ಸಾವಲ್ಲೂ ಜೊತೆಯಾದ ಅಪರೂಪದ ಬಾಳ ಸಂಗಾತಿ – ಅಮೆರಿಕದಲ್ಲಿ ಸಾವಿಗೀಡಾದ ಪತಿಯ ಅಂತ್ಯಕ್ರಿಯೆ ಬಳಿಕ ಪತ್ನಿ ಭಾರತದಲ್ಲಿ ಆತ್ಮಹತ್ಯೆ..!!

ಸಾವಲ್ಲೂ ಜೊತೆಯಾದ ಅಪರೂಪದ ಬಾಳ ಸಂಗಾತಿ – ಅಮೆರಿಕದಲ್ಲಿ ಸಾವಿಗೀಡಾದ ಪತಿಯ ಅಂತ್ಯಕ್ರಿಯೆ ಬಳಿಕ ಪತ್ನಿ ಭಾರತದಲ್ಲಿ ಆತ್ಮಹತ್ಯೆ..!!

ನ್ಯೂಸ್ ಆ್ಯರೋ‌ : ಅಮೆರಿಕದಲ್ಲಿ ಪತಿ ಹೃದಯಾಘಾತದಿಂದ ಮೃತಪಟ್ಟರೆ ಇತ್ತ ಭಾರತದಲ್ಲಿ ದುಃಖ ತಡೆಯಲಾರದೆ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೋಜ್ (31) ಮತ್ತು ಸಾಹಿತಿ (29) ಮೃತ ದಂಪತಿ.

ಘಟನೆಯ ವಿವರ :

ಅಂಬರಪೇಟೆಯ ಡಿಡಿ ಕಾಲನಿ ನಿವಾಸಿ ಸಾಹಿತಿ ಒಂದೂವರೆ ವರ್ಷದ ಹಿಂದೆ ವನಸ್ಥಳಿಪುರಂ ಮೂಲದ ಸಾಫ್ಟ್​ವೇರ್​ ಎಂಜಿನಿಯರ್​ ಮನೋಜ್​ ಎಂಬವರನ್ನು ಮದುವೆ ಆಗಿದ್ದರು. ಮದುವೆ ಬಳಿಕ ಇಬ್ಬರು ಅಮೆರಿಕದ ದಲ್ಲಾಸ್​ನಲ್ಲಿ ನೆಲೆಸಿದ್ದರು. ಮೇ 2ರಂದು ಸಾಹಿತಿ ತನ್ನ ಪಾಲಕರನ್ನು ನೋಡಲೆಂದು ಅಮೆರಿಕದಿಂದ ಮರಳಿದ್ದರೆ, ಮನೋಜ್​ ಅಮೆರಿಕದಲ್ಲೇ ಉಳಿದುಕೊಂಡಿದ್ದರು.

ಮೇ 20ರಂದು ಮನೋಜ್​ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮೇ 23ರಂದು ಮೃತದೇಹವನ್ನು ಅಮೆರಿಕದಿಂದ ವನಸ್ಥಳಿಪುರಂಗೆ ತರಿಸಿಕೊಳ್ಳಲಾಯಿತು. ಮೇ 24ರಂದು ಪತಿಯ ಅಂತ್ಯಕ್ರಿಯೆ ಮುಗಿಸಿ ಅದೇ ದಿನ ರಾತ್ರಿ ತನ್ನ ಪಾಲಕರ ಮನೆಗೆ ಸಾಹಿತಿ ಹಿಂತಿರುಗಿದ್ದರು. ಸಾಹಿತಿಯು ಸಹೋದರಿ ಸಂಜನಾ ಜೊತೆ ಕೋಣೆಯಲ್ಲಿ ಮಲಗಿದ್ದರು. ಸಂಜನಾ ಬೆಳಗ್ಗೆ ವಾಶ್​ರೂಮ್​ಗೆ ತೆರಳಿದಾಗ ಎದ್ದ ಸಾಹಿತಿ ರೂಮಿನ ಬಾಗಿಲನ್ನು ಲಾಕ್​ ಮಾಡಿ, ಫ್ಯಾನಿಗೆ ಸೀರೆ ಕಟ್ಟಿ ನೇಣು ಬಿಗಿದುಕೊಂಡಿದ್ದಾರೆ.

ಈ ವಿಚಾರ ಗೊತ್ತಾದ ತಕ್ಷಣ ರೂಮಿನ ಬಾಗಿಲು ಒಡೆದು ಆಕೆಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಸಾಹಿತಿಯನ್ನು ಪರೀಕ್ಷಿಸಿದ ವೈದ್ಯರು ಆಕೆ ಅಷ್ಟರಲ್ಲಾಗಲೇ ಮೃತಪಟ್ಟಿರುವುದಾಗಿ ಖಚಿತಪಡಿಸಿದರು.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *