ಭಾಗ್ಯಲಕ್ಷ್ಮಿ ಬಾಂಡ್ ಫಲಾನುಭವಿಗಳಿಗೆ ಗುಡ್ ನ್ಯೂಸ್ – ಖಾತೆಗೆ ಜಮೆಯಾಗಲಿದೆ ಯೋಜನೆಯ ಹಣ, ಜಮೆಯಾಗಲಿರುವ ಮೊತ್ತವೆಷ್ಟು ಗೊತ್ತಾ?

ಭಾಗ್ಯಲಕ್ಷ್ಮಿ ಬಾಂಡ್ ಫಲಾನುಭವಿಗಳಿಗೆ ಗುಡ್ ನ್ಯೂಸ್ – ಖಾತೆಗೆ ಜಮೆಯಾಗಲಿದೆ ಯೋಜನೆಯ ಹಣ, ಜಮೆಯಾಗಲಿರುವ ಮೊತ್ತವೆಷ್ಟು ಗೊತ್ತಾ?

ನ್ಯೂಸ್ ಆ್ಯರೋ‌ : ಕರ್ನಾಟಕದ ಮಾಜಿ‌ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮಹತ್ವಾಕಾಂಕ್ಷೆಯ ಭಾಗ್ಯಲಕ್ಷ್ಮೀ ಬಾಂಡ್ ಗೆ ( Bhagyalakshmi scheme ) ಮುಂದಿನ ಮಾರ್ಚ್ ಗೆ 18 ವರ್ಷ ತುಂಬಲಿದೆ. ಈ ಯೋಜನೆಯ ಮೊದಲ ತಂಡದ ಫಲಾನುಭವಿಗಳಿಗೆ ಸಂತಸದ ಸುದ್ದಿ ಎನ್ನುವಂತೆ, ಖಾತೆಗೆ ಹಣ ಜಮೆ ಆಗಲಿದೆ. ಈ ಮೂಲಕ ನಿಮ್ಮ ಹೆಣ್ಣುಮಕ್ಕಳ ಉನ್ನತ ಶಿಕ್ಷಣಕ್ಕೆ ಅನುಕೂಲವಾಗಲಿದೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಯೋಜನೆಯ ಲಾಭ ಅರ್ಹ ಹಾಗೂ ನಿಯಮ ಪಾಲಿಸಿದ ಫಲಾನುಭವಿಗಳಿಗೆ ಮುಟ್ಟಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಿದ್ದಾರೆ. ಇದು ಹೆತ್ತವರ ಹಾಗೂ ಫಲಾನುಭವಿಗಳ ಮೊಗದಲ್ಲಿ ನಗೆಯನ್ನು ತರಿಸುವಂತೆ ಮಾಡಿದೆ.

ಅಂದಹಾಗೇ ಬಡತನ ರೇಖೆಗಿಂತ ಕೆಳಗಿರುವ ಕುಟುಂಬದಲ್ಲಿ ಜನಿಸಿದ ಇಬ್ಬರು ಹೆಣ್ಣುಮಕ್ಕಳಿಗೆ 2006-07ರಲ್ಲಿ ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಸಮ್ಮಿಶ್ರ ಸರ್ಕಾರ ಭಾಗ್ಯಲಕ್ಷ್ಮಿ ಬಾಂಡ್ ಯೋಜನೆ ಜಾರಿಗೊಳಿಸಿತ್ತು.

ಎಲ್‌ಐಸಿ ಜೊತೆಗೆ ಒಪ್ಪಂದ ಮಾಡಿಕೊಂಡು, ಹೆಣ್ಣು ಮಗುವಿನ ಹೆಸರಿನಲ್ಲಿ 10,000 ಠೇವಣಿ ಮಾಡಿಸಿ, ಮಗುವಿಗೆ 18 ವರ್ಷ ತುಂಬಿದಾಗ ಮೆಚ್ಯೂರಿಟಿ ಹಣ ನೀಡುವುದ ಒಪ್ಪಂದದ ಕರಾರು ಆಗಿತ್ತು. ಈ ಯೋಜನೆಯನ್ನು 2020ರ ಏಪ್ರಿನಿಂದ ಜೀವ ವಿಮಾ ನಿಗಮದಿಂದ ಅಂಚೆ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ. ಈಗ ಅದು ಭಾಗ್ಯಲಕ್ಷ್ಮಿ ಸುಕನ್ಯಾ ಯೋಜನೆ ಎಂದಾಗಿದೆ.

2008ರ ಜುಲೈ ಒಳಗೆ ಜನಿಸಿದ ಹೆಣ್ಣು ಮಗುವಿನ ಹೆಸರಿನಲ್ಲಿ 10 ಸಾವಿರ ರೂ.ಅನ್ನು ಪಾಲುದಾರ ಹಣಕಾಸು ಸಂಸ್ಥೆಯಲ್ಲಿ ಸರ್ಕಾರ ನಿಶ್ಚಿತ ಠೇವಣಿ ಇಟ್ಟಿದೆ. ಆ ಸಂಸ್ಥೆಯು ಬಡ್ಡಿ ಸಮೇತ 18 ವರ್ಷ ಪೂರ್ಣಗೊಂಡ ಮೊದಲನೇ ಮಗುವಿಗೆ ರೂ.34,751 ಹಾಗೂ 2ನೇ ಮಗುವಿಗೆ ರೂ.40,619 ಜಮಾ ಆಗಲಿದೆ.

