ಇನ್ಮುಂದೆ ಮನೆಬಾಗಿಲಿಗೆ ಬರುತ್ತೆ ಅನ್ನಭಾಗ್ಯ ಪಡಿತರ ಅಕ್ಕಿ – ಆದರೆ ಷರತ್ತುಗಳು ಅನ್ವಯ, ಅದೇನ್ ಗೊತ್ತಾ?

ಇನ್ಮುಂದೆ ಮನೆಬಾಗಿಲಿಗೆ ಬರುತ್ತೆ ಅನ್ನಭಾಗ್ಯ ಪಡಿತರ ಅಕ್ಕಿ – ಆದರೆ ಷರತ್ತುಗಳು ಅನ್ವಯ, ಅದೇನ್ ಗೊತ್ತಾ?

ನ್ಯೂಸ್ ಆ್ಯರೋ : ಅನ್ನ ಭಾಗ್ಯ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಒಂದು ಸಿಹಿ ಸುದ್ದಿ ಕೊಟ್ಟಿದೆ.

ಮಹಿಳೆಯರು, ಹಿರಿಯ ನಾಗರಿಕರಿಗೆ ಸಹಾಯವಾಗುವ ನಿಟ್ಟಿನಲ್ಲಿ ಸಾಕಷ್ಟು ಯೋಜನೆಗಳನ್ನು ರೂಪಿಸುತ್ತಿರುವ ಕರ್ನಾಟಕ ಸರ್ಕಾರ ಈಗ ಪಡಿತರ ವಿತರಣೆಗೆ ಹೊಸ ಯೋಜನೆ ಹಾಕಿಕೊಳ್ಳುತ್ತಿದೆ.

ಮುಖ್ಯವಾಗಿ ಹಿರಿಯ ನಾಗರಿಕರಿಗೆ ಅನುಕೂಲವಾಗುವಂತೆ ಇನ್ನುಮುಂದೆ ಅನ್ನಭಾಗ್ಯ ಯೋಜನೆಯಡಿ ಮನೆ ಬಾಗಿಲಿಗೆ ಪಡಿತರ ಅಕ್ಕಿ ವಿತರಿಸುವ ಚಿಂತನೆ ನಡೆಸಲಾಗುತ್ತಿದೆ.

ಈಗಾಗಲೇ ಆಹಾರ ಇಲಾಖೆಯು ಈ ಹೊಸ ಯೋಜನೆಯ ರೂಪುರೇಷೆಯನ್ನು ಸಿದ್ದಪಡಿಸಿದ್ದು, ಮನೆಮನೆಗೆ ಪಡಿತರ ಅಕ್ಕಿಯನ್ನು ವಿತರಣೆ ಕಾರ್ಯಕ್ಕೆ ಸಿದ್ಧತೆ ನಡೆಸುತ್ತಿದೆ. ಇದಕ್ಕಾಗಿ ಕೆಲವು ನಿಯಮಗಳನ್ನು ರೂಪಿಸಲಾಗಿದೆ.

ಇದು ಅನ್ನಭಾಗ್ಯ ಯೋಜನೆಯಡಿ ಬರುವ ಎಲ್ಲ ಫಲಾನುಭವಿಗಳಿಗೆ ಲಭ್ಯವಾಗುವುದಿಲ್ಲ. ಮನೆಯಲ್ಲಿ 90 ವರ್ಷ ಮೇಲ್ಪಟ್ಟವರು ಒಬ್ಬರೇ ಇದ್ದರೆ ಈ ಯೋಜನೆಯ ಲಾಭ ಪಡೆಯಬಹುದು. ಅದರಲ್ಲೂ ಪಡಿತರ ಚೀಟಿಯಲ್ಲಿ 90 ವರ್ಷ ಮೇಲ್ಪಟ್ಟವರು ಒಬ್ಬರೇ ಇರಬೇಕು. ಆಗ ಮಾತ್ರ ಈ ಯೋಜನೆಯ ಲಾಭ ಪಡೆಯಬಹುದು.

ಶೀಘ್ರದಲ್ಲೇ ಈ ಯೋಜನೆ ಜಾರಿಗೆ ತರಲು ಆಹಾರ ಇಲಾಖೆ ಚಿಂತನೆ ನಡೆಸಿದೆ ಎನ್ನಲಾಗಿದೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *