ಸರ್ಕಾರಿ ಸಂಸ್ಥೆಗಳಿಂದಲೇ ಸಾವಿರಾರು ಕೋಟಿ ಕರೆಂಟ್ ಬಿಲ್ ಬಾಕಿ – ಬಿಬಿಎಂಪಿ ಮೇಲೆ ಗರಂ ಆದ ಬೆಸ್ಕಾಂ..! ಬಿಬಿಎಂಪಿ ಬಾಕಿ ಎಷ್ಟಿದೆ ಗೊತ್ತಾ?

ಸರ್ಕಾರಿ ಸಂಸ್ಥೆಗಳಿಂದಲೇ ಸಾವಿರಾರು ಕೋಟಿ ಕರೆಂಟ್ ಬಿಲ್ ಬಾಕಿ – ಬಿಬಿಎಂಪಿ ಮೇಲೆ ಗರಂ ಆದ ಬೆಸ್ಕಾಂ..! ಬಿಬಿಎಂಪಿ ಬಾಕಿ ಎಷ್ಟಿದೆ ಗೊತ್ತಾ?

ನ್ಯೂಸ್ ಆ್ಯರೋ : ಕೆಲವೊಮ್ಮೆ ಅನೇಕ ವಿಚಾರಗಳಲ್ಲಿ ಅರಿವಿದ್ದರೂ ಕೂಡಾ ಸರ್ಕಾರಿ ಸಿಬ್ಬಂದಿಗಳು ಅಥವಾ ಸರ್ಕಾರಿ ಸಂಸ್ಥೆಗಳು ಎಡವುತ್ತಲೇ ಇರುತ್ತದೆ. ಬೆಸ್ಕಾಂ ಪಾಡಂತೂ ಈಗ ಹೇಳತೀರದು. ಗೃಹಜ್ಯೋತಿ ಯೋಜನೆ ಬಂದ ಮೇಲೆ ಜನಸಾಮಾನ್ಯರು ಕರೆಂಟ್ ಬಿಲ್ ಕಟ್ಟುತ್ತಿಲ್ಲ. ಇದೀಗ ಸರ್ಕಾರಿ ಸಂಸ್ಥೆಗಳಿಂದಲೂ ಕರೆಂಟ್ ಬಿಲ್ ಕಟ್ಟದೆ ಬಾಕಿಯಾಗಿದೆ.

ಇತ್ತ BBMP ಸೇರಿದಂತೆ ಅನೇಕ ಸರ್ಕಾರಿ ಸಂಸ್ಥೆಗಳೂ ಸಾವಿರಾರು ಕೋಟಿ ರೂಪಾಯಿ ಕರೆಂಟ್ ಬಿಲ್ ಬಾಕಿ ಉಳಿಸಿಕೊಂಡಿವೆ. ಜನರಿಗೆಲ್ಲಾ ಬುದ್ಧಿ ಹೇಳೋ ಬಿಬಿಎಂಪಿಯೇ 800 ಕೋಟಿಗೂ ರೂ.ಗಿಂತ ಅಧಿಕ ಬಿಲ್ ಬಾಕಿ ಉಳಿಸಿಕೊಂಡಿದೆ.

ಗೃಹಜ್ಯೋತಿ ಜಾರಿಯಾದ ಮೇಲೆ ಮತ್ತಷ್ಟು ಸಮಸ್ಯೆಗಳ ಸುಳಿಗೆ ಬೆಸ್ಕಾಂ ಸಿಲುಕಿಕೊಂಡಂತಿದೆ. ಒಂದುಕಡೆ ಜನರು ಕರೆಂಟ್ ಬಿಲ್ ಕಟ್ಟೋಕೆ ಮೀನಮೀಷ ಎಣಿಸಿದ್ರೆ, ಇತ್ತ ಸರ್ಕಾರಿ ಸಂಸ್ಥೆಗಳೂ ಕರೆಂಟ್ ಬಿಲ್ ಕಟ್ಟದೇ ಕಳ್ಳಾಟ ಆಡ್ತಿದೆ. ಅದರಲ್ಲೂ ತೆರಿಗೆ, ದಂಡ, ಶುಲ್ಕ ಅಂತ ಜನರ ಪ್ರಾಣ ತೆಗೆಯೋ ಬಿಬಿಎಂಪಿಯೇ ನೂರಾರು ಕೋಟಿ ರೂಪಾಯಿ ಬೆಸ್ಕಾಂಗೆ ಕರೆಂಟ್ ಬಾಕಿ ಉಳಿಸಿಕೊಂಡಿದೆ ಎಂದರೆ ನೀವು ನಂಬಲೇಬೇಕು.

