ದೇಶದ ಮೊದಲ ನೆಲದಡಿ ವಿದ್ಯುತ್ ಪರಿವರ್ತಕ ಕಾರ್ಯಾರಂಭ – ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ.ಜಾರ್ಜ್, ಶಾಸಕರು ಭಾಗಿ

ದೇಶದ ಮೊದಲ ನೆಲದಡಿ ವಿದ್ಯುತ್ ಪರಿವರ್ತಕ ಕಾರ್ಯಾರಂಭ – ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ.ಜಾರ್ಜ್, ಶಾಸಕರು ಭಾಗಿ

ನ್ಯೂಸ್‌ ಆ್ಯರೋ : ದೇಶದಲ್ಲೇ ಪ್ರಥಮ ಬಾರಿಗೆ ನೆಲದಡಿಯಲ್ಲಿ ನಿರ್ಮಿಸಿರುವ 500 ಕೆವಿಎ ಸಾಮರ್ಥ್ಯದ ವಿದ್ಯುತ್‌ ಪರಿವರ್ತಕ ಕೇಂದ್ರವನ್ನು ಮಲ್ಲೇಶ್ವರದ 15ನೇ ಅಡ್ಡರಸ್ತೆಯಲ್ಲಿ ನಿರ್ಮಿಸಿದ್ದು ಇದನ್ನುಇಂಧನ ಸಚಿವ ಕೆ.ಜೆ.ಜಾರ್ಜ್ ಮಂಗಳವಾರ ಉದ್ಘಾಟಿಸಿದರು.

ಬಿಬಿಎಂಪಿ ಸಹಭಾಗಿತ್ವದಲ್ಲಿ ಬೆಂಗಳೂರು ವಿದ್ಯುತ್‌ ಸರಬರಾಜು ಕಂಪನಿ (ಬೆಸ್ಕಾಂ) ಈ ಕೇಂದ್ರವನ್ನು ನಿರ್ಮಿಸಿದ್ದು, ವಿಶೇಷವಾಗಿ ನೆಲದಡಿಯಲ್ಲಿ ಈ ಕೇಂದ್ರವನ್ನು ಸ್ಥಾಪಿಸಲಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಬೆಸ್ಕಾಂ ಅಧಿಕಾರಿ, ನೆಲದಡಿಯಲ್ಲಿ ಕೇಬಲ್‌ ಹಾಗೂ ವಿದ್ಯುತ್‌ ಪರಿವರ್ತಕ ವ್ಯವಸ್ಥೆಯು ಸುರಕ್ಷತೆ ಹಾಗೂ ಗುಣಮಟ್ಟದ ವಿದ್ಯುತ್‌ ಪೂರೈಕೆಗೆ ಸಹಕಾರಿಯಾಗಲಿದೆ. ಈ ಯೋಜನೆಯಡಿ ವಿತರಣಾ ಪರಿವರ್ತಕಗಳು, ರಿಂಗ್ ಮೇನ್ ಯೂನಿಟ್‌ಗಳು ಸೇರಿದಂತೆ ಸಂಪೂರ್ಣ ವ್ಯವಸ್ಥೆಯನ್ನು ನೆಲದಡಿಯಲ್ಲಿ ಅಳವಡಿಸಲಾಗಿದೆ. ಇದರಿಂದ ವಿದ್ಯುತ್ ಅವಘಡಗಳನ್ನು ತಪ್ಪಿಸುವ ಜತೆಗೆ ವಿದ್ಯುತ್‌ ಪೂರೈಕೆ ನಷ್ಟವನ್ನು ತಗ್ಗಿಸಬಹುದಾಗಿದೆ. ಗುಣಮಟ್ಟದ ವಿದ್ಯುತ್ ಪೂರೈಸಲು ಕೂಡ ಈ ಯೋಜನೆ ಸಹಕಾರಿಯಾಗಲಿದೆ ಎಂದರು.

ಒಟ್ಟು ₹1.97 ಕೋಟಿ ವೆಚ್ಚದಲ್ಲಿ ಈ ಪರಿವರ್ತಕ ಕೇಂದ್ರವನ್ನು (ಟಿ.ಸಿ) ನಿರ್ಮಿಸಲಾಗಿದೆ. ಈ ಪೈಕಿ ಸಿವಿಲ್‌ ಕಾಮಗಾರಿಗೆ ₹64 ಲಕ್ಷ ಮತ್ತು ಎಲೆಕ್ಟ್ರಿಕಲ್‌ ಕಾಮಗಾರಿಗೆ ₹1.33 ಕೋಟಿ ವೆಚ್ಚವಾಗಿದೆ. ಸಿವಿಲ್‌ ಕಾಮಗಾರಿಗೆ ಬಿಬಿಎಂಪಿ ಅನುದಾನ ಒದಗಿಸಿತ್ತು. ಕೇಂದ್ರದ ನಿರ್ಮಾಣ ಕಾಮಗಾರಿ 2022ರ ಮೇ 20ರಿಂದ ಆರಂಭಗೊಂಡಿತ್ತು. ಇದು 14 ಮೀಟರ್‌ ಉದ್ದ, 5 ಮೀಟರ್‌ ಅಗಲ ಮತ್ತು 4 ಮೀಟರ್‌ ಆಳ ಇದೆ ಎಂದರು.

ಕಡಿಮೆ ಜಾಗದಲ್ಲಿ ಹೆಚ್ಚಿನ ಸುರಕ್ಷತೆ ನೀಡಲಿದೆ

ಪಾದಚಾರಿ ಮಾರ್ಗದ ನಾಲ್ಕು ಮೀಟರ್‌ ಅಡಿ ಆಳದಲ್ಲಿ ವಿದ್ಯುತ್‌ ಪರಿವರ್ತಕ ಅಳವಡಿಸಲಾಗಿದೆ. ಈ ವ್ಯವಸ್ಥೆಗೆ ಹೆಚ್ಚಿನ ಜಾಗದ ಅಗತ್ಯವಿಲ್ಲ. ಕಡಿಮೆ ಜಾಗದಲ್ಲಿ ಸುರಕ್ಷಿತವಾಗಿರುವ ವ್ಯವಸ್ಥೆ ಇದಾಗಿದೆ. ಅಗ್ನಿ ದುರಂತಗಳು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜತೆಗೆ, ಗಾಳಿಯ ವ್ಯವಸ್ಥೆಯೂ ಇದೆ. ನೀರಿನ ಸಂಪು ಮಾದರಿಯಲ್ಲಿ ದಪ್ಪನೆಯ ಕಾಂಕ್ರೀಟ್‌ನ ನಾಲ್ಕು ಗೋಡೆಗಳನ್ನು ನಿರ್ಮಿಸಿ ವಿದ್ಯುತ್‌ ಪರಿವರ್ತಕ ಸ್ಥಾಪಿಸಲಾಗಿದೆ. ಇಲ್ಲಿ ಸ್ಲ್ಯಾಬ್‌ ಹಾಕಿರುವುದರಿಂದ ನಾಗರಿಕರು ಯಾವುದೇ ರೀತಿಯ ತೊಂದರೆ ಇಲ್ಲದೆಯೇ ಈ ಸ್ಥಳದ ಮೇಲೆಯೇ ನಡೆದಾಡಬಹುದಾಗಿದೆ.

ಮಲ್ಲೇಶ್ವರದ 15ನೇ ಅಡ್ಡರಸ್ತೆಯಲ್ಲಿ ನಿರ್ಮಿಸಿರುವ ಈ ವಿದ್ಯುತ್‌ ಪರಿವರ್ತಕ ಕೇಂದ್ರವನ್ನು ಇಂಧನ ಸಚಿವ ಕೆ. ಜೆ. ಜಾರ್ಜ್‌ ಅವರು ಉದ್ಘಾಟಿಸಿದ್ದು, ಶಾಸಕ ಡಾ. ಸಿ.ಎನ್‌. ಅಶ್ವತ್ಥನಾರಾಯಣ, ಇಂಧನ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಇದ್ದರು.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *