ಅಕ್ಟೋಬರ್ 1ರಿಂದ ಈ ಕೆಲಸಗಳಿಗೆ ಜನನ ಪ್ರಮಾಣಪತ್ರ ಒದಗಿಸಿದರೆ ಸಾಕು – ಕೇಂದ್ರ ಗೃಹ ಸಚಿವಾಲಯ ಹೇಳೋದೇನು?

ಅಕ್ಟೋಬರ್ 1ರಿಂದ ಈ ಕೆಲಸಗಳಿಗೆ ಜನನ ಪ್ರಮಾಣಪತ್ರ ಒದಗಿಸಿದರೆ ಸಾಕು – ಕೇಂದ್ರ ಗೃಹ ಸಚಿವಾಲಯ ಹೇಳೋದೇನು?

ನ್ಯೂಸ್ ಆ್ಯರೋ‌ : ಜನನ ಮತ್ತು ಮರಣ ನೋಂದಣಿ (ತಿದ್ದುಪಡಿ) ಕಾಯಿದೆ-2023 ಸಂಸತ್ ನಲ್ಲಿ ಅಂಗೀಕಾರಗೊಂಡಿದೆ. ಹೀಗಾಗಿ ಅಕ್ಟೋಬರ್ 1ರಿಂದ ಶಾಲಾ ದಾಖಲಾತಿ, ವಾಹನ ಚಾಲನಾ ಪರವಾವನಗಿ, ಸರಕಾರಿ ಉದ್ಯೋಗ, ಪಾಸ್ ಪೋರ್ಟ್, ಮತದಾರ ಪಟ್ಟಿ ನೋಂದಣಿ ಮುಂತಾದ ಕಾರ್ಯಗಳಿಗೆ ಜನನ ಪ್ರಮಾಣ ಪತ್ರವನ್ನು ಪ್ರಮುಖ ದಾಖಲೆಯಾಗಿ ಬಳಸಬಹುದು. ಹಲವು ಸೇವೆಗಳನ್ನು ಪಡೆಯಲು ಜನನ ಪ್ರಮಾಣ ಪತ್ರವನ್ನು ಪರಿಗಣಿಸಲಾಗುತ್ತದೆ.

ಕೇಂದ್ರ ಗೃಹ ಸಚಿವಾಲಯ ಹೇಳಿದ್ದೇನು?

ಜನನ ಮತ್ತು ಮರಣ ನೋಂದಣಿ (ತಿದ್ದುಪಡಿ) ಕಾಯ್ದೆ 2023ರ ಅನುಷ್ಠಾನವನ್ನು ಘೋಷಿಸಿದ ಕೇಂದ್ರ ಗೃಹ ಸಚಿವಾಲಯ, ಇದು ನೋಂದಾಯಿತ ಜನನ ಮತ್ತು ಮರಣಗಳ ಡೇಟಾಬೇಸ್ ರಚಿಸಲು ಸಹಾಯ ಮಾಡುತ್ತದೆ. ಇದು ಡಿಜಿಟಲ್ ನೋಂದಣಿಯನ್ನು ಖಚಿತಪಡಿಸುತ್ತದೆ ಎಂದು ಹೇಳಿದೆ.

ಜನನ ಮತ್ತು ಮರಣದ ಮಾಹಿತಿಯನ್ನು ರಾಷ್ಟ್ರೀಯ ಜನಸಂಖ್ಯಾ ನೋಂದಣಿ ಡೇಟಾಬೇಸ್ ನಲ್ಲಿ ಸೇರಿಸಲಾಗುತ್ತದೆ. ಕೇಂದ್ರೀಯ ನೋಂದಣಿ ವ್ಯವಸ್ಥೆಯಡಿ ರಾಜ್ಯಗಳು ಜನನ ಮತ್ತು ಮರಣದ ಮಾಹಿತಿಯನ್ನು ಕಡ್ಡಾಯವಾಗಿ ನೋಂದಾಯಿಸಬೇಕು ಎಂದು ಸೂಚಿಸಲಾಗಿದೆ.

ಪ್ರಮುಖಾಂಶಗಳು

  • ಈ ಕಾಯಿದೆಯು ಜನನ ಮತ್ತು ಮರಣಗಳ ರಾಷ್ಟ್ರೀಯ ನೋಂದಣಿಯನ್ನು ಮೇಲ್ವಿಚಾರಣೆ ನಡೆಸುವ ಅಧಿಕಾರವನ್ನು ರಿಜಿಸ್ಟ್ರಾರ್ ಜನರಲ್ ಗೆ ನೀಡುತ್ತದೆ. ರಾಜ್ಯದಿಂದ ನೇಮಕಗೊಂಡ ಮುಖ್ಯ ರಿಜಿಸ್ಟ್ರಾಲ್ ಗಳು, ರಿಜಿಸ್ಟ್ರಾಲ್ ಗಳು ಈ ರಾಷ್ಟ್ರೀಯ ಡೇಟಾಬೇಸ್ ಗೆ ಮಾಹಿತಿ ಒದಗಿಸಬೇಕಾಗುತ್ತದೆ.
  • ಈ ಹಿಂದೆ ಕೆಲವು ವ್ಯಕ್ತಿಗಳು ಜನನ ಮತ್ತು ಮರಣಗಳನ್ನು ರಿಜಿಸ್ಟ್ರಾರ್ ಗೆ ವರದಿ ಮಾಡಬೇಕಿತ್ತು. ಉದಾಹರಣೆಗೆ ಆಸ್ಪತ್ರೆಯ ಮೆಡಿಕಲ್ ಆಫೀಸರ್ ಜನನದ ವಿವರಗಳನ್ನು ಕಡ್ಡಾಯವಾಗಿ ವರದಿ ಮಾಡಬೇಕಿತ್ತು. ಅಲ್ಲದೆ ಪಾಲಕರು ಮತ್ತು ಮಾಹಿತಿದಾರರ ಆಧಾರ್ ಸಂಖ್ಯೆ ಒದಗಿಸಬೇಕಾಗಿತ್ತು. ಜೈಲು, ಲಾಡ್ಜ್ ನಲ್ಲಿ ಜನನವಾದ ಸಂದರ್ಭದಲ್ಲೂ ಈ ನಿಯಮ ಅನ್ವಯವಾಗುತ್ತಿತ್ತು.
  • ಹೊಸ ಕಾಯಿದೆ ಕೇಂದ್ರ ಸರಕಾರದ ಅನುಮೋದನೆಗೆ ಒಳಪಟ್ಟ ಜನಸಂಖ್ಯಾ ನೋಂದಣಿ, ಮತದಾರರ ಪಟ್ಟಿ ಮತ್ತು ಇತರ ಅಧಿಕೃತ ಪ್ರಾಧಿಕಾರಗಳೊಂದಿಗೆ ಡೇಟಾಬೇಸ್ ಹಂಚಿಕೊಳ್ಳಲು ಸಾಧ್ಯವಿದೆ.
  • ರಿಜಿಸ್ಟ್ರಾರ್ ಅಥವಾ ಜಿಲ್ಲಾ ರಿಜಿಸ್ಟ್ರಾರ್ ಅವರ ಯಾವುದೇ ಕ್ರಮ ಅಥವಾ ಆದೇಶದಿಂದ ತೊಂದರೆಗೊಳಗಾದ ವ್ಯಕ್ತಿ ಜಿಲ್ಲಾ ರಿಜಿಸ್ಟ್ರಾರ್ ಅಥವಾ ಮುಖ್ಯ ರಿಜಿಸ್ಟ್ರಾರ್ ಗೆ ಮೇಲ್ಮನವಿ ಸಲ್ಲಿಸಬಹುದು.

ಇತ್ತೀಚೆಗೆ ಮುಕ್ತಾಯವಾದ ಮುಂಗಾರು ಅಧಿವೇಶನದಲ್ಲಿ ಸಂಸತ್ತಿನ ಉಭಯ ಸದನಗಳು ಜನನ ಮತ್ತು ಮರಣ ನೋಂದಣಿ (ತಿದ್ದುಪಡಿ) ಮಸೂದೆಯನ್ನು ಅಂಗೀಕರಿಸಿದ್ದವು. ಲೋಕಸಭೆ ಆಗಸ್ಟ್ 1 ಮತ್ತು ರಾಜ್ಯಸಭೆ ಆಗಸ್ಟ್ 7ರಂದು ಈ ಮಸೂದೆಗೆ ಒಪ್ಪಿಗೆ ಸೂಚಿಸಿವೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *