ಉದಯೋನ್ಮುಖ ಧಾರಾವಾಹಿ ನಟಿ ವೈಭವಿ ಇನ್ನಿಲ್ಲ – ಭೀಕರ ಅಪಘಾತಕ್ಕೆ ಸಿಲುಕಿ ದಾರುಣ ಸಾವು

ಉದಯೋನ್ಮುಖ ಧಾರಾವಾಹಿ ನಟಿ ವೈಭವಿ ಇನ್ನಿಲ್ಲ – ಭೀಕರ ಅಪಘಾತಕ್ಕೆ ಸಿಲುಕಿ ದಾರುಣ ಸಾವು

ನ್ಯೂಸ್ ಆ್ಯರೋ‌ : ಧಾರಾವಾಹಿಯಿಂದಲೇ ಗುರುತಸಿಕೊಂಡಿದ್ದ ನಟಿ ವೈಭವಿ ಉಪಾಧ್ಯಾಯ ಅವರು ಮಂಗಳವಾರ ಹಿಮಾಚಲ ಪ್ರದೇಶದದಲ್ಲಿ ನಡೆದ ಕಾರು ಅಪಘಾತದಲ್ಲಿ ಮೃತ ಪಟ್ಟಿದ್ದಾರೆ. ಅವರಿಗೆ 32 ವರ್ಷ ವಯಸ್ಸಾಗಿತ್ತು. ಇಂದು ಮೃತದೇಹವನ್ನು ಮುಂಬಯಿಗೆ ತಂದು ಅಂತ್ಯ ಸಂಸ್ಕಾರ ನಡೆಸಲಾಗುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಗೆಳೆಯನ ಜೊತೆಯಲ್ಲಿ ವೈಭವಿ ಉಪಾಧ್ಯಾಯ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೆ ಒಳಗಾಗಿತ್ತು ಎಂದು ವರದಿ ತಿಳಿಸಿದೆ. ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.

‘ಸಾರಾಭಾಯಿ ವರ್ಸಸ್ ಸಾರಾಭಾಯಿ’ ಧಾರಾವಾಹಿಯಲ್ಲಿ ವೈಭವಿ ನಟಿಸಿದ್ದರು. ಈ ಧಾರಾವಾಹಿಯಲ್ಲಿ ಜಾಸ್ಮೀನ್ ಪಾತ್ರ ಅವರಿಗೆ ಅಪಾರ ಹೆಸರು ತಂದು ಕೊಟ್ಟಿತ್ತು. ಜೊತೆಗೆ ದೀಪಿಕಾ ಪಡುಕೋಣೆ ನಿರ್ಮಿಸಿ, ನಟಿಸಿದ ‘ಛಪಾಕ್’ ಚಿತ್ರದಲ್ಲಿ ಅಭಿನಯಿಸುವ ಮೂಲಕ ವೈಭವಿ ಬಾಲಿವುಡ್ ಗೆ ಕಾಲಿಟ್ಟಿದ್ದರು.

ನಿರ್ಮಾಪಕ ಜೆಡಿ ಮಜೇಥಿಯಾ ಟ್ವೀಟ್ ಮಾಡಿ, ”ಜೀವನವು ತುಂಬಾ ಅನಿರೀಕ್ಷಿತವಾಗಿದೆ. ಸಾರಾಭಾಯ್ ವರ್ಸಸ್ ಸಾರಾಭಾಯಿಯಲ್ಲಿ ಜಾಸ್ಮಿನ್ ಪಾತ್ರ ನಿರ್ವಹಿಸಿದ ಉತ್ತಮ ನಟಿ, ಆತ್ಮೀಯ ಸ್ನೇಹಿತೆ ವೈಭವಿ ಉಪಾಧ್ಯಾಯ ನಿಧನರಾದರು” ಎಂದು ನೋವು ಹಂಚಿಕೊಂಡಿದ್ದಾರೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *