ಚಿನ್ನ ಅಡವಿಟ್ಟು ಸಾಲ ಮಾಡಿದ್ದೀರಾ? – ಬದಲಾಗಿರುವ ಗೋಲ್ಡ್ ಲೋನ್ ಹೊಸ ನಿಯಮಗಳನ್ನು ಗಮನಿಸಿ…

ಚಿನ್ನ ಅಡವಿಟ್ಟು ಸಾಲ ಮಾಡಿದ್ದೀರಾ? – ಬದಲಾಗಿರುವ ಗೋಲ್ಡ್ ಲೋನ್ ಹೊಸ ನಿಯಮಗಳನ್ನು ಗಮನಿಸಿ…

ನ್ಯೂಸ್ ಆ್ಯರೋ : ಅನಿವಾರ್ಯ ಸಂದರ್ಭಗಳಲ್ಲಿ ಹಣದ ಅವಶ್ಯಕತೆ ಇದ್ದಾಗ ಪ್ರತಿಯೊಬ್ಬರೂ ಒಂದಲ್ಲಾ ಒಂದು ರೀತಿಯ ಧನಸಹಾಯವನ್ನು ಬಯಸುತ್ತಾರೆ. ಅದಕ್ಕಾಗಿ ಬ್ಯಾಂಕ್ ಅಥವಾ ಫೈನಾನ್ಸ್ ಗಳಿಂದ ಸಾಲ ಪಡೆಯುವುದಕ್ಕೂ ಮುಂದಾಗುತ್ತೇವೆ. ಯಾವುದೇ ಉದ್ಯೋಗದಲ್ಲಿ ಇದ್ದರೂ ಸ್ವಂತ ಉದ್ದಿಮೆ ಮಾಡುತ್ತಿದ್ದರೂ ಕೂಡ ಯಾವುದೇ ಅಡಮಾನ ಇಲ್ಲದೆ ವೈಯಕ್ತಿಕ ಸಾಲವನ್ನು ಸುಲಭವಾಗಿ ಪಡೆಯಬಹುದು.

ಆದರೆ ವೈಯಕ್ತಿಕ ಸಾಲ ಹಾಗೂ ಚಿನ್ನದ ಮೇಲಿನ ಸಾಲ ಎನ್ನುವ ಆಯ್ಕೆ ಬಂದಾಗ ಯಾವುದು ಉತ್ತಮ ಆಯ್ಕೆ ಎಂಬುದನ್ನು ಮತ್ತು ಚಿನ್ನದ ಮೇಲಿನ ಸಾಲದ ಕೆಲವು ಬದಲಾದ ನಿಯಮಗಳ ಬಗ್ಗೆ ತಿಳಿದುಕೊಳ್ಳಬೇಕು.

ವೈಯಕ್ತಿಕ ಸಾಲದ ಮೇಲಿನ ನಿಯಮ ಬದಲಾವಣೆ!

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ನಲ್ಲಿ ನೀಡಲಾಗುವ ವೈಯಕ್ತಿಕ ಸಾಲದ ಮೇಲಿನ ನಿಯಮಗಳನ್ನು ಇನ್ನಷ್ಟು ಬಿಗಿಗೊಳಿಸಿದೆ. ಇದಕ್ಕೆ ಮುಖ್ಯ ಕಾರಣ ವೈಯಕ್ತಿಕ ಸಾಲ ಯಾವುದೇ ಗ್ಯಾರಂಟಿ ತೆಗೆದುಕೊಳ್ಳದೆ ಕೊಡುವಂತಹ ಸಾಲವಾಗಿರುತ್ತದೆ. ಇದರೊಂದಿಗೆ ಈ ಸಾಲವನ್ನು ತೆಗೆದುಕೊಂಡ ವ್ಯಕ್ತಿ ಸಾಲ ಮರುಪಾವತಿ ಮಾಡದೆ ಇದ್ದರೆ ಆತ ಡೀಫಾಲ್ಟರ್ ಆಗುತ್ತಾನೆ. ಹಾಗೂ ಇದು ಬ್ಯಾಂಕಿಗೆ ನಷ್ಟವು ಆಗಬಹುದು. ಆದ್ದರಿಂದ ವೈಯಕ್ತಿಕ ಸಾಲದ ನಿಯಮಗಳನ್ನು ಇನ್ನಷ್ಟು ಬಲಪಡಿಸಲಾಗಿದೆ. ಅದೇ ರೀತಿ ಬಡ್ಡಿ ದರ ಕೂಡ ಜಾಸ್ತಿಯಾಗಿದೆ ಎನ್ನಲಾಗಿದೆ‌.

ಚಿನ್ನದ ಮೇಲಿನ ಸಾಲದಲ್ಲಿ ಬದಲಾದ ನಿಯಮ!

ಇದೀಗ ಚಿನ್ನದ ಮೇಲೆ ಸಾಲ ಪಡೆದುಕೊಳ್ಳಲು ನೀವು ಬಯಸಿದರೆ ಬದಲಾದ ನಿಯಮದ ಬಗ್ಗೆ ತಿಳಿದುಕೊಳ್ಳಬೇಕು. ಚಿನ್ನವನ್ನು ಅಡವಿಟ್ಟು ಸಾಲ ತೆಗೆದುಕೊಳ್ಳುವುದಿದ್ದರೆ ಈಗ ಬಹಳ ಬೇಗ ಸಾಲ ಪಡೆಯಬಹುದು. ನೀವು ಚಿನ್ನವನ್ನು ಅಡವಿಟ್ಟು ಕೆಲವೇ ನಿಮಿಷಗಳಲ್ಲಿ ನಿಮಗೆ ಸಾಲ ಸೌಲಭ್ಯ ಸಿಗುತ್ತದೆ. ಅಷ್ಟೇ ಅಲ್ಲ ಆನ್ಲೈನ್ ಮೂಲಕವೂ ಕೂಡ ಚಿನ್ನದ ಮೇಲಿನ ಸಾಲ ಪಡೆದುಕೊಳ್ಳಲು ಸಾಧ್ಯವಿದೆ.

ಚಿನ್ನದ ಮೇಲಿನ ಸಾಲದ ಲಾಭಗಳು!

ಚಿನ್ನದ ಮೇಲಿನ‌ಸಾಲದ ಪ್ರಮುಖ ಪ್ರಯೋಜನ ಅಂದ್ರೆ ನೀವು ವೈಯಕ್ತಿಕ ಸಾಲದಂತೆ ಚಿನ್ನದ ಸಾಲಕ್ಕೆ ಪ್ರತಿ ತಿಂಗಳು EMI ಪಾವತಿಸಬೇಕಾಗಿಲ್ಲ. ನೀವು ಸಾಲ ತೆಗೆದುಕೊಂಡ ತಕ್ಷಣವೇ ಸಂಪೂರ್ಣ ಬಡ್ಡಿಯನ್ನು ಪಾವತಿಸಿ ಸಾಲದ ಅವಧಿ ಮುಗಿಯುವಾಗ ಉಳಿದ ಹಣವನ್ನು ಪಾವತಿಸಬಹುದು ಅಥವಾ ಪ್ರತಿ ತಿಂಗಳು ಕೇವಲ ಬಡ್ಡಿಯನ್ನು ಮಾತ್ರ ಪಾವತಿಸಿ ಸಂಪೂರ್ಣ ಅಸಲು ಮೊತ್ತವನ್ನು ಸಾಲದ ಅವಧಿ ಮುಗಿದಾಗ ಪಾವತಿಸಬಹುದು.

ಇತ್ತೀಚಿನ ದಿನಗಳಲ್ಲಿ ಚಿನ್ನದ ಬೆಲೆ ಕೂಡ ಜಾಸ್ತಿ ಆಗುತ್ತಿರುವ ಹಿನ್ನೆಲೆಯಲ್ಲಿ ನೀವು ಇಡುವ ಚಿನ್ನಕ್ಕೆ ಹೆಚ್ಚಿನ ಮೊತ್ತದ ಸಾಲವನ್ನು ಕೂಡ ಪಡೆದುಕೊಳ್ಳಬಹುದು. ನಿಮ್ಮ ಚಿನ್ನಕ್ಕೆ ಎಷ್ಟು ಸಾಲ ಸಿಗುತ್ತದೆ ಎಂಬುದನ್ನು ಬ್ಯಾಂಕ್ ನಿರ್ಧರಿಸುತ್ತದೆ.

Related post

ರಾಜ್ಯದಲ್ಲಿ ಮುಂದಿನ ಆರು ದಿನಗಳ ಕಾಲ ಭಾರಿ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಲ್ಲಿ ಮುಂದಿನ ಆರು ದಿನಗಳ ಕಾಲ ಭಾರಿ ಮಳೆ; ಹವಾಮಾನ ಇಲಾಖೆ…

ನ್ಯೂಸ್ ಆ್ಯರೋ : ಬರದಿಂದ ಕಂಗೆಟ್ಟಿರುವ ರಾಜ್ಯದ ರೈತರಿಗೆ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದೆ. ರಾಜ್ಯಾದ್ಯಂತ ಮುಂದಿನ 6 ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ…
ಇಂದು ಕೆಕೆಆರ್ , ಮುಂಬೈ ಇಂಡಿಯನ್ಸ್ ನಡುವೆ ಹಣಾಹಣಿ; ಯಾರಿಗೆ ಒಲಿಯಲಿದ್ದಾಳೆ ವಿಜಯಲಕ್ಷ್ಮೀ..?

ಇಂದು ಕೆಕೆಆರ್ , ಮುಂಬೈ ಇಂಡಿಯನ್ಸ್ ನಡುವೆ ಹಣಾಹಣಿ; ಯಾರಿಗೆ ಒಲಿಯಲಿದ್ದಾಳೆ…

ನ್ಯೂಸ್ ಆರೋ: ಕೋಲ್ಕತ್ತಾದ ಐತಿಹಾಸಿಕ ಮೈದಾನವಾಗಿರುವ ಈಡನ್ ಗಾರ್ಡನ್‌ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಮುಂಬೈ ಇಂಡಿಯನ್ಸ್ ಪಂದ್ಯ ನಡೆಯಲಿದೆ. ಎಲ್ಲಾ ಕ್ರಿಕೆಟ್ ಅಭಿಮಾನಿಗಳ ಪಂದ್ಯವನ್ನು ನೋಡಲು ಕಾತುರರಾಗಿದ್ದಾರೆ. ಕೆಕೆಆರ್…
17 ಲಕ್ಷದ ಮಹೀಂದ್ರಾ ಥಾರ್ ಸೇಲ್ ಮಾಡಿ ಐಷಾರಾಮಿ ಬೆಂಜ್ ಖರೀದಿಸಿದ ನಿರೂಪಕಿ ಅನುಪಮಾ ಗೌಡ!

17 ಲಕ್ಷದ ಮಹೀಂದ್ರಾ ಥಾರ್ ಸೇಲ್ ಮಾಡಿ ಐಷಾರಾಮಿ ಬೆಂಜ್ ಖರೀದಿಸಿದ…

ನ್ಯೂಸ್ ಆರೋ: ಕನ್ನಡದ ಖ್ಯಾತ ನಿರೂಪಕಿ ಅನುಪಮಾ ಗೌಡ ತಮ್ಮ ಕೆಂಪು ಬಣ್ಣದ ಥಾರ್ ಜೀಪ್ ಮಾರಾಟ ಮಾಡಿದ್ದಾರೆ. ಈಗ ಐಷಾರಾಮಿ ಬೆಂಜ್ ಖರೀದಿಸಲು ಕಾರಣ ರಿವೀಲ್ ಮಾಡಿದ್ದಾರೆ.…

Leave a Reply

Your email address will not be published. Required fields are marked *