ಗೂಗಲ್ ಪೇ ಗ್ರಾಹಕರಿಗೆ ಸಿಗಲಿದೆ 1ಲಕ್ಷದ ವರೆಗೆ ಪರ್ಸನಲ್‌ ಲೋನ್ – ಇಷ್ಟು ಸುಲಭವಾಗಿ ಸಾಲ ಪಡೆಯಲು ಅರ್ಜಿ ಸಲ್ಲಿಸಬಹುದು..!

ಗೂಗಲ್ ಪೇ ಗ್ರಾಹಕರಿಗೆ ಸಿಗಲಿದೆ 1ಲಕ್ಷದ ವರೆಗೆ ಪರ್ಸನಲ್‌ ಲೋನ್ – ಇಷ್ಟು ಸುಲಭವಾಗಿ ಸಾಲ ಪಡೆಯಲು ಅರ್ಜಿ ಸಲ್ಲಿಸಬಹುದು..!

ನ್ಯೂಸ್ ಆ್ಯರೋ : ಭಾರತ ದೇಶ ಡಿಜಿಟಲಿಕರಣದ ಉತ್ತುಂಗದಲ್ಲಿದೆ. ಈಗೆಲ್ಲ ಯಾರೂ ಕೂಡ ಜೇಬಿನಲ್ಲಿ‌ ಹಣ ಇಟ್ಟುಕೊಳ್ಳುವುದಿಲ್ಲ. ಏನೇ ಹಣದ ವ್ಯವಹಾರಗಳಿದ್ದರೂ ಕೂಡ ಮೊಬೈಲ್ ಪೇಮೆಂಟ್ ಮಾಡುತ್ತಾರೆ. ಇನ್ನು ಈ ಯುಪಿಐ ಪೇಮೆಂಟ್ ಗಾಗಿ ಕೆಲವು ಥರ್ಡ್ ಪಾರ್ಟಿ ಅಪ್ಲಿಕೇಶನ್ ಗಳಿದ್ದು, ಅವುಗಳಲ್ಲಿ ಗೂಗಲ್ ಪೇ ಕೂಡ ಒಂದು. ಕ್ಷಣಮಾತ್ರದಲ್ಲಿ ಯಾವುದೇ ರೀತಿಯ ಪೇಮೆಂಟ್ ಮಾಡಿಕೊಳ್ಳಲು ಸಹಾಯಕವಾಗುವಂತಹ ಗೂಗಲ್ ಪೇ ಇದೀಗ ಗ್ರಾಹಕರಿಗೆ ಅನುಕೂಲವಾಗುವಂತಹ ಮತ್ತೊಂದು ಸೌಲಭ್ಯ ನೀಡಲು ನಿರ್ಧರಿಸಿದೆ.

ಗೂಗಲ್ ಪೇ ನೀಡಲಿದೆ 1ಲಕ್ಷ ರೂ.ಸಾಲ!

ಸಾಲ ಪಡೆಯಬೇಕಿದ್ದರೆ ಬ್ಯಾಂಕಿನಿಂದ ಬ್ಯಾಂಕ್ ಗೆ ಅಲೆಯುವ ಜಂಜಾಟ ಹೊಸದೇನಲ್ಲ. ಆದರೆ ಇದೀಗ ಗೂಗಲ್ ಪೇ ಆ ಅಲೆದಾಟಕ್ಕೆ ಬ್ರೇಕ್ ಹಾಕಲು ನಿರ್ಧರಿಸಿದೆ. ನೀವು ಇನ್ನು ಮುಂದೆ ಕುಳಿತಲ್ಲಿಂದಲೇ ಸಾಲ ಪಡೆಯಬಹುದು. ನಿಮ್ಮ ಮೊಬೈಲ್ ನಲ್ಲಿ ಗೂಗಲ್ ಪೇ ಅಥವಾ Gpay ಅಪ್ಲಿಕೇಶನ್ ಇದ್ರೆ ಸಾಕು, ಸುಲಭವಾಗಿ ಒಂದು ಲಕ್ಷ ರೂಪಾಯಿಗಳ ವರೆಗೆ ವೈಯಕ್ತಿಕ ಸಾಲ ಪಡೆಯಬಹುದು. ಇದು ಹೆಚ್ಚು ಅನುಕೂಲವಾಗಲಿದ್ದು ಬಹಳ ತುರ್ತು ಪರಿಸ್ಥಿತಿಯಲ್ಲಿಯೂ ಕೂಡ ಸಾಲ ಸೌಲಭ್ಯ ಪಡೆಯಬಹುದು.

