ಐಪಿಎಲ್ 16ರ ಚಾಂಪಿಯನ್ ಚೆನ್ನೈಗೆ ಸಿಕ್ಕ ಬಹುಮಾನದ ಮೊತ್ತ ಎಷ್ಟು? – ಈ ಸೀಸನ್ ನಲ್ಲಿ ನೀಡಲಾದ ಬಹುಮಾನಗಳ ಸಂಪೂರ್ಣ ವಿವರ ಇಲ್ಲಿದೆ..

ಐಪಿಎಲ್ 16ರ ಚಾಂಪಿಯನ್ ಚೆನ್ನೈಗೆ ಸಿಕ್ಕ ಬಹುಮಾನದ ಮೊತ್ತ ಎಷ್ಟು? – ಈ ಸೀಸನ್ ನಲ್ಲಿ ನೀಡಲಾದ ಬಹುಮಾನಗಳ ಸಂಪೂರ್ಣ ವಿವರ ಇಲ್ಲಿದೆ..

ನ್ಯೂಸ್ ಆ್ಯರೋ‌ : ನಿಗದಿಗಿಂತ ಒಂದು ದಿನ ತಡವಾಗಿ ಐಪಿಎಲ್ 16ನೇ ಆವೃತ್ತಿಗೆ ತೆರೆ ಬಿದ್ದಿದೆ. ಹಿಂದಿನ ಚಾಂಪಿಯನ್ ಗುಜರಾತ್ ಟೈಟನ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆದ್ದು 5ನೇ ಬಾರಿ ಟ್ರೋಫಿ ತನ್ನದಾಗಿಸಿಕೊಂಡಿತು.

ರವಿವಾರದಂತೆ ಸೋಮವಾರವೂ ಮಳೆ ಸ್ವಲ್ಪ ಮಟ್ಟಿಗೆ ಅಡ್ಡಿ ಉಂಟು ಮಾಡಿತಾದರೂ ಕೊನೆಗೆ ಪಂದ್ಯ ನಡೆದು 5 ಬಾರಿ ಚಾಂಪಿಯನ್ ಆದ ಮುಂಬೈ ಇಂಡಿಯನ್ಸ್ ದಾಖಲೆಯನ್ನು ಚೆನ್ನೈ ಸರಿಗಟ್ಟಿತು.

ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 214 ರನ್ ಪೇರಿಸಿತ್ತು. ಈ ಬೃಹತ್ ಮೊತ್ತ ಬೆನ್ನಟ್ಟಿದ ಚೆನ್ನೈ ಡಿಎಲ್‍ಎಸ್ ನಿಯಮದ ಪ್ರಕಾರ 15 ಓವರ್ ಗಳಲ್ಲಿ171 ರನ್ ಗಳಿಸಬೇಕಿತ್ತು. ಕೊನೆಯವರೆಗೂ ಕೂತೂಹಲ ಮೂಡಿಸಿದ ಪಂದ್ಯದ ಕೊನೆಯಲ್ಲಿ ಚೆನ್ನೈ ಗೆದ್ದು ಬೀಗಿತು.

ಸಂಪೂರ್ಣ ಬಹುಮಾನಗಳ ವಿವರ

  • *ಚಾಂಪಿಯನ್‌: ಸಿಎಸ್‌ಕೆ-20 ಕೋಟಿ ರೂ.
  • *ರನ್ನರ್‌ ಅಪ್: ಗುಜರಾತ್ ಟೈಟನ್ಸ್-12.5 ಕೋಟಿ ರೂ.
  • *ಆರೆಂಜ್ ಕ್ಯಾಪ್: ಶುಭಮನ್ ಗಿಲ್-890 ರನ್-10 ಲಕ್ಷ ರೂ.
  • *ಪರ್ಪಲ್ ಕ್ಯಾಪ್: ಮೊಹಮ್ಮದ್ ಶಮಿ- 28 ವಿಕೆಟ್- 10 ಲಕ್ಷ ರೂ.
  • *ಋತುವಿನ ಉದಯೋನ್ಮುಖ ಆಟಗಾರ: ಯಶಸ್ವಿ ಜೈಸ್ವಾಲ್- ಆರ್‌ಆರ್-10 ಲಕ್ಷ ರೂ.
  • *ಸೂಪರ್ ಸ್ಟ್ರೆಕರ್-ಗ್ಲೆನ್ ಮ್ಯಾಕ್ಸ್‌ವೆಲ್: ಆರ್‌ಸಿಬಿ-183.48-10 ಲಕ್ಷ ರೂ.
  • *ಅತ್ಯಂತ ಮೌಲ್ಯಯುತ ಆಟಗಾರ: ಶುಭಮನ್ ಗಿಲ್- 10 ಲಕ್ಷ ರೂ.
  • *ಗೇಮ್ ಚೇಂಜರ್- ಶುಭಮನ್ ಗಿಲ್- 10 ಲಕ್ಷ ರೂ.
  • *ಅತಿ ಹೆಚ್ಚು ಬೌಂಡರಿ: ಶುಭಮನ್ ಗಿಲ್- 85- 10 ಲಕ್ಷ ರೂ.
  • *ಅತಿ ಉದ್ದದ ಸಿಕ್ಸರ್- ಫಾಫ್ ಡು’ಪ್ಲೆಸಿಸ್: ಆರ್‌ಸಿಬಿ- 115 ಮೀಟರ್-10 ಲಕ್ಷ ರೂ.
  • *ಆವೃತ್ತಿಯ ಅದ್ಭುತ ಕ್ಯಾಚ್: ರಶೀದ್ ಖಾನ್- ಗುಜರಾತ್ ಟೈಟನ್ಸ್- 10 ಲಕ್ಷ ರೂ.
  • *ಮನರಂಜಿಸಿದ ತಂಡ- ಡೆಲ್ಲಿ ಕ್ಯಾಪಿಟಲ್ಸ್