ಹೌದು, ಬಿಬಿಎಂಪಿ ಸೇರಿದಂತೆ ರಾಜ್ಯದ ಹಲವು ಸರ್ಕಾರಿ ಸಂಸ್ಥೆಗಳು ಕೆಲವು ತಿಂಗಳಿನಿಂದ ಕರೆಂಟ್ ಬಿಲ್ ಕಟ್ಟಿಲ್ಲ. ಇದರಿಂದ ಬೆಸ್ಕಾಂಗೆ 6,374 ಕೋಟಿ ರೂಪಾಯಿ ಬಿಲ್ ಬರುವುದು ಬಾಕಿ ಇದೆ.

ಬೆಸ್ಕಾಂಗೆ ಸರ್ಕಾರಿ ಸಂಸ್ಥೆಗಳೇ ಹೊರೆ:

ಬೆಸ್ಕಾಂಗೆ ಸರ್ಕಾರಿ ಸಂಸ್ಥೆಗಳೇ ಹೆಚ್ಚಿನ ಹೊರೆಯಾಗಿದೆ. ಪ್ರತಿಷ್ಠಿತ ಸಂಸ್ಥೆಗಳೇ ಸಾವಿರಾರು ಕೋಟಿ ಬಿಲ್ ಬಾಕಿ ಉಳಿಸಿಕೊಂಡಿದೆ. ಬಿಬಿಎಂಪಿ, ಜಲಮಂಡಳಿ, ನಗರಾಭಿವೃದ್ಧಿ ಇಲಾಖೆ, ಸಣ್ಣ ಮತ್ತು ದೊಡ್ಡ ನೀರಾವರಿ ಇಲಾಖೆ, ಇತರೆ ಸರ್ಕಾರಿ ಸಂಸ್ಥೆಗಳಿಂದ ಒಟ್ಟು 6,000 ಕೋಟಿ ರೂ. ಗಿಂತ ಅಧಿಕ ಬಿಲ್ ಬಾಕಿ ಬರಬೇಕಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಯಾವ ಸಂಸ್ಥೆ – ಎಷ್ಟು ಬಾಕಿ ಗೊತ್ತಾ..?

ಬಿಬಿಎಂಪಿ : 820 ಕೋಟಿ ರೂ.
ಜಲಮಂಡಳಿ : 495 ಕೋಟಿ ರೂ.
ನಗರಾಭಿವೃದ್ಧಿ ಇಲಾಖೆ : 113 ಕೋಟಿ ರೂ.
ಸಣ್ಣ & ದೊಡ್ಡ ನೀರಾವರಿ ಇಲಾಖೆ : 51 ಕೋಟಿ ರೂ.
ಇತರೆ ಸರ್ಕಾರಿ ಸಂಸ್ಥೆಗಳು : 4,885 ಕೋಟಿ ರೂ.
ಒಟ್ಟು : 6,374 ಕೋಟಿ

ಬೆಸ್ಕಾಂಗೆ ಬಿಬಿಎಂಪಿ 820 ಕೋಟಿ ರೂಪಾಯಿ ಕರೆಂಟ್ ಬಿಲ್ ಬಾಕಿ ಇಟ್ಟಿದೆ. ಬಿಬಿಎಂಪಿಗೆ ಹಲವು ಬಾರಿ ನೋಟೀಸ್ ಕೊಟ್ಟರೂ ಯಾವುದೇ ಪ್ರಯೋಜನವಾಗಿಲ್ಲ. ನಮ್ಮ ಮೇಲಿನ ಹೊರೆ ತಪ್ಪಿಸಲು ನಾವು ಅನಿವಾರ್ಯವಾಗಿ ವಸೂಲಿ ಮಾಡಲೇಬೇಕಾದ ಸ್ಥಿತಿಗೆ ಬಂದಿದೆ ಎಂದು ಬೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ. ಈ ನಿಟ್ಟಿನಲ್ಲಿ ಬೆಸ್ಕಾಂ ಇಲಾಖೆ ಕರೆಂಟ್ ಬಿಲ್ ಕಟ್ಟದ ಇಲಾಖೆಗೆ ಫುಲ್ ಕ್ಲಾಸ್ ತೆಗೆದುಕೊಂಡಿದೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *