುದ್ದೆ ಪ್ರಿಯ ನಾನ್ ವೆಜ್ ಬಿಟ್ಟಿದ್ದೇಕೆ?

ಎರಡು ತಿಂಗಳ ಕಾಲ ಮಾಂಸಾಹಾರ ತ್ಯಜಿಸಿದ್ದ ಸಿದ್ದರಾಮಯ್ಯ – ನಾಟಿ ಕೋಳಿ, ರಾಗಿಮುದ್ದೆ ಪ್ರಿಯ ನಾನ್ ವೆಜ್ ಬಿಟ್ಟಿದ್ದೇಕೆ?

ನ್ಯೂಸ್ ಆ್ಯರೋ‌ : ಕರ್ನಾಟಕದಲ್ಲಿ ಕಾಂಗ್ರೆಸ್ ಪೂರ್ಣ ಬಹುಮತ ಪಡೆಯಲು ಕಾರಣಕರ್ತರಾದವರಲ್ಲಿ ಒಬ್ಬರಾದ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಅವರ ಆಡಳಿತಕ್ಕೆ ಮುಹೂರ್ತವೂ ನಿಗದಿಯಾಗಿದೆ. ನಾಳೆ (ಮೇ 20) ಮಧ್ಯಾಹ್ನ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದೀಗ ಸಿದ್ದರಾಮಯ್ಯ ಅವರ ಬಗ್ಗೆ ಕುತೂಹಲಕರ ಮಾಹಿತಿಯೊಂದು ಹೊರ ಬಿದ್ದಿದೆ. ಮಾಂಸಾಹಾರ ಪ್ರಿಯರಾದ ಸಿದ್ದರಾಮಯ್ಯ ಚುನಾವಣೆ ಸಂದರ್ಭದಲ್ಲಿ ಎರಡು ತಿಂಗಳ ಕಾಲ ಮಾಂಸಾಹಾರ ತ್ಯಜಿಸಿದ್ದರಂತೆ. ಅದು ಯಾಕೆ ಎನ್ನುವುದರ ಮಾಹಿತಿ ಇಲ್ಲಿದೆ.

ವಾರಕ್ಕೆರಡು ಬಾರಿ ನಾಟಿ ಕೋಳಿ ಸಾರು ರಾಗಿಮುದ್ದೆ ತಿನ್ನುವ ಅವರು ಪ್ರಚಾರದ ಸಂದರ್ಭದಲ್ಲಿ ಬರೀ ಸಸ್ಯಾಹಾರವನ್ನು ಮಾತ್ರ ಸೇವಿಸುತ್ತಿದ್ದರು. ಇದನ್ನು ಸ್ವತಃ ಸಿದ್ಧರಾಮಯ್ಯ ಅವರೇ ಹೇಳಿಕೊಂಡಿದ್ದಾರೆ. ಚುನಾವಣೆ ಸಂದರ್ಭದಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಪ್ರವಾಸ ಮಾಡಬೇಕಾಗಿದ್ದರಿಂದ ಅನಿವಾರ್ಯವಾಗಿ ಮಾಂಸಾಹಾರ ಬಿಡಬೇಕಾಯಿತು. ಆರೋಗ್ಯದಲ್ಲಿ ಕೂಡ ಏರುಪೇರಾಗಿದ್ದರಿಂದ ಮುಂಜಾಗ್ರತಾ ಕ್ರಮವಾಗಿ ಮಾಂಸ ತಿನ್ನುವುದನ್ನು ಬಿಟ್ಟಿದ್ದೆ ಎಂದು ವಿವರಿಸಿದ್ದಾರೆ.

ಸಿದ್ದರಾಮಯ್ಯ ಪ್ರಚಾರಕ್ಕಾಗಿ ಸಾವಿರಾರು ಕಿ.ಮೀ. ದೂರದವರೆಗೆ ಪ್ರಯಾಣ ಮಾಡುತ್ತಿದ್ದರು. ಪ್ರತಿ ಊರಿನಲ್ಲಿ ಸಮಾವೇಶಗಳು, ಗಂಟೆಗಟ್ಟಲೆ ಭಾಷಣ, ಚುನಾವಣಾ ರ್‍ಯಾಲಿ ಇರುತ್ತಿದ್ದ ಕಾರಣ ವೈದ್ಯರ ಸಲಹೆಯಂತೆ ಸಿದ್ದರಾಮಯ್ಯ ನಾಟಿ ಕೋಳಿ ತಿನ್ನುವುದನ್ನು ಬಿಟ್ಟಿದ್ದರು.

ಮಾಂಸಾಹಾರ ತಿನ್ನುವುದರಿಂದ ಹೆಚ್ಚಿನ ಪ್ರವಾಸ ಮಾಡಲು ಕಷ್ಟವಾಗುತ್ತದೆ, ಹೆಚ್ಚಾಗಿ ಸುಸ್ತಾಗುತ್ತದೆ. ಚುನಾವಣೆಯಲ್ಲಿ ನಿರತರಾಗಿದ್ದರಿಂದ ವ್ಯಾಯಾಮ ಮಾಡಲು ಕೂಡ ಸಮಯ ಸಿಗದೇ ಇರುವ ಮಾಂಸಾಹಾರ ಬಿಟ್ಟಿದ್ದೆ. ಮೈಸೂರಿನಲ್ಲಿ ಪ್ರಚಾರದ ಸಂದರ್ಭದಲ್ಲಿ ಆಪ್ತರ ಮನೆಯಲ್ಲಿ ಕೂಡ ನಾಟಿಕೋಳಿ ಸಾರಿನಲ್ಲಿ ಊಟ ಮಾಡದೆ ಬಂದಿದ್ದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ. ಇದೀಗ ರಿಲ್ಯಾಕ್ಸ್ ಮೂಡ್ ನಲ್ಲಿರುವ ಅವರು ದೆಹಲಿಗೆ ತೆರಳಿದ್ದ ಸಂದರ್ಭದಲ್ಲಿ ತಮ್ಮ ನೆಚ್ಚಿನ ಮಾಂಸಾಹಾರವನ್ನು ಸವಿದಿದ್ದಾರೆ.

Related post

11 ವರ್ಷಗಳ ದಾಂಪತ್ಯದಲ್ಲಿ ಬಿರುಕು; ಡಿವೋರ್ಸ್‌ ವಿಚಾರಕ್ಕೆ ಟ್ರೋಲ್‌ ಮಾಡಿದವರಿಗೆ ಖ್ಯಾತ ಸಂಗೀತ ನಿರ್ದೇಶಕ ಹೇಳಿದಿಷ್ಟು…!

11 ವರ್ಷಗಳ ದಾಂಪತ್ಯದಲ್ಲಿ ಬಿರುಕು; ಡಿವೋರ್ಸ್‌ ವಿಚಾರಕ್ಕೆ ಟ್ರೋಲ್‌ ಮಾಡಿದವರಿಗೆ ಖ್ಯಾತ…

ನ್ಯೂಸ್ ಆರೋ: ತಮಿಳಿನ ಖ್ಯಾತ ಮ್ಯೂಸಿಕ್ ಡೈರೆಕ್ಟರ್ ಜಿ.ವಿ ಪ್ರಕಾಶ್ ಕುಮಾರ್ ಈಗ ಸುದ್ದಿಯಲ್ಲಿದ್ದು,11 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಿದ ಬೆನ್ನಲ್ಲೇ ಅವರ ವೈಯುಕ್ತಿಕ ವಿಚಾರಗಳನ್ನು ಟ್ರೋಲ್ ಮಾಡಲಾಗುತ್ತಿದೆ.…
ದೇವರ ನಾಡಿನಲ್ಲಿ ಮತ್ತೊಮ್ಮೆ ವೈರಸ್ ಆತಂಕ; ಕೊರೊನಾ, ನಿಫಾ ಬಳಿಕ ಆತಂಕ ಹೆಚ್ಚಿಸಿದ ವೆಸ್ಟ್‌ನೈಲ್‌

ದೇವರ ನಾಡಿನಲ್ಲಿ ಮತ್ತೊಮ್ಮೆ ವೈರಸ್ ಆತಂಕ; ಕೊರೊನಾ, ನಿಫಾ ಬಳಿಕ ಆತಂಕ…

ನ್ಯೂಸ್ ಆರೋ: ಕೊರೋನಾ ವೈರಸ್ ನ ಆತಂಕ ಮುಗಿಯುತ್ತಿದ್ದಂತೆ ಇದೀಗ ಮತ್ತೆ ಹೊಸದೊಂದು ವೈರಸ್ ಪತ್ತೆಯಾಗಿದೆ. ದಿನಕಳೆದಂತೆ ನಾನಾರೀತಿಯ ವೈರಸ್‌ಗಳು ಸೃಷ್ಠಿಯಾಗುತ್ತಿದ್ದು ಆತಂಕ ಹೆಚ್ಚಾಗುತ್ತಿದೆ. ಕೆಲವು ದಿನಗಳ ಹಿಂದಷ್ಟೇ ನೆರೆಯ…
ಮನೆಕೆಲಸದಾಕೆಯಿಂದ ನಟಿ ಛಾಯಾ ಸಿಂಗ್ ತಾಯಿ ಮನೆಯಲ್ಲಿ ಚಿನ್ನಾಭರಣ ಕಳ್ಳತನ; 66 ಗ್ರಾಂ ಚಿನ್ನ, 150 ಗ್ರಾಂ ಬೆಳ್ಳಿ ವಶ

ಮನೆಕೆಲಸದಾಕೆಯಿಂದ ನಟಿ ಛಾಯಾ ಸಿಂಗ್ ತಾಯಿ ಮನೆಯಲ್ಲಿ ಚಿನ್ನಾಭರಣ ಕಳ್ಳತನ; 66 ಗ್ರಾಂ…

ನ್ಯೂಸ್ ಆರೋ: ಕನ್ನಡ ಹಾಗೂ ಪರಭಾಷೆಯ ಸಿನಿಮಾಗಳಲ್ಲೂ ಮಿಂಚಿರುವ ನಟಿ ಛಾಯಾ ಸಿಂಗ್ ಅವರ ತಾಯಿ ಮನೆಯಲ್ಲಿ ಕಳ್ಳತನ ನಡೆದಿದೆ. ಚಿನ್ನಾಭರಣ ಕಳುವಾಗಿರುವ ಬಗ್ಗೆ ಛಾಯಾ ಸಿಂಗ್ ತಾಯಿ…

Leave a Reply

Your email address will not be published. Required fields are marked *