ಜಲಾಶಯಕ್ಕೆ ಕೈ ಜಾರಿ ಬಿತ್ತು ಲಕ್ಷ ರೂಪಾಯಿ ಬೆಲೆಯ ಮೊಬೈಲ್ – ಜಲಾಶಯದ 41 ಲಕ್ಷ ಲೀಟರ್ ನೀರನ್ನು ಹೊರತೆಗೆಸಿದ ಅಧಿಕಾರಿ ಸಸ್ಪೆಂಡ್, ಏನಿದು ಘಟನೆ?

ಜಲಾಶಯಕ್ಕೆ ಕೈ ಜಾರಿ ಬಿತ್ತು ಲಕ್ಷ ರೂಪಾಯಿ ಬೆಲೆಯ ಮೊಬೈಲ್ – ಜಲಾಶಯದ 41 ಲಕ್ಷ ಲೀಟರ್ ನೀರನ್ನು ಹೊರತೆಗೆಸಿದ ಅಧಿಕಾರಿ ಸಸ್ಪೆಂಡ್, ಏನಿದು ಘಟನೆ?

ನ್ಯೂಸ್ ಆ್ಯರೋ : ಸರಕಾರಿ ಅಧಿಕಾರಿಯೊಬ್ಬ ಜಲಾಶಯದಲ್ಲಿ ಬಿದ್ದಿದ್ದ ತನ್ನ ದುಬಾರಿ ಮೊಬೈಲ್ ಫೋನ್ ಅನ್ನು ಮರುಪಡೆಯುವುದಕ್ಕಾಗಿ ಜಲಾಶಯದಿಂದ ಬರೋಬ್ಬರಿ 41 ಲಕ್ಷ ಲೀಟರ್ ನೀರನ್ನು ಪಂಪ್ ಮಾಡುವ ಮೂಲಕ ಖಾಲಿ ಮಾಡಿರುವ ಘಟನೆ‌ ಛತ್ತೀಸ್ಗಢದಲ್ಲಿ ನಡೆದಿದೆ.

ಛತ್ತೀಸ್ಗಢದ ಕಂಕೇರ್ ಜಿಲ್ಲೆಯ ಕೊಯಿಲಿಬೀಡಾ ಬ್ಲಾಕ್‌ನ ಆಹಾರ ಅಧಿಕಾರಿ ರಾಜೇಶ್ ವಿಶ್ವಾಸ್ ಅವರು ಖೇರ್ಕಟ್ಟಾ ಅಣೆಕಟ್ಟಿನಲ್ಲಿ ಕುಳಿತು ರಜೆಯನ್ನು ಆನಂದಿಸುತ್ತಿದ್ದಾಗ ಆಕಸ್ಮಿಕವಾಗಿ 1 ಲಕ್ಷ ರೂ. ಮೌಲ್ಯದ ಸ್ಮಾರ್ಟ್‌ಫೋನ್ 15 ಅಡಿ ಆಳದ ನೀರಿನಿಂದ ತುಂಬಿರುವ ಪ್ರದೇಶದಲ್ಲಿ ಬಿದ್ದಿದೆ. ನಂತರ ಸ್ಥಳೀಯರು ಧುಮುಕಿದರೂ ಮೊಬೈಲ್ ಪತ್ತೆಯಾಗಿಲ್ಲ. ಆದ್ದರಿಂದ ಅಧಿಕಾರಿಯು ಮೂರು ದಿನಗಳ ಕಾಲ ನಿರಂತರವಾಗಿ ಎರಡು 30hp ಡೀಸೆಲ್ ಪಂಪ್‌ಗಳನ್ನು ಬಳಸಿ 41 ಲಕ್ಷ ಲೀಟರ್ ನೀರನ್ನು ಖಾಲಿ ಮಾಡಿದ್ದಾರೆ ಎನ್ನಲಾಗಿದೆ.

ಒಟ್ಟಾರೆ ಮೂರು ದಿನಗಳ ಕಾಲ ಅಂದರೆ ಸೋಮವಾರ ಸಂಜೆಯಿಂದ ಗುರುವಾರದವರೆಗೆ ಪಂಪ್ ಬಳಸಿ ನೀರು ಹೊರ ತೆಗೆಯಲಾಗಿದೆ. ಅಂತಿಮವಾಗಿ ದೂರಿನ ಮೇರೆಗೆ ನೀರಾವರಿ ಮತ್ತು ಜಲಸಂಪನ್ಮೂಲ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ತಡೆದಿದ್ದಾರೆ. ಆದರೆ, ಅದಾಗಲೇ ಆರು ಅಡಿ ಆಳದವರೆಗೆ ಅಂದರೆ ಸುಮಾರು 21 ಲಕ್ಷ ಲೀಟರ್ ನೀರನ್ನು ಅದಾಗಲೇ ಪಂಪ್ ಮಾಡಲಾಗಿತ್ತು. ಘಟನೆಯ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಅಧಿಕಾರಿಯನ್ನು ಸಸ್ಪೆಂಡ್ ಮಾಡಲಾಗಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ರಾಜೇಶ್ ‘ನೀರು ಬಳಕೆಗೆ ಯೋಗ್ಯವಾಗಿಲ್ಲ. ಜೊತೆಗೆ ಸ್ಥಳೀಯ ಉಪವಿಭಾಗಾಧಿಕಾರಿಯಿಂದ ಪೂರ್ವ ಮೌಖಿಕ ಅನುಮತಿಯನ್ನು ಪಡೆದಿದ್ದೆ’ ಎಂದು ತಿಳಿಸಿದ್ದಾರೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *