ಪ್ರೇಮಿಗಳ ಪ್ರೀತಿಗೆ ಪೋಷಕರೂ ಒಪ್ಪಿದ್ರು, ಆದರೆ ವಿಧಿಯಾಟ ಬೇರೆ ಇತ್ತು‌..!! – ಪ್ರೇಮಪಕ್ಷಿಗಳ ಬದುಕಲ್ಲಿ ಆಗಿದ್ದೇನು ಗೊತ್ತಾ?

ಪ್ರೇಮಿಗಳ ಪ್ರೀತಿಗೆ ಪೋಷಕರೂ ಒಪ್ಪಿದ್ರು, ಆದರೆ ವಿಧಿಯಾಟ ಬೇರೆ ಇತ್ತು‌..!! – ಪ್ರೇಮಪಕ್ಷಿಗಳ ಬದುಕಲ್ಲಿ ಆಗಿದ್ದೇನು ಗೊತ್ತಾ?

ನ್ಯೂಸ್ ಆ್ಯರೋ : ಕರ್ನೂಲ್ ಸರ್ಕಾರಿ ಆಸ್ಪತ್ರೆಯಲ್ಲಿ ಯುವಕನ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಆತನ ಪೋಷಕರು ಇದೊಂದು ಕೊಲೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಈ ಮೂಲಕ ಹೊಸ ಸಂಚಲನ ಮೂಡಿಸಿದ್ದು, ಯುವಕನ ಪ್ರೇಮಿಯ ಕಡೆಯವರು ಆತನನ್ನು ಕೊಲೆ ಮಾಡಿದ್ದಾರೆ ಎಂದು ದೂರಿದ್ದಾರೆ.

ಪ್ರಕರಣದ ಹಿನ್ನೆಲೆ:

ಸತ್ಯಸಾಯಿ ಜಿಲ್ಲೆಯ ಧರ್ಮಾವರಂ ಮಂಡಲದ ನೆಲಕೋಟ ಗ್ರಾಮದಲ್ಲಿ ಯುವಕನೊಬ್ಬ ನೇಣಿಗೆ ಶರಣಾಗಿದ್ದಾನೆ. ಇನ್ನೂ ಮೃತ ಯುವಕ ಅನಂತಪುರ ಜಿಲ್ಲೆಯ ಉರವಕೊಂಡ ಮಂಡಲದ ವೆಂಕಟಂ ಪಲ್ಲಿ ತಾಂಡಾದ ರಮಣಮ್ಮ ಎಂಬಾಕೆ ಇಬ್ಬರು ಪ್ರೀತಿಸುತ್ತಿದ್ದರು. ಅದಲ್ಲದೆ ಈ ಜೋಡಿ ಒಟ್ಟಿಗೂ ಇದ್ದೂ, ಕೆಲ ಭಿನ್ನಾಭಿಪ್ರಾಯಗಳಿಂದ ದೂರವಾಗಿದ್ದರು. ಇಬ್ಬರ ಮಧ್ಯೆ ರಾಜಿ ಪ್ರಯತ್ನಗಳು ನಡೆದರೂ ಅವು ವಿಫಲವಾದವು. ಇವರಿಬ್ಬರ ಸಂಬಂಧ ಕುಟುಂಬಗಳ ಮಧ್ಯೆಯೂ ಮಾತುಕತೆ ನಡೆದಿತ್ತು.

ಈ ಬೆಳವಣಿಗೆ ನಂತರ ದೂರವಾಗಿದ್ದ ಜೋಡಿ ಕರ್ನೂಲ್ ನಲ್ಲಿ ಖಾಸಗಿ ಉದ್ಯೋಗದಲ್ಲಿ ಕೆಲಸ ಮಾಡುತ್ತಿದ್ದ ತಮ್ಮ ಪ್ರಿಯತಮೆ ರಮಣಮ್ಮ ಭೇಟಿಯಾಗಲು ಷಣ್ಮುಖ ತಿರುಪತಿಯಿಂದ ಬಂದಿದ್ದಾನೆ.

ಏಕಾಏಕಿ ಷಣ್ಮುಖ ಪೋಷಕರಿಗೆ ಕರೆ ಮಾಡಿದ ರಮಣಮ್ಮ ಪೋಷಕರು ನಿಮ್ಮ ಮಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅವನ ಶವ ಆಸ್ಪತ್ರೆಯಲ್ಲಿದೆ ಎಂದು ತಿಳಿಸಿದ್ದಾರೆ.

