Honeytrap : ಫೇಸ್‌ಬುಕ್‌ ಬೆಡಗಿಯ ಪ್ರೀತಿಯಲ್ಲಿ ಯಾಮಾರಿದ ಯೋಧ ಆತ್ಮಹತ್ಯೆ – ಲಕ್ಷಾಂತರ ಲೂಟಿ ಮಾಡಿದಾಕೆ ವಿರುದ್ಧ ಪತ್ನಿಯಿಂದ ಎಫ್ಐಆರ್..!!

Honeytrap : ಫೇಸ್‌ಬುಕ್‌ ಬೆಡಗಿಯ ಪ್ರೀತಿಯಲ್ಲಿ ಯಾಮಾರಿದ ಯೋಧ ಆತ್ಮಹತ್ಯೆ – ಲಕ್ಷಾಂತರ ಲೂಟಿ ಮಾಡಿದಾಕೆ ವಿರುದ್ಧ ಪತ್ನಿಯಿಂದ ಎಫ್ಐಆರ್..!!

ನ್ಯೂಸ್ ಆ್ಯರೋ : ಪ್ರೀತಿ ಎನ್ನುವುದು ಒಂದು ರೀತಿಯ ನಶೆ. ಒಮ್ಮೆ ಇದರ ಪಾಶದಲ್ಲಿ ಹೊರಬರುವುದು ಅಷ್ಟು ಸುಲಭವಲ್ಲ. ಹೀಗಾಗಿ ಎಷ್ಟೋ ಮಂದಿಯ ಬದುಕು ದುರಂತದಲ್ಲಿ ಕೊನೆಯಾಗುತ್ತದೆ. ಅಪರೂಪ ಎಂಬಂತೆ ಕೆಲವರಿಗಷ್ಟೇ ತಾವು ಪ್ರೀತಿಸಿದವರೊಂದಿಗೆ ಸುಖಿ ಜೀವನ ನಡೆಸುವ ಅವಕಾಶ ದೊರೆಯುತ್ತದೆ.

ಇನ್ನು ಪ್ರೀತಿಯ ಹೆಸರಿನಲ್ಲಿ ಮೋಸ ಮಾಡುವವರಿಗೇನು ಕಮ್ಮಿ ಇಲ್ಲ. ಇಂತಹ ಮೋಸದ ಜಾಲಕ್ಕೆ ಸಿಲುಕಿದವರು ಸಾಕಷ್ಟು ಮಂದಿ ಇದ್ದಾರೆ.

ಆತ ದೇಶದ ಗಡಿ ಕಾಯುತ್ತಿದ್ದ ವೀರ ಯೋಧ. ಉಗ್ರರಿಗೂ ಬಗ್ಗಿದವನಲ್ಲ. ಆದರೆ ಪ್ರೀತಿಯ ಬಲೆಗೆ ಬಿದ್ದು ತನ್ನ ಜೀವವನ್ನೇ ಕಳೆದುಕೊಂಡಿದ್ದಾನೆ.

ಫೇಸ್‌ಬುಕ್‌ನಲ್ಲಿ ಪರಿಚಯವಾದ ಜೀವಿತಾ ಎನ್ನುವ ಯುವತಿಯ ಪ್ರೀತಿಯ ಬಲೆಯಲ್ಲಿ ಬಿದ್ದು ಮೃತಪಟ್ಟ ಸೈನಿಕ ಕೊಡಗಿನ ಸಂದೇಶ್.

ಮದುವೆಯಾಗಿದ್ದ ಸಂದೇಶ್ ನನ್ನ ಪ್ರೀತಿಯ ಬಲೆಗೆ ಬೀಳಿಸಿಕೊಂಡ ಜೀವಿತಾ ಆತನೊಂದಿಗೆ ಹಲವಾರು ಕಡೆಗಳಲ್ಲಿ ಸುತ್ತಾಡಿ, ತಮ್ಮಿಬ್ಬರ ಕೆಲವು ಖಾಸಗಿ ಫೋಟೋ, ವಿಡಿಯೋಗಳನ್ನು ಮಾಡಿಕೊಂಡಿದ್ದಳು.