ದಾಖಲೆಗಳು ಅಗತ್ಯವಿಲ್ಲ!

ಬ್ಯಾಂಕ್ ಗಳಿಂದ ಅಥವಾ ಇನ್ಯಾವುದೇ ಸಂಘಸಂಸ್ಥೆಗಳಿಂದ ಸಾಲ ಪಡೆಯಬೇಕಿದ್ದರೆ ದಾಖಲೆಗಳ ಅನಿವಾರ್ಯತೆ ಇದ್ದೇ ಇರುತ್ತದೆ. ಆದರೆ ಗೂಗಲ್ ಪೇ ಮೂಲಕ ಸಾಲ ಪಡೆಯಲು ಆ ತಲೆನೋವೇ ಇಲ್ಲ. ಹೌದು ಗೂಗಲ್ ಪೇ ಮೂಲಕ 1ಲಕ್ಷದವರೆಗೆ ಯಾವುದೇ ದಾಖಲೆಗಳಿಲ್ಲದೆ ಸಾಲ ಸೌಲಭ್ಯ ಪಡೆಯಬಹುದು. ಆಕ್ಸಿಸ್ ಬ್ಯಾಂಕ್, ಐಡಿಎಫ್‌ಸಿ ಬ್ಯಾಂಕ್ ಮೊದಲಾದ ಬ್ಯಾಂಕ್ ಗಳ ಜೊತೆಗೆ ಕಾರ್ಯನಿರ್ವಹಿಸುತ್ತಿರುವ Google pay ಈ ಬ್ಯಾಂಕ್ ಗಳ ಮೂಲಕ ಗ್ರಾಹಕರಿಗೆ ಸಾಲ ಸೌಲಭ್ಯ ಒದಗಿಸುತ್ತದೆ.

ಗೂಗಲ್ ಪೇ ಸಾಲಕ್ಕೆ ಅರ್ಜಿ ಸಲ್ಲಿಕೆ ಹೇಗೆ?

ನೀವು ಗೂಗಲ್ ಪೇ ಗ್ರಾಹಕರಾಗಿದ್ದರೆ 15,000 ಗಳಿಂದ ಒಂದು ಲಕ್ಷ ರೂಪಾಯಿಗಳ ವರೆಗೂ ಕೂಡ ಸಾಲ ಪಡೆಯಬಹುದು. ಇದಕ್ಕಾಗಿ ನೀವು ಮೊದಲು ನಿಮ್ಮ ಮೊಬೈಲ್ ನಲ್ಲಿ ಗೂಗಲ್ ಅಪ್ಲಿಕೇಶನ್ ಓಪನ್‌ ಮಾಡಿ.
ಬಳಿಕ ನೀವು ಸ್ವಲ್ಪ ಸ್ಕ್ರಾಲ್ ಡೌನ್ ಮಾಡಿದರೆ ಲೋನ್ ಎನ್ನುವ ಆಯ್ಕೆ ಕಾಣಿಸುತ್ತದೆ. ಅದನ್ನು ಕ್ಲಿಕ್ ಮಾಡಿದರೆ ಇನ್ನೊಂದು ಪೇಜ್ ಓಪನ್ ಆಗುತ್ತದೆ, ಅದರಲ್ಲಿ ಪಡೆಯಬಹುದಾದ ಸಾಲದ ಮೊತ್ತ, EMI ಇನ್ನಿತರ ಮಾಹಿತಿಗಳು ಇರುತ್ತವೆ.

ನಂತರ ನೀವು ಕಂಟಿನ್ಯೂ ಎಂದು ಪ್ರೆಸ್ ಮಾಡಿ. ಈಗ ನೀವು ಸಾಲ ಪಡೆದುಕೊಳ್ಳಲು ಅರ್ಹರಾಗಿದ್ದರೆ ಅದರ ಬಗ್ಗೆ ಮಾಹಿತಿ ಲಭ್ಯವಾಗುತ್ತದೆ. ನಂತರ ನೀವು ನಿಮ್ಮ ವಿವರಗಳನ್ನು ನಮೂದಿಸಿ ಸಾಲಕ್ಕೆ ನೇರವಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಕ್ಷಣಮಾತ್ರದಲ್ಲಿ ನಿಮ್ಮ ಖಾತೆಗೆ ಹಣ ವರ್ಗಾವಣೆ ಆಗುತ್ತದೆ.

Related post

ಹಾಸನ ಪೆನ್‌ಡ್ರೈವ್ ಪ್ರಕರಣ; 16 ಬೇಡಿಕೆಗಳನ್ನು ಮುಂದಿಟ್ಟು ಸಿಎಂಗೆ ಬಂತು ಬಹಿರಂಗ ಪತ್ರ

ಹಾಸನ ಪೆನ್‌ಡ್ರೈವ್ ಪ್ರಕರಣ; 16 ಬೇಡಿಕೆಗಳನ್ನು ಮುಂದಿಟ್ಟು ಸಿಎಂಗೆ ಬಂತು ಬಹಿರಂಗ…

ನ್ಯೂಸ್ ಆರೋ: ಮಹಿಳೆಯೊಬ್ಬರ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ಸಚಿವ ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು ಸಿಕ್ಕಿದೆ. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪ್ರಜ್ಞಾವಂತ ನಾಗರೀಕರು ಎಂಬ ಹೆಸರಿನಲ್ಲಿ…
ಯಶ್ ಮೂವಿಯಲ್ಲಿ ಶೂರ್ಪನಖಿಯಾಗಿ ಮಿಂಚಲಿದ್ದಾರೆ ರಾಕುಲ್!

ಯಶ್ ಮೂವಿಯಲ್ಲಿ ಶೂರ್ಪನಖಿಯಾಗಿ ಮಿಂಚಲಿದ್ದಾರೆ ರಾಕುಲ್!

ನ್ಯೂಸ್ ಆರೋ: ಕೆಜಿಎಫ್ ನಂತರ ಹಿಟ್ ಸಿನಿಮಾಗಳಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಿರುವ ಯಶ್ ಇದೀಗ ಮತ್ತೊಂದು ಸಿನಿಮಾ ನಿರ್ಮಾಣಕ್ಕೆ ಕೈ ಹಾಕಿದ್ದಾರೆ. ಆ ಚಿತ್ರಕ್ಕೆ ಶೂರ್ಪನಖಿಯಾಗಿ ರಕುಲ್ ಕಾಣಿಸಿಕೊಳ್ಳಲಿದ್ದಾರೆ. ಹೌದು,ಶೂರ್ಪನಕಿಯಾಗಿ…
ಪಾಕ್ ಆಕ್ರಮಿತ ಕಾಶ್ಮೀರ ಜನರಿಗೆ ಬಂಪರ್ ಪ್ಯಾಕೇಜ್; ಆಹಾರ ಉತ್ಪನ್ನಗಳ- ವಿದ್ಯುತ್‌ ದರ ಇಳಿಕೆ ಮಾಡಿದ ಪಾಕ್‌ ಸರ್ಕಾರ

ಪಾಕ್ ಆಕ್ರಮಿತ ಕಾಶ್ಮೀರ ಜನರಿಗೆ ಬಂಪರ್ ಪ್ಯಾಕೇಜ್; ಆಹಾರ ಉತ್ಪನ್ನಗಳ- ವಿದ್ಯುತ್‌…

ನ್ಯೂಸ್ ಆರೋ: ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಜನರು ಭಾರತಕ್ಕೆ ಸೇರುತ್ತೇವೆ ಎಂದು ನಡೆಸುತ್ತಿದ್ದ ಪ್ರತಿಭಟನೆಗೆ ಪಾಕಿಸ್ತಾನದ ಸರ್ಕಾರ ಮಣಿದಿದೆ. ಹೌದು, ಜನರ ಪ್ರತಿಭಟನೆ ಬೆನ್ನಲ್ಲೇ ಪಾಕ್‌ ಆಕ್ರಮಿತ ಕಾಶ್ಮೀರದ…

Leave a Reply

Your email address will not be published. Required fields are marked *