ನಟಿ ಆಕಾಂಕ್ಷಾ ದುಬೆ ಸಾವಿನ ಪ್ರಕರಣಕ್ಕೆ ಟ್ವಿಸ್ಟ್ – ಒಳ ಉಡುಪಿನಲ್ಲಿ ವೀರ್ಯ ಪತ್ತೆ, ನಿಜವಾಗುತ್ತಾ ಅನುಮಾನ?

ನಟಿ ಆಕಾಂಕ್ಷಾ ದುಬೆ ಸಾವಿನ ಪ್ರಕರಣಕ್ಕೆ ಟ್ವಿಸ್ಟ್ – ಒಳ ಉಡುಪಿನಲ್ಲಿ ವೀರ್ಯ ಪತ್ತೆ, ನಿಜವಾಗುತ್ತಾ ಅನುಮಾನ?

ನ್ಯೂಸ್ ಆ್ಯರೋ‌ : ಭೋಜ್‌ ಪುರಿ ನಟಿ ಆಕಾಂಕ್ಷಾ ದುಬೆ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಯುತ್ತಿದ್ದು, ಮಹತ್ವದ ಸುಳಿವು ಪೊಲೀಸರಿಗೆ ಸಿಕ್ಕಿದೆ. ನಟಿಯ ಒಳ ಉಡುಪಿನಲ್ಲಿ ವೀರ್ಯ ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ.

ಇತ್ತೀಚೆಗೆ ನಟಿಯ ಮರಣೋತ್ತರ ಪರೀಕ್ಷೆಯ ವರದಿ ಹೊರಬಿದ್ದಿತ್ತು. ಆಕೆಯ ಹೊಟ್ಟೆಯಲ್ಲಿ ಆಹಾರ ಇರಲಿಲ್ಲ. ಮತ್ತು ಮದ್ಯದ ಯಾವುದೇ ಅಂಶಗಳು ಹೊಟ್ಟೆಯಲ್ಲಿ ಕಂಡುಬಂದಿರಲಿಲ್ಲ. ಆದರೆ ಅಪರಿಚಿತ ಕಂದು ದ್ರವ 20ml ನಷ್ಟು ಇತ್ತು ಎಂದು ವರದಿಯಲ್ಲಿ ಗೊತ್ತಾಗಿತ್ತು.

ಮಾ. 26 ರಂದು ಸಿನಿಮಾದ ಶೂಟಿಂಗ್‌ ಗಾಗಿ ವಾರಣಾಸಿಯ ಖಾಸಗಿ ಹೊಟೇಲ್‌ ನಲ್ಲಿ ತಂಗಿದ್ದ ಆಕಾಂಕ್ಷಾ ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಈ ಸಂಬಂಧ ಭೋಜ್‌ ಪುರಿ ಗಾಯಕ ಸಮರ್ ಸಿಂಗ್, ಅವರ ಸಹೋದರ ಸಂಜಯ್ ಸಿಂಗ್, ಸಂದೀಪ್ ಸಿಂಗ್ ಮತ್ತು ಅರುಣ್ ಪಾಂಡೆ ಅವರನ್ನು ಬಂಧಿಸಲಾಗಿತ್ತು.

ಸಾವನ್ನಪ್ಪಿದ ದಿನ ಆಕಾಂಕ್ಷಾ ಧರಿಸಿದ್ದ ಉಡುಗೆಯನ್ನು ಪರೀಕ್ಷೆ ಮಾಡಲಾಗಿದ್ದು, ಇದರಲ್ಲಿ ವೀರ್ಯ ಪತ್ತೆಯಾಗಿರುವುದು ಮಹತ್ವದ ಸುಳಿವು ಎಂದು ಪೊಲೀಸರು ಹೇಳಿದ್ದಾರೆ. ಹೆಚ್ಚಿನ ಪರೀಕ್ಷೆಗಳಿಗಾಗಿ ಇದನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ವರುಣಾ ವಲಯದ ಡಿಸಿಪಿ ಅಮಿತ್ ಕುಮಾರ್ ತಿಳಿಸಿದ್ದಾರೆ. ಆರೋಪಿಗಳಾದ ಸಮರ್ ಸಿಂಗ್, ಸಂಜಯ್ ಸಿಂಗ್, ಸಂದೀಪ್ ಸಿಂಗ್ ಮತ್ತು ಅರುಣ್ ಪಾಂಡೆ ಅವರ ಮಾದರಿಗಳನ್ನು ಡಿಎನ್‌ಎ ಪರೀಕ್ಷೆಗೆ ಕಳುಹಿಸಲಾಗುವುದು ಎಂದು ಹೇಳಿದ್ದಾರೆ. ಈ ಮಧ್ಯೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು “ಸಂಶಯಾಸ್ಪದವಾಗಿ ವರ್ತಿಸುತ್ತಿದ್ದಾರೆ” ಎಂಬ ಆರೋಪವೂ ಕೇಳಿ ಬಂದಿದೆ.

Related post

7 ದಿನ ಪರಪ್ಪನ ಅಗ್ರಹಾರ ಕಾರಾಗೃಹದ ಪಾಲಾದ ಮಾಜಿ ಸಚಿವ ಎಚ್. ಡಿ. ರೇವಣ್ಣ; ಮೇ 14 ರವರೆಗೆ ನ್ಯಾಯಾಂಗ ಬಂಧನ

7 ದಿನ ಪರಪ್ಪನ ಅಗ್ರಹಾರ ಕಾರಾಗೃಹದ ಪಾಲಾದ ಮಾಜಿ ಸಚಿವ ಎಚ್.…

ನ್ಯೂಸ್ ಆ್ಯರೋ : ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣದಲ್ಲಿ (Hassan Pen Drive) ಹಾಗೂ ಸಂತ್ರಸ್ತೆಯನ್ನು…
TECH TIPS: ಕಿರಿಕಿರಿ ನೀಡುವ ಸ್ಪ್ಯಾಮ್ ಕರೆಗಳಿಂದ ತಪ್ಪಿಸಿಕೊಳ್ಳಲು ಹೀಗೆ ಮಾಡಿ..!

TECH TIPS: ಕಿರಿಕಿರಿ ನೀಡುವ ಸ್ಪ್ಯಾಮ್ ಕರೆಗಳಿಂದ ತಪ್ಪಿಸಿಕೊಳ್ಳಲು ಹೀಗೆ ಮಾಡಿ..!

ನ್ಯೂಸ್ ಆ್ಯರೋ : ಮನಸ್ಸಿಗೆ ಕಿರಿಕಿರಿ ನೀಡುವ ಮತ್ತು ತಮ್ಮ ಕೆಲಸದ ವೇಳೆಯಲ್ಲಿ ಅಡಚಣೆ ಉಂಟು ಮಾಡುವ ಸ್ಪ್ಯಾಮ್ ಕರೆಗಳನ್ನು (Spam call) ತಡೆಯುವುದು ಇಂದು ದೊಡ್ಡ ಸಾಹಸ…
ಡ್ರೈ ಸ್ಕಿನ್ ಸಮಸ್ಯೆಗೆ ಸೌತೆಕಾಯಿ ಫೇಸ್ ಪ್ಯಾಕ್ ಬೆಸ್ಟ್; ನೀವೂ ಟ್ರೈ ಮಾಡಿ

ಡ್ರೈ ಸ್ಕಿನ್ ಸಮಸ್ಯೆಗೆ ಸೌತೆಕಾಯಿ ಫೇಸ್ ಪ್ಯಾಕ್ ಬೆಸ್ಟ್; ನೀವೂ ಟ್ರೈ…

ನ್ಯೂಸ್ ಆ್ಯರೋ : ಅಡುಗೆ, ಸಲಾಡ್, ಜ್ಯೂಸ್​ನಲ್ಲೂ ಬಳಸುವ ಸೌತೆಕಾಯಿಗಳು ಸೌಂದರ್ಯದ ದೃಷ್ಟಿಯಿಂದಲೂ ಬಹಳ ಕೊಡುಗೆ ನೀಡುತ್ತವೆ. ಈ ಪೌಷ್ಟಿಕ ತರಕಾರಿ ನಿಮ್ಮ ಚರ್ಮಕ್ಕೆ ಚಿಕಿತ್ಸೆ ನೀಡಲು ಉತ್ತಮ…

Leave a Reply

Your email address will not be published. Required fields are marked *