2008ರ ಆಗಸ್ಟ್ ನಂತ್ರ ಜನಿಸಿದ ಮಗುವಿನ ಠೇವಣಿ ಮತ್ತ ರೂ.19,300ಗೆ ಹೆಚ್ಚಿಸಲಾಗಿದೆ. ಹೀಗಾಗಿ ಮೊದಲ ಹೆಣ್ಣುಮಗಿವಿಗೆ ರೂ.1,00,052 ಹಾಗೂ 2ನೇ ಮಗುವಿಗೆ ರೂ.18,350 ಠೇವಣಿಯಿಂದ ರೂ.1,00,097 ದೊರೆಯಲಿದೆ.

Related post

11 ವರ್ಷಗಳ ದಾಂಪತ್ಯದಲ್ಲಿ ಬಿರುಕು; ಡಿವೋರ್ಸ್‌ ವಿಚಾರಕ್ಕೆ ಟ್ರೋಲ್‌ ಮಾಡಿದವರಿಗೆ ಖ್ಯಾತ ಸಂಗೀತ ನಿರ್ದೇಶಕ ಹೇಳಿದಿಷ್ಟು…!

11 ವರ್ಷಗಳ ದಾಂಪತ್ಯದಲ್ಲಿ ಬಿರುಕು; ಡಿವೋರ್ಸ್‌ ವಿಚಾರಕ್ಕೆ ಟ್ರೋಲ್‌ ಮಾಡಿದವರಿಗೆ ಖ್ಯಾತ…

ನ್ಯೂಸ್ ಆರೋ: ತಮಿಳಿನ ಖ್ಯಾತ ಮ್ಯೂಸಿಕ್ ಡೈರೆಕ್ಟರ್ ಜಿ.ವಿ ಪ್ರಕಾಶ್ ಕುಮಾರ್ ಈಗ ಸುದ್ದಿಯಲ್ಲಿದ್ದು,11 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಿದ ಬೆನ್ನಲ್ಲೇ ಅವರ ವೈಯುಕ್ತಿಕ ವಿಚಾರಗಳನ್ನು ಟ್ರೋಲ್ ಮಾಡಲಾಗುತ್ತಿದೆ.…
ದೇವರ ನಾಡಿನಲ್ಲಿ ಮತ್ತೊಮ್ಮೆ ವೈರಸ್ ಆತಂಕ; ಕೊರೊನಾ, ನಿಫಾ ಬಳಿಕ ಆತಂಕ ಹೆಚ್ಚಿಸಿದ ವೆಸ್ಟ್‌ನೈಲ್‌

ದೇವರ ನಾಡಿನಲ್ಲಿ ಮತ್ತೊಮ್ಮೆ ವೈರಸ್ ಆತಂಕ; ಕೊರೊನಾ, ನಿಫಾ ಬಳಿಕ ಆತಂಕ…

ನ್ಯೂಸ್ ಆರೋ: ಕೊರೋನಾ ವೈರಸ್ ನ ಆತಂಕ ಮುಗಿಯುತ್ತಿದ್ದಂತೆ ಇದೀಗ ಮತ್ತೆ ಹೊಸದೊಂದು ವೈರಸ್ ಪತ್ತೆಯಾಗಿದೆ. ದಿನಕಳೆದಂತೆ ನಾನಾರೀತಿಯ ವೈರಸ್‌ಗಳು ಸೃಷ್ಠಿಯಾಗುತ್ತಿದ್ದು ಆತಂಕ ಹೆಚ್ಚಾಗುತ್ತಿದೆ. ಕೆಲವು ದಿನಗಳ ಹಿಂದಷ್ಟೇ ನೆರೆಯ…
ಮನೆಕೆಲಸದಾಕೆಯಿಂದ ನಟಿ ಛಾಯಾ ಸಿಂಗ್ ತಾಯಿ ಮನೆಯಲ್ಲಿ ಚಿನ್ನಾಭರಣ ಕಳ್ಳತನ; 66 ಗ್ರಾಂ ಚಿನ್ನ, 150 ಗ್ರಾಂ ಬೆಳ್ಳಿ ವಶ

ಮನೆಕೆಲಸದಾಕೆಯಿಂದ ನಟಿ ಛಾಯಾ ಸಿಂಗ್ ತಾಯಿ ಮನೆಯಲ್ಲಿ ಚಿನ್ನಾಭರಣ ಕಳ್ಳತನ; 66 ಗ್ರಾಂ…

ನ್ಯೂಸ್ ಆರೋ: ಕನ್ನಡ ಹಾಗೂ ಪರಭಾಷೆಯ ಸಿನಿಮಾಗಳಲ್ಲೂ ಮಿಂಚಿರುವ ನಟಿ ಛಾಯಾ ಸಿಂಗ್ ಅವರ ತಾಯಿ ಮನೆಯಲ್ಲಿ ಕಳ್ಳತನ ನಡೆದಿದೆ. ಚಿನ್ನಾಭರಣ ಕಳುವಾಗಿರುವ ಬಗ್ಗೆ ಛಾಯಾ ಸಿಂಗ್ ತಾಯಿ…

Leave a Reply

Your email address will not be published. Required fields are marked *