ಪ್ರವೀಣ್ ನೆಟ್ಟಾರು ಪತ್ನಿ ಉದ್ಯೋಗಕ್ಕೆ ಮರುನೇಮಕ ಎಂದ ಸಿದ್ದರಾಮಯ್ಯ – ಮಾಜಿ ಸಿಎಂ ಬೊಮ್ಮಾಯಿ ಆದೇಶದಲ್ಲೇ ಎಡವಟ್ಟು, ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಪ್ರವೀಣ್ ನೆಟ್ಟಾರು ಪತ್ನಿ ಉದ್ಯೋಗಕ್ಕೆ ಮರುನೇಮಕ ಎಂದ ಸಿದ್ದರಾಮಯ್ಯ – ಮಾಜಿ ಸಿಎಂ ಬೊಮ್ಮಾಯಿ ಆದೇಶದಲ್ಲೇ ಎಡವಟ್ಟು, ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ನ್ಯೂಸ್ ಆ್ಯರೋ‌ : ದುಷ್ಕರ್ಮಿಗಳಿಂದ ಕೊಲೆಯಾದ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಅವರ ಉದ್ಯೋಗಕ್ಕೆ ಕತ್ತರಿ ಬಿದ್ದ ಬೆನ್ನಲ್ಲೇ ರಾಜ್ಯಾದ್ಯಂತ ಹೊಸ ಸರ್ಕಾರದ ವಿರುದ್ಧ ಟೀಕೆಗಳು ‌ಕೇಳಿಬಂದಿತ್ತು.‌ ಇದೀಗ ಸರ್ಕಾರ ನೂತನ ಕುಮಾರಿ ಅವರನ್ನು ಮರುನೇಮಕ ಮಾಡೋದಾಗಿ ಸಿದ್ದರಾಮಯ್ಯ ಟ್ವೀಟ್ ಮೂಲಕ ‌ಬಹಿರಂಗಪಡಿಸಿದ್ದಾರೆ‌.

ಹೊಸ ಸರ್ಕಾರ ಬಂದ ನಂತರ ಹಿಂದಿನ ಸರ್ಕಾರ ನೇಮಕ ಮಾಡಿಕೊಂಡಿದ್ದ ತಾತ್ಕಾಲಿಕ ನೌಕರರನ್ನು ಸರ್ಕಾರಿ ಸೇವೆಯಿಂದ ವಜಾ ಮಾಡುವುದು ಒಂದು ಸಹಜ ಪ್ರಕ್ರಿಯೆ. ಪ್ರವೀಣ್ ನೆಟ್ಟಾರು ಅವರ ಪತ್ನಿ ಮಾತ್ರವಲ್ಲ ಸುಮಾರು 150ಕ್ಕೂ ಹೆಚ್ಚು ಗುತ್ತಿಗೆ ನೌಕರರನ್ನು ಈಗಾಗಲೇ ಸೇವೆಯಿಂದ ವಜಾ ಮಾಡಲಾಗಿದೆ. ಇದರಲ್ಲಿ ಸರ್ಕಾರದ ಯಾವುದೇ ಹಸ್ತಕ್ಷೇಪವಿಲ್ಲ.

ಇದನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಮಾನವೀಯತೆ ಆಧಾರದಲ್ಲಿ ನೂತನ ಕುಮಾರಿ ಅವರ ಮರು ನೇಮಕ ಮಾಡಲಾಗುವುದು ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಸಿದ್ದರಾಮಯ್ಯ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ನೂತನ ಕುಮಾರಿ ಅವರ ಉದ್ಯೋಗ ಕಡಿತಗೊಳಿಸಲಾಗಿದೆ ಎಂಬ ಸುದ್ದಿ ಹಲವರನ್ನು ಕೆರಳಿಸಿತ್ತು. ಆದರೆ ಇದು ಮಾಜಿ ಸಿಎಂ ಬೊಮ್ಮಾಯಿ ಅವರದ್ದೇ ಆದೇಶದಲ್ಲಿ ಲೋಪವಿರುವುದು ಎಲ್ಲರ ಗಮನಕ್ಕೆ ಬಂದಿರಲಿಲ್ಲ. ಮಾಜಿ ಸಿಎಂ ಬೊಮ್ಮಾಯಿ ತಮ್ಮ‌ ಅಧಿಕಾರಾವಧಿವರೆಗೆ ಮಾತ್ರವೇ ಈ ಹುದ್ದೆ ಇರಲಿದೆ ಎಂಬ ಆದೇಶ ಹೊರಡಿಸಿದ್ದು ನೂತನ ಕುಮಾರಿ ಅವರ ಉದ್ಯೋಗ ಕೈತಪ್ಪುವಂತೆ ಮಾಡಿತ್ತು.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *