Gaganyan Mission : ಇಸ್ರೋ ಪರೀಕ್ಷಾರ್ಥ ಪ್ರಯೋಗ ಯಶಸ್ವಿ – ಅಂತರಿಕ್ಷ ಲೋಕದಲ್ಲಿ ಮತ್ತೊಂದು ಸಾಧನೆಯತ್ತ ದಾಪುಗಾಲು

Gaganyan Mission : ಇಸ್ರೋ ಪರೀಕ್ಷಾರ್ಥ ಪ್ರಯೋಗ ಯಶಸ್ವಿ – ಅಂತರಿಕ್ಷ ಲೋಕದಲ್ಲಿ ಮತ್ತೊಂದು ಸಾಧನೆಯತ್ತ ದಾಪುಗಾಲು

ನ್ಯೂಸ್ ಆ್ಯರೋ : ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್​ ಧವನ್​​ ಬಾಹ್ಯಾಕಾಶ ಕೇಂದ್ರದಿಂದ, ಇಸ್ರೋದ ಗಗನಯಾನ ಯೋಜನೆಯ ಪರೀಕ್ಷಾ ಹಾರಾಟವನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ.

ಇಸ್ರೋ ಮುಖ್ಯಸ್ಥ ಸೋಮನಾಥ್ ಅವರು ಮಾಹಿತಿ ನೀಡಿದ್ದು, ಟೆಸ್ಟ್ ವೆಹಿಕಲ್ ಲಿಫ್ಟ್ ಆಫ್ ಇಂದು ಯಶಸ್ವಿಯಾಗಿದ್ದು, ನಿರೀಕ್ಷಿತ ಉಡಾವಣೆಯಾಗಿದೆ ಎಂದು ತಿಳಿಸಿದ್ದಾರೆ.

ಆಂಧ್ರದ ಶ್ರೀಹರಿಕೋಟಾದ ಸತೀಶ್‌ ಧವನ್‌ ಉಡಾವಣಾ ಕೇಂದ್ರದಿಂದ ನಭಕ್ಕೆ ಚಿಮ್ಮಿದ ರಾಕೆಟ್‌ 17 ಕಿ.ಮೀ. ಎತ್ತರದಲ್ಲಿ ಗಗನಯಾನ ನೌಕೆಯನ್ನು ಬೇರ್ಪಟ್ಟಿದೆ. ಬಳಿಕ ನೌಕೆ ಪ್ಯಾರಾಚೂಟ್‌ ಸಹಾಯದಿಂದ ಬಂಗಾಳಕೊಲ್ಲಿಯಲ್ಲಿ ಇಳಿದಿದ್ದು, ಅಲ್ಲಿಂದ ಅದನ್ನು ಹಡಗಿನ ಮೂಲಕ ವಶಕ್ಕೆ ಪಡೆಯಲಾಗಿದೆ.

ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿ ಹವಾಮಾನ ಸಮಸ್ಯೆಯಿಂದಾಗಿ ಪರೀಕ್ಷಾ ಉಡಾವಣೆಯು ಮುಂಜಾನೆಯೇ ತಡವಾಗಿತ್ತು. ಇಂಜಿನ್ ಇಗ್ನಿಷನ್ ಆಗಲಿಲ್ಲ. ಏನು ತಪ್ಪಾಗಿದೆ ಎಂಬುದನ್ನು ನಾವು ಕಂಡುಹಿಡಿಯಬೇಕು. ವಾಹನ ಸುರಕ್ಷಿತವಾಗಿದೆ ಎಂದು ಸೋಮನಾಥ್ ಅವರು ಲೈವ್‌ಸ್ಟ್ರೀಮ್‌ನಲ್ಲಿ ಹೇಳಿದರು.

ಶನಿವಾರ ಬೆಳಗ್ಗೆ ಸತೀಶ್‌ ಧವನ್‌ ಉಡಾವಣಾ ಕೇಂದ್ರದಲ್ಲಿರುವ ಒಂದನೇ ಲಾಂಚ್‌ ಪ್ಯಾಡ್‌ನಿಂದ ಈ ಪರೀಕ್ಷೆಗಾಗಿಯೇ ತಯಾರಿಸಲಾಗಿರುವ ರಾಕೆಟ್‌, ಗಗನಯಾನ ನೌಕೆಯ ಮಾಡೆಲನ್ನು ಹೊತ್ತು ಉಡಾವಣೆಯಾಗಿದೆ. 1 ನಿಮಿಷದ ಬಳಿಕ 11.7 ಕಿ.ಮೀ. ಎತ್ತರಕ್ಕೆ ಸಾಗುವ ರಾಕೆಟ್‌ ನೌಕೆಯಿಂದ ಬೇರ್ಪಟ್ಟಿದೆ. ಒಂದೂವರೆ ನಿಮಿಷಕ್ಕೆ 16 ಕಿ.ಮೀ. ಎತ್ತರಕ್ಕೆ ತಲುಪುವ ಗಗನಯಾನ ಕ್ರ್ಯೂ ಮಾಡ್ಯೂಲ್‌ ಇದಾದ ಬಳಿಕ ಮೇಲ್ಭಾಗದಲ್ಲಿ ಅಳವಡಿಸಲಾಗಿರುವ ಬೂಸ್ಟರ್‌ನಿಂದಲೂ ಬೇರ್ಪಟ್ಟು ಭೂಮಿಯತ್ತ ಬೀಳಲು ಆರಂಭಿಸುತ್ತದೆ.

ಈ ಹಂತದಲ್ಲಿ ಗಗನಯಾನ ನೌಕೆ ಮತ್ತು ಸಿಬ್ಬಂದಿಗಳನ್ನು ರಕ್ಷಿಸಲು ಇರುವ ಉಪಕರಣ ಎರಡೂ ಪ್ರತ್ಯೇಕಗೊಂಡು ಸಮುದ್ರದತ್ತ ಧಾವಿಸಿದೆ. ಹೀಗೆ ರಾಕೆಟ್‌ನಿಂದ ಬೇರ್ಪಟ್ಟ 5 ಸೆಕೆಂಡ್‌ ಬಳಿಕ ನೌಕೆಯಲ್ಲಿರುವ ಪ್ಯಾರಾಚೂಟ್‌ ಬಿಚ್ಚಿಕೊಂಡಿದ್ದು, ನೌಕೆಯ ವೇಗವನ್ನು ನಿಯಂತ್ರಿಸಿ ಭೂಮಿಯತ್ತ ತರಲಿದೆ. 3 ನಿಮಿಷಗಳ ಕಾಲ ಈ ಪ್ಯಾರಾಚೂಟ್‌ನ ಸಹಾಯದಿಂದ ನೌಕೆ ಇಳಿದಿದೆ. ಬಳಿಕ ಮತ್ತೊಂದು ಶಕ್ತಿಶಾಲಿ ಪ್ಯಾರಾಚೂಟ್‌ ತೆರೆದುಕೊಂಡಿದ್ದು, ನೌಕೆ ಸುರಕ್ಷಿತವಾಗಿ ಸಮುದ್ರಕ್ಕೆ ಇಳಿದಿದೆ.

ಈ ಪರೀಕ್ಷೆ ಕೇವಲ 9 ನಿಮಿಷಗಳಲ್ಲಿ ಮುಕ್ತಾಯಗೊಂಡಿದ್ದು, ಉಡ್ಡಯನ ಸ್ಥಳದಿಂದ 10 ಕಿ.ಮೀ ದೂರದ ಬಂಗಾಳಕೊಲ್ಲಿಯಿಂದ ನೌಕೆಯನ್ನು ಸುರಕ್ಷಿತವಾಗಿ ವಶಕ್ಕೆ ಪಡೆದುಕೊಳ್ಳಲಾಗಿದೆ. ಈ ಪರೀಕ್ಷೆಯನ್ನು ನಡೆಸುವುಕ್ಕೆ ಮೊದಲೇ ಇಸ್ರೋ, ನೌಕೆಯನ್ನು ಹಲವು ಬಾರಿ ಪರೀಕ್ಷೆಗೆ ಒಳಪಡಿಸಿದೆ. ಜೊತೆಗೆ ಎಂಜಿನ್‌, ಪ್ಯಾರಾಚೂಟ್‌ ಮತ್ತು ನೌಕೆಯ ವಶ ಎಲ್ಲದರ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿದ್ದು, ಕೊನೆಯದಾಗಿ ಈ ಮಾನವ ರಹಿತ ಗಗನಯಾನದ ಪರೀಕ್ಷೆ ನಡೆಸಲಾಗಿದೆ.

ಏನಿದು ಗಗನಯಾನ ಮಿಷನ್?

ಗಗನಯಾನ ಮಿಷನ್ ನ ಪ್ರಾಥಮಿಕ ಗುರಿ ಮಾನವರನ್ನು ಬಾಹ್ಯಾಕಾಶಕ್ಕೆ ಉಡಾಯಿಸುವುದು, ಮೂರು ದಿನಗಳ ಕಾರ್ಯಾಚರಣೆಗಾಗಿ ಅವರನ್ನು 400 ಕಿಲೋಮೀಟರ್ ಎತ್ತರದಲ್ಲಿ ಭೂಮಿಯ ಕೆಳ ಕಕ್ಷೆಯಲ್ಲಿ ಇರಿಸುವುದು, 2025 ರಲ್ಲಿ ಸುರಕ್ಷಿತವಾಗಿ ಭೂಮಿಗೆ ಮರಳುವುದು.

ಗಗನಯಾನ ಮಿಷನ್ ನ ಸಿಬ್ಬಂದಿಯನ್ನು ಎಲ್ವಿಎಂ 3 ರಾಕೆಟ್ ಬಳಸಿ ಗೊತ್ತುಪಡಿಸಿದ ಕಕ್ಷೆಗೆ ಸಾಗಿಸಲಾಗುವುದು. ಈ ರಾಕೆಟ್ ಘನ, ದ್ರವ ಮತ್ತು ಕ್ರಯೋಜೆನಿಕ್ ಪ್ರೊಪಲ್ಷನ್ ವ್ಯವಸ್ಥೆಗಳು ಸೇರಿದಂತೆ ವಿವಿಧ ಹಂತಗಳನ್ನು ಒಳಗೊಂಡಿದೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *