ರಾಜಕೀಯ ಬಿಟ್ಟು ಮೈದಾನಕ್ಕೆ ಬಂದ ಡಿಸಿಎಂ ಡಿ.ಕೆ.ಶಿವಕುಮಾರ್ – RCB vs GT ಪಂದ್ಯದ ಬಳಿಕ ಟ್ವೀಟ್ ಮಾಡಿ ಹೇಳಿದ್ದೇನು?
- ರಾಜಕೀಯ
- May 22, 2023
- No Comment
- 591
ನ್ಯೂಸ್ ಆ್ಯರೋ : ಐಪಿಎಲ್ನ ಲೀಗ್ ಹಂತದ ಪಂದ್ಯಗಳಿಗೆ ರೋಚಕ ಅಂತ್ಯ ಸಿಕ್ಕಿದೆ. ಇನ್ನು ಏನಿದ್ದರೂ ಪ್ಲೇ ಆಫ್ ಪಂದ್ಯಗಳ ಹೋರಾಟ. ನಿನ್ನೆ (ರವಿವಾರ) ಲೀಗ್ ಹಂತದ ಕೊನೆಯ ಪಂದ್ಯ ಬೆಂಗಳೂರಿನ ಎಂ.ಚಿನ್ನಸ್ವಾಮಿ ಮೈದಾನದಲ್ಲಿ ನಡೆಯಿತು. ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ ನಡುವಿನ ಈ ರೋಚಕ ಪಂದ್ಯಕ್ಕೆ ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಾಕ್ಷಿಯಾಗಿದ್ದರು.
ಬಿಡುವಿಲ್ಲದ ಚಟುವಟಿಕೆಗಳ ನಡುವೆಯೂ ಡಿಕೆಶಿ ತಮ್ಮ ಕಿರಿಯ ಪುತ್ರಿ ಆಭರಣ ಜೊತೆ ಆಗಮಿಸಿ ಪಂದ್ಯ ವೀಕ್ಷಿಸಿದರು. ಈ ಫೋಟೋವನ್ನು ಅವರು ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
”ಬಿಡುವಿಲ್ಲದ ರಾಜಕೀಯ ಚಟುವಟಿಕೆಗಳ ನಂತರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್ಸಿಬಿ ಹಾಗೂ ಜಿಟಿ ನಡುವಿನ ರೋಚಕ #IPL ಪಂದ್ಯ ವೀಕ್ಷಿಸಿದೆ. ನಮ್ಮ ಹುಡುಗರು ಈ ಸಾರಿ ಸೋತಿರಬಹುದು. ಆದರೆ ಅತ್ಯುತ್ತಮ ಆಟದಿಂದ ಎಲ್ಲರ ಹೃದಯ ಗೆದ್ದಿದ್ದಾರೆ. ಏನೇ ಆದ್ರು ನನ್ನ ಫೇವರಿಟ್ ಆರ್ಸಿಬಿ ಕಪ್ ನಮ್ಮದಾಗುವ ಸಮಯ ಬಂದೇ ಬರುತ್ತೆ. ನಿರಾಸೆ ಬೇಡ, ಆಶಾವಾದವಿರಲಿ” ಎಂದು ಬರೆದು ನೆಚ್ಚಿನ ತಂಡಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಡಿಕೆಶಿ ಫೋಟೋಗಳಿಗೆ ಆರ್.ಸಿ.ಬಿ. ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಇತ್ತ ಡಿಕೆಶಿ ಡಿಸಿಎಂ ಆಗಿ ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸುವ ಮುನ್ನ ಮೆಟ್ಟಿಲುಗಳಿಗೆ ನಮಿಸಿದ್ದಾರೆ. ಈ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.