ಬಳಿಕ ವರಸೆ ಬದಲಿಸಿದ ಜೀವಿತಾ ತನ್ನ ಸ್ನೇಹಿತರೊಂದಿಗೆ ಸೇರಿಕೊಂಡು ಆತನಿಗೆ ಫೋಟೋ, ವಿಡಿಯೋಗಳನ್ನು ತೋರಿಸಿ ನಿರಂತರವಾಗಿ ಬ್ಲ್ಯಾಕ್‌ಮೇಲ್‌ ಮಾಡಿ ಹಂತ ಹಂತವಾಗಿ ಬರೋಬ್ಬರಿ 20 ಲಕ್ಷ ರೂ. ಹಣ, ಯೋಧನ ಬಳಿಯಿದ್ದ ಕಾರು, ಆಸ್ತಿಯ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾಳೆ. ಇಷ್ಟು ಸಾಲದು ಎಂದುಕೊಂಡು ಯೋಧನಿಗೆ ಏಕಾಏಕಿ 50 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದಾಳೆ. ಪರಿಣಾಮ ಯೋಧ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಸಾಯುವುದಕ್ಕೂ ಮೊದಲು ಪತ್ನಿ ಯಶೋಧಳಿಗೆ ಎಲ್ಲವನ್ನೂ ಸಂದೇಶ್ ತಿಳಿಸಿದ್ದ. ಹೀಗಾಗಿ ಯೋಧನ ಪತ್ನಿ ಯಶೋಧ ಪೊಲೀಸ್‌ ಠಾಣೆಯಲ್ಲಿ ಜೀವಿತಾ ವಿರುದ್ಧ ದೂರು ನೀಡಿದ್ದಾಳೆ.

Related post

ಡೈರೆಕ್ಟರ್​ ಹುದ್ದೆಗೆ ಅರ್ಜಿ ಆಹ್ವಾನಿಸಿದ UIDAI; ತಿಂಗಳಿಗೆ 2 ಲಕ್ಷಕ್ಕೂ ಅಧಿಕ ಸಂಬಳ

ಡೈರೆಕ್ಟರ್​ ಹುದ್ದೆಗೆ ಅರ್ಜಿ ಆಹ್ವಾನಿಸಿದ UIDAI; ತಿಂಗಳಿಗೆ 2 ಲಕ್ಷಕ್ಕೂ ಅಧಿಕ…

ನ್ಯೂಸ್ ಆರೋ: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 3 ಡೈರೆಕ್ಟರ್, ಅಸಿಸ್ಟೆಂಟ್ ಡೈರೆಕ್ಟರ್​ ಹುದ್ದೆಗಳು…
ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡಿ ಸುಪ್ರೀಂ ಕೋರ್ಟ್ ಆದೇಶ

ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡಿ ಸುಪ್ರೀಂ ಕೋರ್ಟ್ ಆದೇಶ

ನ್ಯೂಸ್ ಆ್ಯರೋ : ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಅವರಿಗೆ ಮಧ್ಯಂತರ ಜಾಮೀನು ನೀಡಿ ಇಂದು…
ಆರೋಗ್ಯ ಸಮಸ್ಯೆ; 14 ತಿಂಗಳ ಬಳಿಕ ಸ್ಯಾಂಟ್ರೋ ರವಿಗೆ ಜಾಮೀನು ನೀಡಿದ ನ್ಯಾಯಾಲಯ

ಆರೋಗ್ಯ ಸಮಸ್ಯೆ; 14 ತಿಂಗಳ ಬಳಿಕ ಸ್ಯಾಂಟ್ರೋ ರವಿಗೆ ಜಾಮೀನು ನೀಡಿದ…

ನ್ಯೂಸ್ ಆ್ಯರೋ : ಅತ್ಯಾಚಾರ, ಕೊಲೆ ಬೆದರಿಕೆ ಪ್ರಕರಣದ ಆರೋಪಿ ಕೆ.ಎಸ್.ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿಗೆ ಮೈಸೂರಿನ ಆರನೇ ಹೆಚ್ಚುವರಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಪ್ರಕರಣದಲ್ಲಿ ಬಂಧಿತನಾಗಿ…

Leave a Reply

Your email address will not be published. Required fields are marked *