ಫೈನಲ್ ಪಂದ್ಯದ ಪ್ರಶಸ್ತಿಗಳ ವಿವರ

  • *ಉತ್ತಮ ಸ್ಟ್ರೆಕರ್: ಅಜಿಂಕ್ಯ ರಹಾನೆ- 1 ಲಕ್ಷ ರೂ.
  • *ಗೇಮ್ ಚೇಂಜರ್: ಸಾಯಿ ಸುದರ್ಶನ್- 1 ಲಕ್ಷ ರೂ.
  • *ಮೌಲ್ಯಯುತ ಆಟಗಾರ: ಸಾಯಿ ಸುದರ್ಶನ್- 1 ಲಕ್ಷ ರೂ.
  • *ಅತಿ ಉದ್ದದ ಸಿಕ್ಸರ್: ಸಾಯಿ ಸುದರ್ಶನ್- 1 ಲಕ್ಷ ರೂ.
  • *ಅದ್ಭುತ ಕ್ಯಾಚ್: ಎಂ.ಎಸ್.ಧೋನಿ- 1 ಲಕ್ಷ ರೂ.
  • *ಪಂದ್ಯ ಶ್ರೇಷ್ಠ: ಡೆವೋನ್ ಕಾನ್ವೇ – 1 ಲಕ್ಷ ರೂ.

Related post

ರಾಜ್ಯದಲ್ಲಿ ಮುಂದಿನ ಆರು ದಿನಗಳ ಕಾಲ ಭಾರಿ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಲ್ಲಿ ಮುಂದಿನ ಆರು ದಿನಗಳ ಕಾಲ ಭಾರಿ ಮಳೆ; ಹವಾಮಾನ ಇಲಾಖೆ…

ನ್ಯೂಸ್ ಆ್ಯರೋ : ಬರದಿಂದ ಕಂಗೆಟ್ಟಿರುವ ರಾಜ್ಯದ ರೈತರಿಗೆ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದೆ. ರಾಜ್ಯಾದ್ಯಂತ ಮುಂದಿನ 6 ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ…
ಇಂದು ಕೆಕೆಆರ್ , ಮುಂಬೈ ಇಂಡಿಯನ್ಸ್ ನಡುವೆ ಹಣಾಹಣಿ; ಯಾರಿಗೆ ಒಲಿಯಲಿದ್ದಾಳೆ ವಿಜಯಲಕ್ಷ್ಮೀ..?

ಇಂದು ಕೆಕೆಆರ್ , ಮುಂಬೈ ಇಂಡಿಯನ್ಸ್ ನಡುವೆ ಹಣಾಹಣಿ; ಯಾರಿಗೆ ಒಲಿಯಲಿದ್ದಾಳೆ…

ನ್ಯೂಸ್ ಆರೋ: ಕೋಲ್ಕತ್ತಾದ ಐತಿಹಾಸಿಕ ಮೈದಾನವಾಗಿರುವ ಈಡನ್ ಗಾರ್ಡನ್‌ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಮುಂಬೈ ಇಂಡಿಯನ್ಸ್ ಪಂದ್ಯ ನಡೆಯಲಿದೆ. ಎಲ್ಲಾ ಕ್ರಿಕೆಟ್ ಅಭಿಮಾನಿಗಳ ಪಂದ್ಯವನ್ನು ನೋಡಲು ಕಾತುರರಾಗಿದ್ದಾರೆ. ಕೆಕೆಆರ್…
17 ಲಕ್ಷದ ಮಹೀಂದ್ರಾ ಥಾರ್ ಸೇಲ್ ಮಾಡಿ ಐಷಾರಾಮಿ ಬೆಂಜ್ ಖರೀದಿಸಿದ ನಿರೂಪಕಿ ಅನುಪಮಾ ಗೌಡ!

17 ಲಕ್ಷದ ಮಹೀಂದ್ರಾ ಥಾರ್ ಸೇಲ್ ಮಾಡಿ ಐಷಾರಾಮಿ ಬೆಂಜ್ ಖರೀದಿಸಿದ…

ನ್ಯೂಸ್ ಆರೋ: ಕನ್ನಡದ ಖ್ಯಾತ ನಿರೂಪಕಿ ಅನುಪಮಾ ಗೌಡ ತಮ್ಮ ಕೆಂಪು ಬಣ್ಣದ ಥಾರ್ ಜೀಪ್ ಮಾರಾಟ ಮಾಡಿದ್ದಾರೆ. ಈಗ ಐಷಾರಾಮಿ ಬೆಂಜ್ ಖರೀದಿಸಲು ಕಾರಣ ರಿವೀಲ್ ಮಾಡಿದ್ದಾರೆ.…

Leave a Reply

Your email address will not be published. Required fields are marked *