ವೀರಪ್ಪನ್ ಸಹಚರ ಜ್ಞಾನಪ್ರಕಾಶ್ ಸಾವು…! – ಬಾಂಬ್ ಸ್ಫೋಟ ಪ್ರಕರಣದಲ್ಲಿ 29ವರ್ಷ ಕಾರಾಗೃಹದಲ್ಲಿದ್ದ ಆರೋಪಿ ಈತ…!

ವೀರಪ್ಪನ್ ಸಹಚರ ಜ್ಞಾನಪ್ರಕಾಶ್ ಸಾವು…! – ಬಾಂಬ್ ಸ್ಫೋಟ ಪ್ರಕರಣದಲ್ಲಿ 29ವರ್ಷ ಕಾರಾಗೃಹದಲ್ಲಿದ್ದ ಆರೋಪಿ ಈತ…!

ನ್ಯೂಸ್ ಆ್ಯರೋ : ವೀರಪ್ಪನ್ ಬಹುಶಃ ಎಲ್ಲರಿಗೂ ಪರಿಚಿತವಾದ ಹೆಸರು. ಇದೀಗ ದಶಕಗಳ ಕಾಲ ವೀರಪ್ಪನ್‌ ಸಹಚರನಾಗಿದ್ದ ಜ್ಞಾನ ಪ್ರಕಾಶ್‌ ಅನಾರೋಗ್ಯದ ಕಾರಣದಿಂದ ನಿಧನರಾಗಿದ್ದಾರೆ.

ಪಾಲಾರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿ ಅನಾರೋಗ್ಯದ ಕಾರಣಕ್ಕೆ ಜೈಲಿನಿಂದ ಹೋದ ವರ್ಷದ ಡಿಸೆಂಬರ್‌ 20ರಂದು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಜ್ಞಾನಪ್ರಕಾಶ್ (69) ಕೊನೆಯುಸಿರೆಳೆದಿದ್ದಾರೆ.

ಅಂತ್ಯಕ್ರಿಯೆ ಎಲ್ಲಿ ನಡೆಯಲಿದೆ..?

ಅವರಿಗೆ ಪತ್ನಿ, ಮಗ ಹಾಗೂ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಶನಿವಾರ ಸಂದನಪಾಳ್ಯದಲ್ಲಿ ಕ್ರಿಶ್ಚಿಯನ್‌ ಸಂಪ್ರದಾಯದಂತೆ ಅಂತ್ಯ ಸಂಸ್ಕಾರ ಹನೂರು ತಾಲ್ಲೂಕಿನ ಅರಣ್ಯದಂಚಿನ ಸಂದನಪಾಳ್ಯದಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.

ಜ್ಞಾನಪ್ರಕಾಶ್ ಭಾಗಿಯಾಗಿದ್ದ ಪ್ರಕರಣದ ಹಿನ್ನೆಲೆ:

1993ರಲ್ಲಿ ನಡೆದಿದ್ದ ಪಾಲಾರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಕಾಡುಗಳ್ಳ ವೀರಪ್ಪನ್, ಬಿಲವೇಂದ್ರನ್ ಸೈಮನ್ , ಮೀಸೆಕಾರ ಮಾದಯ್ಯ ಅವರೊಂದಿಗೆ ಭಾಗಿಯಾಗಿದ್ದರು ಎಂದು ಮೈಸೂರಿನ ಟಾಡಾ ನ್ಯಾಯಾಲಯ 1997ರಲ್ಲಿ ಜ್ಞಾನಪ್ರಕಾಶ್‌ ಗೆ ಗಲ್ಲು ಶಿಕ್ಷೆ ವಿಧಿಸಿತ್ತು.


2014ರಲ್ಲಿ ಸುಪ್ರಿಂ ಕೋರ್ಟ್, ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಗೆ ಪರಿವರ್ತಿಸಿ ಆದೇಶಿಸಿತ್ತು. ಈ ವೇಳೆ ಬೆಳಗಾವಿಯ ಹಿಂಡಲಗಾ ಹಾಗೂ ಮೈಸೂರು ಕಾರಾಗೃಹದಲ್ಲಿ 29 ವರ್ಷಗಳ ಜೈಲು ಶಿಕ್ಷೆ ಅನುಭವಿಸಿದ್ದ ಜ್ಞಾನಪ್ರಕಾಶ್‌ಗೆ ಮೂರು ವರ್ಷಗಳ ಹಿಂದೆ ಶ್ವಾಸಕೋಶ ಕ್ಯಾನ್ಸರ್‌ ಪತ್ತೆಯಾಗಿತ್ತು. ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರಿಗೆ ಮಾನವೀಯತೆ ಆಧಾರದ ಮೇಲೆ ಸುಪ್ರೀಂ ಕೋರ್ಟ್‌ 2022ರ ನ.26ರಂದು ಜಾಮೀನು ನೀಡಿತ್ತು.


ಮೈಸೂರಿನ ಕಾರಾಗೃಹದಿಂದ 2022ರ ಡಿ.20ರಂದು ಬಿಡುಗಡೆಯಾಗಿದ್ದ ಅವರು ಸಂದನಪಾಳ್ಯದಲ್ಲಿಯೇ ಇದ್ದು ಚಿಕಿತ್ಸೆ ಪಡೆಯುತ್ತಿದ್ದರು. ಅನಾರೋಗ್ಯದಿಂದ ಚೇತರಿಸಿಕೊಳ್ಳದ ಜ್ಞಾನಪ್ರಕಾಶ್, ಶುಕ್ರವಾರ ರಾತ್ರಿ 8ರ ಸುಮಾರಿಗೆ ಮನೆಯಲ್ಲಿ ಮೃತಪಟ್ಟಿದ್ದಾರೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *