ಅ.7ರ ದಾಳಿಯ ರೂವಾರಿಯನ್ನು ಕೊಂದು ಹಾಕಿದ ಇಸ್ರೇಲ್ – ಹಮಾಸ್ ನ ಕಮಾಂಡರ್ ಇಬ್ರಾಹಿಂ ಬಿಯಾರಿ ಇಸ್ರೇಲ್ ದಾಳಿಗೆ ಬಲಿ

ಅ.7ರ ದಾಳಿಯ ರೂವಾರಿಯನ್ನು ಕೊಂದು ಹಾಕಿದ ಇಸ್ರೇಲ್ – ಹಮಾಸ್ ನ ಕಮಾಂಡರ್ ಇಬ್ರಾಹಿಂ ಬಿಯಾರಿ ಇಸ್ರೇಲ್ ದಾಳಿಗೆ ಬಲಿ

ನ್ಯೂಸ್ ಆ್ಯರೋ : ಹಮಾಸ್ ವಿರುದ್ಧದ ಹೋರಾಟದಲ್ಲಿ ಇಸ್ರೇಲ್ ತಕ್ಕ ಮಟ್ಟಿಗೆ ಯಶಸ್ಸು ಸಾಧಿಸಿದ್ದು, ಇಸ್ರೇಲ್ ನ ವಾಯುಪಡೆಯು ಹಮಾಸ್ ನ ಕೇಂದ್ರ ಜಬಾಲಿಯಾ ಬೆಟಾಲಿಯನ್ ಕಮಾಂಡರ್ ಇಬ್ರಾಹಿಂ ಬಿಯಾರಿಯನ್ನು ಹತ್ಯೆ ಮಾಡಿದೆ ಎಂದು ಇಸ್ರೇಲ್ ನ ಭದ್ರತಾ ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ.

ಇಸ್ರೇಲಿ ರಕ್ಷಣಾ ಪಡೆಗಳ ಪ್ರಕಾರ, ಅಕ್ಟೋಬರ್ 7 ರಂದು ಇಸ್ರೇಲ್ ಮೇಲೆ ನಡೆದ ಭಯೋತ್ಪಾದಕ ದಾಳಿಯ ರೂವಾರಿ ಇಬ್ರಾಹಿಂ ಬಿಯಾರಿ. ಈ ಉದ್ದೇಶಿತ ದಾಳಿಯು ಈ ಪ್ರದೇಶದಲ್ಲಿ ಹಮಾಸ್ ನ ಕಮಾಂಡ್ ಮತ್ತು ನಿಯಂತ್ರಣವನ್ನು ಅಡ್ಡಿಪಡಿಸಿದ್ದಲ್ಲದೆ, ಬಿಯಾರಿ ಸುತ್ತಮುತ್ತಲಿನ ಗಣನೀಯ ಸಂಖ್ಯೆಯ ಭಯೋತ್ಪಾದಕರನ್ನು ಹತ್ಯೆ ಮಾಡಲು ಕಾರಣವಾಯಿತು ಎಂದು ಐಡಿಎಫ್ ಹೇಳಿಕೊಂಡಿದೆ.

ಹಲವು ವರ್ಷಗಳ ಹಿಂದಿನಿಂದಲೇ ವಿವಿಧ ಭಯೋತ್ಪಾದನಾ ಕೃತ್ಯಗಳಲ್ಲಿ ಬಿಯಾರಿ ಭಾಗಿಯಾಗಿದ್ದ. ಕಳೆದ ಅಕ್ಟೋಬರ್ 7 ರಂದು ನುಖ್ಬಾ ಭಯೋತ್ಪಾದಕರನ್ನು ಇಸ್ರೇಲ್ಗೆ ಕಳುಹಿಸುವಲ್ಲಿ ಆತನ ಪಾತ್ರ ಮುಖ್ಯವಾಗಿತ್ತು.

ಈತ 2004 ರಲ್ಲಿ ಅಶ್ದೋಡ್ ಬಂದರಿನ ಮೇಲಿನ ದಾಳಿಯಲ್ಲಿ ಭಾಗಿಯಾಗಿದ್ದ. ಹೆಚ್ಚುವರಿಯಾಗಿ, ಎರಡು ದಶಕಗಳ ಅವಧಿಯಲ್ಲಿ ಇಸ್ರೇಲ್ ಕಡೆಗೆ ರಾಕೆಟ್ ದಾಳಿಗಳನ್ನು ನಿರ್ದೇಶಿಸುವಲ್ಲಿ ಮತ್ತು ಐಡಿಎಫ್ ಪಡೆಗಳ ವಿರುದ್ಧ ದಾಳಿಗಳನ್ನು ಮುನ್ನಡೆಸುವಲ್ಲಿ ಬಿಯಾರಿ ಪ್ರಮುಖ ಪಾತ್ರ ವಹಿಸಿದ್ದ. ಇತ್ತೀಚಿನ ದಿನಗಳಲ್ಲಿ ಉತ್ತರ ಗಾಜಾ ಪಟ್ಟಿಯಲ್ಲಿ ಐಡಿಎಫ್ ಪಡೆಗಳ ವಿರುದ್ಧದ ಹೋರಾಟವನ್ನು ನಿರ್ವಹಿಸುವ ಜವಾಬ್ದಾರಿಯನ್ನು ವಹಿಸಿಕೊಂಡಿದ್ದ ಎಂದು ಐಡಿಎಫ್ ಹೇಳಿದೆ.

Related post

ಸಂಜೆಯ ಸ್ನ್ಯಾಕ್ಸ್‌ಗೆ ಮಾಡಿ ರುಚಿರುಚಿಯಾದ ಗೋಧಿ ಉಸ್ಲಿ; ಆರೋಗ್ಯಕ್ಕೂ ಒಳ್ಳೆಯದು, ರುಚಿನೂ ಸೂಪರ್

ಸಂಜೆಯ ಸ್ನ್ಯಾಕ್ಸ್‌ಗೆ ಮಾಡಿ ರುಚಿರುಚಿಯಾದ ಗೋಧಿ ಉಸ್ಲಿ; ಆರೋಗ್ಯಕ್ಕೂ ಒಳ್ಳೆಯದು, ರುಚಿನೂ…

ನ್ಯೂಸ್ ಆರೋ: ಆರೋಗ್ಯಕ್ಕೆ ಹಿತ ಎನಿಸುವ ಹಾಗೂ ರುಚಿಕಟ್ಟಾದ ರೆಸಿಪಿಯೊಂದನ್ನು ನಾವಿಂದು ಹೇಳಿಕೊಡುತ್ತೇವೆ. ಈ ಗೋಧಿ ಉಸ್ಲಿ ರೆಸಿಪಿಯನ್ನು ನೀವು ಬೇಕೆಂದರೆ ಸ್ನ್ಯಾಕ್ಸ್ ಆಗಿಯೂ ಬೆಳಗ್ಗಿನ ಉಪಾಹಾರವಾಗಿಯೂ ಮಾಡಿ…
ನವೋದಯ ವಿದ್ಯಾಲಯ ಸಮಿತಿ ಇಂದ ಶಿಕ್ಷಕರ ನೇಮಕ; ನೇರ ಸಂದರ್ಶನದ ಮೂಲಕ ಆಯ್ಕೆ

ನವೋದಯ ವಿದ್ಯಾಲಯ ಸಮಿತಿ ಇಂದ ಶಿಕ್ಷಕರ ನೇಮಕ; ನೇರ ಸಂದರ್ಶನದ ಮೂಲಕ…

ನ್ಯೂಸ್ ಆರೋ: ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯು ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ. ಒಟ್ಟು 2 ಪ್ರಾಜೆಕ್ಟ್​ ಅಸೋಸಿಯೇಟ್-I ಹುದ್ದೆ ಖಾಲಿ ಇದ್ದು, ಅರ್ಹ…
ತೆಲಂಗಾಣ ಚುನಾವಣೆ; ಸರತಿ ಸಾಲಿನಲ್ಲಿ ನಿಂತು ವೋಟ್ ಮಾಡಿದ ಟಾಲಿವುಡ್ ತಾರೆಯರು…!

ತೆಲಂಗಾಣ ಚುನಾವಣೆ; ಸರತಿ ಸಾಲಿನಲ್ಲಿ ನಿಂತು ವೋಟ್ ಮಾಡಿದ ಟಾಲಿವುಡ್ ತಾರೆಯರು…!

ನ್ಯೂಸ್ ಆ್ಯರೋ : ಇಂದು  4ನೇ ಹಂತದ ಲೋಕಸಭಾ ಚುನಾವಣೆಯ ಮತದಾನ ನಡೆಯುತ್ತಿದ್ದು, ಆಂಧ್ರಪ್ರದೇಶ ಮತ್ತು ತೆಲಂಗಾಣ ಸೇರಿ ಹಲವೆಡೆ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಇದೀಗ ಸಾಮಾನ್ಯರಂತೆಯೇ ಸರತಿ…

Leave a Reply

Your email address will not be published. Required fields are marked *