ಇದೀಗ ಮೃತನ ಪೋಷಕರು ಇದೊಂದು ಕೊಲೆಯಾಗಿದ್ದು, ರಮಣಮ್ಮ ಪೋಷಕರು ಮಾಡಿರುವುದಾಗಿ ಗಂಭೀರ ಆರೋಪ ಮಾಡಿದ್ದಾರೆ. ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ ಸತ್ಯಾಂಶವನ್ನು ಬಹಿರಂಗಪಡಿಸಬೇಕು ಎಂದು ಯುವಕನ ಕುಟುಂಬದವರು ಒತ್ತಾಯಿಸುತ್ತಿದ್ದಾರೆ.

ರಮಣಮ್ಮ ಮತ್ತು ಕುಟುಂಬಸ್ಥರು ಮೃತದೇಹವನ್ನು ಆಸ್ಪತ್ರೆಯಲ್ಲಿಯೇ ಬಿಟ್ಟು ಹೋಗಿದ್ದಾರೆ ಎನ್ನಲಾಗಿದೆ. ಮರಣೋತ್ತರ ಪರೀಕ್ಷೆ ನಡೆಸಲು ಸಹಿ ಹಾಕಬೇಕಿದ್ದ ರಮಣಮ್ಮ ಸದ್ಯ ತಲೆಮರೆಸಿಕೊಂಡಿದ್ದಾಳೆ ಎನ್ನಲಾಗಿದೆ.

ಈ ಸಂಬಂಧ ಕರ್ನೂಲ್ 3 ಟೌನ್ ಪೊಲೀಸ್ ಠಾಣೆ ಹಾಗೂ ಧರ್ಮಾವರಂ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Related post

ದಿನ‌ ಭವಿಷ್ಯ 12-05-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 12-05-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಹೆಚ್ಚು ಆಶಾವಾದಿಗಳಾಗಿರಲು ನಿಮ್ಮನ್ನು ನೀವೇ ಪ್ರೇರೇಪಿಸಿಕೊಳ್ಳಿ. ಇದು ವಿಶ್ವಾಸ ಮತ್ತು ನಮ್ಯತೆಯನ್ನು ಹೆಚ್ಚಿಸುತ್ತದಾದರೂ ಅದೇ ಸಮಯದಲ್ಲಿ ಭಯ, ದ್ವೇಷ, ಅಸೂಯೆ, ಸೇಡಿನಂಥ ನಕಾರಾತ್ಮಕ ಭಾವನೆಗಳನ್ನು ಹಿಂದೆ ಬಿಡಲು ಸಿದ್ಧವಾಗಿ.…
ರಾಜ್ಯದಲ್ಲಿ ಮುಂದಿನ ಆರು ದಿನಗಳ ಕಾಲ ಭಾರಿ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಲ್ಲಿ ಮುಂದಿನ ಆರು ದಿನಗಳ ಕಾಲ ಭಾರಿ ಮಳೆ; ಹವಾಮಾನ ಇಲಾಖೆ…

ನ್ಯೂಸ್ ಆ್ಯರೋ : ಬರದಿಂದ ಕಂಗೆಟ್ಟಿರುವ ರಾಜ್ಯದ ರೈತರಿಗೆ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದೆ. ರಾಜ್ಯಾದ್ಯಂತ ಮುಂದಿನ 6 ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ…
ಇಂದು ಕೆಕೆಆರ್ , ಮುಂಬೈ ಇಂಡಿಯನ್ಸ್ ನಡುವೆ ಹಣಾಹಣಿ; ಯಾರಿಗೆ ಒಲಿಯಲಿದ್ದಾಳೆ ವಿಜಯಲಕ್ಷ್ಮೀ..?

ಇಂದು ಕೆಕೆಆರ್ , ಮುಂಬೈ ಇಂಡಿಯನ್ಸ್ ನಡುವೆ ಹಣಾಹಣಿ; ಯಾರಿಗೆ ಒಲಿಯಲಿದ್ದಾಳೆ…

ನ್ಯೂಸ್ ಆರೋ: ಕೋಲ್ಕತ್ತಾದ ಐತಿಹಾಸಿಕ ಮೈದಾನವಾಗಿರುವ ಈಡನ್ ಗಾರ್ಡನ್‌ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಮುಂಬೈ ಇಂಡಿಯನ್ಸ್ ಪಂದ್ಯ ನಡೆಯಲಿದೆ. ಎಲ್ಲಾ ಕ್ರಿಕೆಟ್ ಅಭಿಮಾನಿಗಳ ಪಂದ್ಯವನ್ನು ನೋಡಲು ಕಾತುರರಾಗಿದ್ದಾರೆ. ಕೆಕೆಆರ್…

Leave a Reply

Your email address will not be published. Required fields are marked *