ದೀಪಾವಳಿ ವೇಳೆಗೆ ಗೃಹಲಕ್ಷ್ಮಿ ಯೋಜನೆ ಶೇ.100ರಷ್ಟು ಪೂರ್ಣಗೊಳಿಸುವ ಗುರಿ – ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆ

ದೀಪಾವಳಿ ವೇಳೆಗೆ ಗೃಹಲಕ್ಷ್ಮಿ ಯೋಜನೆ ಶೇ.100ರಷ್ಟು ಪೂರ್ಣಗೊಳಿಸುವ ಗುರಿ – ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆ

ನ್ಯೂಸ್ ಆ್ಯರೋ : ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಶೇಕಡ 95ರಷ್ಟು ಮನೆಯ ಒಡತಿಯರಿಗೆ ತಲುಪಿದ್ದು, ತಾಂತ್ರಿಕ ಸಮಸ್ಯೆಗೆ ಶೀಘ್ರವೇ ಪರಿಹಾರ ಸಿಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಹೇಳಿದ್ದಾರೆ.

ಬೆಂಗಳೂರಿನ ಬಿಡಬ್ಲ್ಯುಎಸ್ಎಸ್ ಬಿ ಕಚೇರಿಯಲ್ಲಿರುವ ಬೆಂಗಳೂರು ಒನ್ ಕೇಂದ್ರದಲ್ಲಿ ನಡೆಯುತ್ತಿರುವ ಗೃಹಲಕ್ಷ್ಮಿ ಯೋಜನೆಯಡಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ತರಬೇತಿ ಕುರಿತು ಸಚಿವರು ಮಾಹಿತಿ ಪಡೆದುಕೊಂಡರು. ಗೃಹಲಕ್ಷ್ಮಿ ಯೋಜನೆ ಕುರಿತು ಆಗಿರುವ ತಾಂತ್ರಿಕ ದೋಷಗಳನ್ನು ಶೀಘ್ರವೇ ಬಗೆಹರಿಸಬೇಕೆಂದು ಸಿಡಿಪಿಒಗಳಿಗೆ ಸೂಚನೆ ನೀಡಿದರು. ತಾಂತ್ರಿಕ ‌ದೋಷ, ಸಿಬ್ಬಂದಿಗಳ ತೊಡಕಿನ ಕುರಿತು ಪರಿಶೀಲನೆ ನಡೆಸಿದರು.

ಶೇಕಡ 95 ರಷ್ಟು ಯಶಸ್ವಿ

ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಗೃಹಲಕ್ಷ್ಮಿ ಯೋಜನೆ ಇದುವರೆಗೂ ಶೇಕಡ 95 ರಷ್ಟು ಯಶಸ್ವಿಯಾಗಿದ್ದು, ಸಮಸ್ಯೆಗಳನ್ನು ಬಗೆಹರಿಸುವ ಸಲುವಾಗಿ ಪ್ರತಿದಿನ ಮೂರು ಜಿಲ್ಲೆಗಳ ಸಿಡಿಪಿಒಗಳಿಗೆ ತರಬೇತಿ ನೀಡಲಾಗುತ್ತಿದೆ ಎಂದರು. ಗೃಹಲಕ್ಷ್ಮಿ ಯೋಜನೆಗೆ ಇದುವರೆಗೂ 1 ಕೋಟಿ 16 ಲಕ್ಷದ 65 ಸಾವಿರ ಮಹಿಳೆಯರು ನೋಂದಣಿ ಮಾಡಿಸಿದ್ದಾರೆ. ಈ ಪೈಕಿ ಆಗಸ್ಟ್ ನಲ್ಲಿ ಗೃಹಲಕ್ಷ್ಮಿ ಯರ ಆಕೌಂಟ್ ಗೆ – 2 ಸಾವಿರದ 119 ಕೋಟಿ ಹಣ ಹಾಕಲಾಗಿದ್ದು, ಈ ಮೂಲಕ ಶೇಕಡ 97ರಷ್ಟು ಡಿಬಿಟಿ ಮುಖಾಂತರ ಹಣ ಹಾಕಲಾಗಿದೆ ಎಂದು ಸಚಿವರು ವಿವರಿಸಿದರು.

ಆಗಸ್ಟ್ ತಿಂಗಳಲ್ಲಿ ಐದು ಲಕ್ಷ ಕುಟುಂಬಗಳಿಗೆ ತಾಂತ್ರಿಕ ದೋಷದಿಂದ ಹಣ ಹೋಗಿಲ್ಲ. ಸೆಪ್ಟೆಂಬರ್ ನಲ್ಲಿ 82% ಕುಟುಂಬಗಳಿಗೆ ಹಣ ಹಾಕಲಾಗಿದ್ದು 12 ಲಕ್ಷ ಕುಟುಂಬಗಳಿಗೆ ತಾಂತ್ರಿಕ ದೋಷದಿಂದ ಅಥವಾ ಕೆವೈಸಿ ಸಮಸ್ಯೆಯಿಂದ ಹಣ ಬ್ಯಾಂಕ್ ಆಕೌಂಟ್ ನಲ್ಲಿ ಉಳಿದಿದೆ. ಇನ್ನು
ಅಕ್ಟೋಬರ್ ನಲ್ಲಿ 2400 ಕೋಟಿ ರೂ ಬಿಡುಗಡೆಯಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.

ದೀಪಾವಳಿ ವೇಳೆ ಶೇಕಡಾ 100ರಷ್ಟು ಗುರಿ

ಆಗಸ್ಟ್ 15 ರೊಳಗೆ ನೋಂದಣಿ ಮಾಡಿಕೊಂಡವರಿಗೆ ಇದುವರೆಗೆ ದುಡ್ಡು ಬಾರದೇ ಇದ್ರೆ, ಒಟ್ಟಿಗೆ ಮೂರು ತಿಂಗಳ ಹಣ ಹಾಕಲಾಗುತ್ತದೆ. ಇದುವರೆಗೆ ಹಣ ಬಾರದೇ ಇದ್ರೂ ಪೂರ್ಣ ಬಾಕಿ ಹಣ ಹಾಕಲಾಗುವುದು ಎಂದರು. ದೀಪಾವಳಿ ಹಬ್ಬದ ವೇಳೆಗೆ ಎಲ್ಲಾ ಫಲಾನುಭವಿಗಳಿಗೆ ಹಣ ಹೋಗುವಂತೆ ನೋಡಿಕೊಳ್ಳಲಾಗುವುದು ಎಂದರು. ಹೀಗಾಗಿ ಅಧಿಕಾರಿಗಳಿಗೆ ಟ್ರೈನಿಂಗ್ ನೀಡಲಾಗುತ್ತಿದ್ದು, ಇನ್ನು ಹತ್ತು ದಿನದಲ್ಲಿ ಗೃಹಲಕ್ಷ್ಮಿ ಗೊಂದಲ ಕ್ಲಿಯರ್ ಆಗಲಿದೆ ಎಂದರು.

ಈ ವೇಳೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ನಿರ್ದೇಶಕರಾದ ಎಂ.ಎಸ್.ಅರ್ಚನಾ, ಇ-ಗವರ್ನೆನ್ಸ್ ಇಲಾಖೆಯ ನಿರ್ದೇಶಕ ದಿಲೀಶ್ ಉಪಸ್ಥಿತರಿದ್ದರು.

Related post

ಹಾಸನ ಪೆನ್‌ಡ್ರೈವ್ ಪ್ರಕರಣ; 16 ಬೇಡಿಕೆಗಳನ್ನು ಮುಂದಿಟ್ಟು ಸಿಎಂಗೆ ಬಂತು ಬಹಿರಂಗ ಪತ್ರ

ಹಾಸನ ಪೆನ್‌ಡ್ರೈವ್ ಪ್ರಕರಣ; 16 ಬೇಡಿಕೆಗಳನ್ನು ಮುಂದಿಟ್ಟು ಸಿಎಂಗೆ ಬಂತು ಬಹಿರಂಗ…

ನ್ಯೂಸ್ ಆರೋ: ಮಹಿಳೆಯೊಬ್ಬರ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ಸಚಿವ ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು ಸಿಕ್ಕಿದೆ. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪ್ರಜ್ಞಾವಂತ ನಾಗರೀಕರು ಎಂಬ ಹೆಸರಿನಲ್ಲಿ…
ಯಶ್ ಮೂವಿಯಲ್ಲಿ ಶೂರ್ಪನಖಿಯಾಗಿ ಮಿಂಚಲಿದ್ದಾರೆ ರಾಕುಲ್!

ಯಶ್ ಮೂವಿಯಲ್ಲಿ ಶೂರ್ಪನಖಿಯಾಗಿ ಮಿಂಚಲಿದ್ದಾರೆ ರಾಕುಲ್!

ನ್ಯೂಸ್ ಆರೋ: ಕೆಜಿಎಫ್ ನಂತರ ಹಿಟ್ ಸಿನಿಮಾಗಳಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಿರುವ ಯಶ್ ಇದೀಗ ಮತ್ತೊಂದು ಸಿನಿಮಾ ನಿರ್ಮಾಣಕ್ಕೆ ಕೈ ಹಾಕಿದ್ದಾರೆ. ಆ ಚಿತ್ರಕ್ಕೆ ಶೂರ್ಪನಖಿಯಾಗಿ ರಕುಲ್ ಕಾಣಿಸಿಕೊಳ್ಳಲಿದ್ದಾರೆ. ಹೌದು,ಶೂರ್ಪನಕಿಯಾಗಿ…
ಪಾಕ್ ಆಕ್ರಮಿತ ಕಾಶ್ಮೀರ ಜನರಿಗೆ ಬಂಪರ್ ಪ್ಯಾಕೇಜ್; ಆಹಾರ ಉತ್ಪನ್ನಗಳ- ವಿದ್ಯುತ್‌ ದರ ಇಳಿಕೆ ಮಾಡಿದ ಪಾಕ್‌ ಸರ್ಕಾರ

ಪಾಕ್ ಆಕ್ರಮಿತ ಕಾಶ್ಮೀರ ಜನರಿಗೆ ಬಂಪರ್ ಪ್ಯಾಕೇಜ್; ಆಹಾರ ಉತ್ಪನ್ನಗಳ- ವಿದ್ಯುತ್‌…

ನ್ಯೂಸ್ ಆರೋ: ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಜನರು ಭಾರತಕ್ಕೆ ಸೇರುತ್ತೇವೆ ಎಂದು ನಡೆಸುತ್ತಿದ್ದ ಪ್ರತಿಭಟನೆಗೆ ಪಾಕಿಸ್ತಾನದ ಸರ್ಕಾರ ಮಣಿದಿದೆ. ಹೌದು, ಜನರ ಪ್ರತಿಭಟನೆ ಬೆನ್ನಲ್ಲೇ ಪಾಕ್‌ ಆಕ್ರಮಿತ ಕಾಶ್ಮೀರದ…

Leave a Reply

Your email address will not be published. Required fields are marked *