6 ರಿಂದ 10 ಡಿಗ್ರಿಗಳಷ್ಟು ವಾಲುತ್ತಿದೆ ತುಂಗನಾಥ ದೇವಾಲಯ – ವಿಶ್ವದ ಅತಿ ಎತ್ತರದ ಶಿವನ ದೇವಸ್ಥಾನಕ್ಕೆ ಏನಾಯಿತು?

6 ರಿಂದ 10 ಡಿಗ್ರಿಗಳಷ್ಟು ವಾಲುತ್ತಿದೆ ತುಂಗನಾಥ ದೇವಾಲಯ – ವಿಶ್ವದ ಅತಿ ಎತ್ತರದ ಶಿವನ ದೇವಸ್ಥಾನಕ್ಕೆ ಏನಾಯಿತು?

ನ್ಯೂಸ್ ಆ್ಯರೋ‌ : ಡೆಹ್ರಾಡೂನ್‌ನ ರುದ್ರಪ್ರಯಾಗ ಜಿಲ್ಲೆಯಲ್ಲಿರುವ ವಿಶ್ವದ ಅತಿ ಎತ್ತರದ ಶಿವನ ತುಂಗನಾಥ ದೇವಾಲಯವು ವಾಲುತ್ತಿದೆ ಎಂದು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ತಿಳಿಸಿದೆ. ಈ ತುಂಗನಾಥ ದೇವಾಲಯವು ಸುಮಾರು 12,800 ಅಡಿ ಎತ್ತರದಲ್ಲಿ ಉತ್ತರಾಭಿಮುಖವಾಗಿ ನೆಲೆಸಿದೆ.

ಸದ್ಯ ಈ ದೇವಾಲಯ 5-6 ಡಿಗ್ರಿಗಳಷ್ಟು ಅಥವಾ ಸಂಕೀರ್ಣದ ಸಣ್ಣ ರಚನೆಗಳಲ್ಲಿ 10 ಡಿಗ್ರಿಗಳಷ್ಟು ವಾಲುತ್ತಿದೆ ಎಂದು ಎಎಸ್‌ಐ ಅಧಿಕಾರಿಗಳು ಹೇಳಿದ್ದಾರೆ. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ. ದೇಗುಲವನ್ನು ಸಂರಕ್ಷಿತ ಸ್ಮಾರಕ ಪಟ್ಟಿಗೆ ಸೇರಿಸಲು ಅಧಿಕಾರಿಗಳು ಸಲಹೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಪ್ರಾಮುಖ್ಯತೆಯ ಸ್ಮಾರಕ ಎಂದು ಘೋಷಿಸುವ ಪ್ರಕ್ರಿಯೆಯನ್ನು ಸರ್ಕಾರ ಪ್ರಾರಂಭಿಸಿದ್ದು, ಸಾರ್ವಜನಿಕರಿಂದ ಆಕ್ಷೇಪಣೆಗಳನ್ನು ಕೋರಿ ಅಧಿಸೂಚನೆಯನ್ನು ಹೊರಡಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತುಂಗನಾಥ ದೇವಸ್ಥಾನ ಕುಸಿಯಬಹುದಾದ ಸಾಧ್ಯತೆಯನ್ನು ಅಧಿಕಾರಿಗಳು ತಳ್ಳಿ ಹಾಕಿಲ್ಲ. ಈ ಬಗ್ಗೆ ಮಾತನಾಡಿರುವ ಎಎಸ್‌ಐನ ಡೆಹ್ರಾಡೂನ್ ಸರ್ಕಲ್‌ನ ಅಧೀಕ್ಷಕ ಪುರಾತತ್ವಶಾಸ್ತ್ರಜ್ಞ ಮನೋಜ್ ಕುಮಾರ್ ಸಕ್ಸೇನಾ, “ಮೊದಲು, ಹಾನಿಯ ಮೂಲ ಕಾರಣವನ್ನು ಕಂಡುಹಿಡಿದು ಅದನ್ನು ತಕ್ಷಣ ಸರಿಪಡಿಸಲು ಸಾಧ್ಯವಾದರೆ ಅದನ್ನು ಮಾಡುತ್ತೇವೆ. ಅಲ್ಲದೆ, ದೇಗುಲವನ್ನು ಕೂಲಂಕಷವಾಗಿ ಪರಿಶೀಲಿಸಿದ ನಂತರ ವಿವರವಾದ ಮಾಹಿತಿ ನೀಡುತ್ತೇವೆ” ಎಂದು ಹೇಳಿದ್ದಾರೆ. ಅಗತ್ಯವಿದ್ದರೆ ತಜ್ಞರೊಂದಿಗೆ ಸಮಾಲೋಚನೆ ನಡೆಸಿದ ನಂತರ ಹಾನಿಗೊಳಗಾದ ಅಡಿಪಾಯವನ್ನು ಬದಲಾಯಿಸಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ.

ದೇಗುಲದ ಇತಿಹಾಸ

ಈ ದೇಗುಲವನ್ನು 8ನೇ ಶತಮಾನದಲ್ಲಿ ಕಟ್ಯೂರಿ ಅರಸರು ನಿರ್ಮಿಸಿದರು ಎನ್ನುತ್ತದೆ ಇತಿಹಾಸ. ಈ ದೇವಾಲಯವು ಮಹಾಭಾರತದ ವೀರರಾದ ಪಾಂಡವರಿಗೆ ಸಂಬಂಧಿಸಿದ ದಂತಕಥೆಯನ್ನು ಸಹ ಹೊಂದಿದೆ. ಇಲ್ಲಿನ ಹವಾಮಾನವು ಸಾಮಾನ್ಯವಾಗಿ ವರ್ಷವಿಡೀ ತಂಪಾಗಿರುತ್ತದೆ. ಸರಾಸರಿ ತಾಪಮಾನವು ಹಗಲಿನಲ್ಲಿ ಸುಮಾರು 16 ಡಿಗ್ರಿ ಸೆಲ್ಸಿಯಸ್ ಇರುತ್ತದೆ. ಭಾರೀ ಹಿಮಪಾತದಿಂದಾಗಿ ಚಳಿಗಾಲದಲ್ಲಿ ತುಂಗನಾಥ ದೇವಾಲಯವು ಸುಮಾರು 6 ತಿಂಗಳ ಕಾಲ ಮುಚ್ಚಿರುತ್ತದೆ. ಅಂದಹಾಗೆ ಈ ದೇವಾಲಯದ ಅರ್ಚಕರು ದಕ್ಷಿಣ ಭಾರತ ಮೂಲದವರಾಗಿದ್ದಾರೆ. ಶತಮಾನದಲ್ಲಿ ಶಂಕರಾಚಾರ್ಯರು ಸ್ಥಾಪಿಸಿದ ಸಂಪ್ರದಾಯ ಇದು ಎನ್ನಲಾಗಿದೆ.

ತುಂಗನಾಥ ದೇವಾಲಯವು ಬದ್ರಿ ಕೇದಾರ್ ದೇವಾಲಯ ಸಮಿತಿ (ಬಿಕೆಟಿಸಿ)ಯ ಆಡಳಿತದಲ್ಲಿದೆ. “ದೇವಾಲಯ ವಾಲಿರುವುದು ಹಾಗೂ ಈ ಕುರಿತು ಸರ್ಕಾರಕ್ಕೆ ನೀಡಿರುವ ಸಲಹೆಗಳ ಕುರಿತಾಗಿ ಬಿಕೆಟಿಸಿಗೆ ಪತ್ರವನ್ನೂ ಕಳುಹಿಸಲಾಗಿದೆ. ಆದರೆ ನಮಗೆ ಇನ್ನೂ ಪ್ರತಿಕ್ರಿಯೆ ಬಂದಿಲ್ಲ” ಎಂದು ಸಕ್ಸೇನಾ ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಬಿಕೆಟಿಸಿ ಅಧ್ಯಕ್ಷ ಅಜೇಂದ್ರ ಅಜಯ್, “ಈ ವಿಷಯವನ್ನು ಇತ್ತೀಚೆಗೆ ಮಂಡಳಿಯ ಸಭೆಯಲ್ಲಿ ಚರ್ಚಿಸಲಾಗಿದೆ. ಅಲ್ಲಿ ಎಲ್ಲಾ ಮಧ್ಯಸ್ಥಗಾರರು ಪುರಾತತ್ವ ಇಲಾಖೆಯ ಪ್ರತಿಪಾದನೆಯನ್ನು ತಿರಸ್ಕರಿಸಿದ್ದಾರೆ. ದೇವಾಲಯವನ್ನು ಅವರಿಗೆ ಹಸ್ತಾಂತರಿಸದೇ ಅದರ ಮೂಲ ಸ್ವರೂಪ ಮರುಸ್ಥಾಪಿಸಲು ನಾವು ಅವರ ಸಹಾಯವನ್ನು ತೆಗೆದುಕೊಳ್ಳಲು ಸಿದ್ಧರಿದ್ದೇವೆ” ಎಂದಿದ್ದಾರೆ.

Related post

11 ವರ್ಷಗಳ ದಾಂಪತ್ಯದಲ್ಲಿ ಬಿರುಕು; ಡಿವೋರ್ಸ್‌ ವಿಚಾರಕ್ಕೆ ಟ್ರೋಲ್‌ ಮಾಡಿದವರಿಗೆ ಖ್ಯಾತ ಸಂಗೀತ ನಿರ್ದೇಶಕ ಹೇಳಿದಿಷ್ಟು…!

11 ವರ್ಷಗಳ ದಾಂಪತ್ಯದಲ್ಲಿ ಬಿರುಕು; ಡಿವೋರ್ಸ್‌ ವಿಚಾರಕ್ಕೆ ಟ್ರೋಲ್‌ ಮಾಡಿದವರಿಗೆ ಖ್ಯಾತ…

ನ್ಯೂಸ್ ಆರೋ: ತಮಿಳಿನ ಖ್ಯಾತ ಮ್ಯೂಸಿಕ್ ಡೈರೆಕ್ಟರ್ ಜಿ.ವಿ ಪ್ರಕಾಶ್ ಕುಮಾರ್ ಈಗ ಸುದ್ದಿಯಲ್ಲಿದ್ದು,11 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಿದ ಬೆನ್ನಲ್ಲೇ ಅವರ ವೈಯುಕ್ತಿಕ ವಿಚಾರಗಳನ್ನು ಟ್ರೋಲ್ ಮಾಡಲಾಗುತ್ತಿದೆ.…
ದೇವರ ನಾಡಿನಲ್ಲಿ ಮತ್ತೊಮ್ಮೆ ವೈರಸ್ ಆತಂಕ; ಕೊರೊನಾ, ನಿಫಾ ಬಳಿಕ ಆತಂಕ ಹೆಚ್ಚಿಸಿದ ವೆಸ್ಟ್‌ನೈಲ್‌

ದೇವರ ನಾಡಿನಲ್ಲಿ ಮತ್ತೊಮ್ಮೆ ವೈರಸ್ ಆತಂಕ; ಕೊರೊನಾ, ನಿಫಾ ಬಳಿಕ ಆತಂಕ…

ನ್ಯೂಸ್ ಆರೋ: ಕೊರೋನಾ ವೈರಸ್ ನ ಆತಂಕ ಮುಗಿಯುತ್ತಿದ್ದಂತೆ ಇದೀಗ ಮತ್ತೆ ಹೊಸದೊಂದು ವೈರಸ್ ಪತ್ತೆಯಾಗಿದೆ. ದಿನಕಳೆದಂತೆ ನಾನಾರೀತಿಯ ವೈರಸ್‌ಗಳು ಸೃಷ್ಠಿಯಾಗುತ್ತಿದ್ದು ಆತಂಕ ಹೆಚ್ಚಾಗುತ್ತಿದೆ. ಕೆಲವು ದಿನಗಳ ಹಿಂದಷ್ಟೇ ನೆರೆಯ…
ಮನೆಕೆಲಸದಾಕೆಯಿಂದ ನಟಿ ಛಾಯಾ ಸಿಂಗ್ ತಾಯಿ ಮನೆಯಲ್ಲಿ ಚಿನ್ನಾಭರಣ ಕಳ್ಳತನ; 66 ಗ್ರಾಂ ಚಿನ್ನ, 150 ಗ್ರಾಂ ಬೆಳ್ಳಿ ವಶ

ಮನೆಕೆಲಸದಾಕೆಯಿಂದ ನಟಿ ಛಾಯಾ ಸಿಂಗ್ ತಾಯಿ ಮನೆಯಲ್ಲಿ ಚಿನ್ನಾಭರಣ ಕಳ್ಳತನ; 66 ಗ್ರಾಂ…

ನ್ಯೂಸ್ ಆರೋ: ಕನ್ನಡ ಹಾಗೂ ಪರಭಾಷೆಯ ಸಿನಿಮಾಗಳಲ್ಲೂ ಮಿಂಚಿರುವ ನಟಿ ಛಾಯಾ ಸಿಂಗ್ ಅವರ ತಾಯಿ ಮನೆಯಲ್ಲಿ ಕಳ್ಳತನ ನಡೆದಿದೆ. ಚಿನ್ನಾಭರಣ ಕಳುವಾಗಿರುವ ಬಗ್ಗೆ ಛಾಯಾ ಸಿಂಗ್ ತಾಯಿ…

Leave a Reply

Your email address will not be published. Required fields are marked *