ಮೋಸ್ಟ್ ವಾಂಟೆಡ್ ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ ವಿಷಪ್ರಾಶನ – ಆಸ್ಪತ್ರೆಯಲ್ಲಿ ಚಿಕಿತ್ಸೆ, ಮತ್ತೊಂದು ಬೇಟೆಗೆ ಸ್ಕೆಚ್ ಹಾಕಿತ್ತಾ ಅನಾಮಿಕ ಪಡೆ?

ಮೋಸ್ಟ್ ವಾಂಟೆಡ್ ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ ವಿಷಪ್ರಾಶನ – ಆಸ್ಪತ್ರೆಯಲ್ಲಿ ಚಿಕಿತ್ಸೆ, ಮತ್ತೊಂದು ಬೇಟೆಗೆ ಸ್ಕೆಚ್ ಹಾಕಿತ್ತಾ ಅನಾಮಿಕ ಪಡೆ?

ನ್ಯೂಸ್ ಆ್ಯರೋ : ಭಯೋತ್ಪಾದನೆ, ಮಾದಕವಸ್ತು ಕಳ್ಳಸಾಗಾಣಿಕೆ ಹಾಗೂ ಸಂಘಟಿತ ಅಪರಾಧ ಸೇರಿದಂತೆ ವಿವಿಧ ಗಂಭೀರ ಪ್ರಕರಣಗಳಲ್ಲಿ ಪ್ರಮುಖ ಆರೋಪಿಯಾಗಿರುವ ದಾವೂದ್ ಇಬ್ರಾಹಿಂ ಮೋಸ್ಟ್ ವಾಂಟೆಡ್ ಆಗಿರುವ ಭೂಗತ ಪಾತಕಿ ಆಗಿದ್ದು, ಸದ್ಯ ಆಸ್ಪತ್ರೆಗೆ ದಾಖಲಾಗಿದ್ದಾನೆ. ವಿಷಪ್ರಾಶನದಿಂದ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸ್ಥಿತಿ ಗಂಭೀರವಾಗಿದ್ದು, ಪಾಕಿಸ್ತಾನದ ಕರಾಚಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಹಿಂದೆಯೇ ಖಾಯಿಲೆಯಿಂದ ಬಳಲುತ್ತಿದ್ದ ದಾವೂದ್ ಇಬ್ರಾಹಿಂಗೆ ವಿಷಪ್ರಾಶನ ಮಾಡಲಾಗಿದ್ದು, ಕಳೆದ ಎರಡು ದಿನಗಳಿಂದ ಕರಾಚಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ. ದಾವೂದ್ ಇಬ್ರಾಹಿಂ ಆಸ್ಪತ್ರೆಗೆ ದಾಖಲಾಗಿರುವ ಬಗ್ಗೆ ಭಾರತದಿಂದ ಹಾಗೂ ಪಾಕಿಸ್ತಾನದ ಅಧಿಕಾರಿಗಳು ಖಚಿತಪಡಿಸಿಲ್ಲ. ಹಾಗೂ ಆಸ್ಪತ್ರೆಗೆ ದಾಖಲಾದ ಕಾರಣದ ಬಗ್ಗೆಯೂ ಯಾವುದೇ ವಿವರ ಲಭ್ಯವಿಲ್ಲ, ಹಾಗೂ ಕೆಲವರಿಗೆ ಅಷ್ಟೇ ದಾವೂದ್ ಇಬ್ರಾಹಿಂ ಕೊಠಡಿಗೆ ಬಿಡಲಾಗುತ್ತಿದೆ ಎಂದು ವರದಿಯಾಗಿದೆ.

ಭಾರತಕ್ಕೆ ಬೇಕಾಗಿರುವ ಮೋಸ್ಟ್ ವಾಂಟೆಡ್ ಉಗ್ರರ ಪಟ್ಟಿಯಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಅಗ್ರಸ್ಥಾನದಲ್ಲಿದ್ದಾನೆ. ದಾವೂದ್ ಇಬ್ರಾಹಿಂ ಪತ್ತೆಗೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) 25 ಲಕ್ಷ ರೂಪಾಯಿ ಬಹುಮಾನ ಘೋಷಿಸಿದೆ. ಭಾರತ ಮತ್ತು ಅಮೆರಿಕದಿಂದ ಅಂತಾರಾಷ್ಟ್ರೀಯ ಭಯೋತ್ಪಾದಕ ಎಂದು ಗುರುತಿಸಲ್ಪಟ್ಟಿರುವ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸದ್ಯ ಪಾಕಿಸ್ತಾನದ ಕರಾಚಿಯಲ್ಲಿ ವಾಸವಾಗಿದ್ದಾನೆ ಎನ್ನಲಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ವದಂತಿ..!

ಸಾಮಾಜಿಕ ಜಾಲತಾಣಗಳಲ್ಲಿ ದಾವೂದ್ ಇಬ್ರಾಹಿಂ ಆರೋಗ್ಯದ ಬಗ್ಗೆ ಹಾಗೂ ಆಸ್ಪತ್ರೆಗೆ ದಾಖಲಾಗಿರುವ ಬಗ್ಗೆ ಹಲವು ವಿಚಾರಗಳು ಹರಿದಾಡುತ್ತಿದ್ದು, ಈವರೆಗೂ ಕೆಲವು ವದಂತಿಗಳನ್ನು ಕೂಡಾ ಹಬ್ಬಿಸಲಾಗುತ್ತಿದೆ. ಖಚಿತವಾದ ಯಾವುದೇ ಮಾಹಿತಿ ಅಧಿಕೃತವಾಗಿ ಹೊರ ಬಿದ್ದಿಲ್ಲ. ಆದರೆ ಪಾಕಿಸ್ತಾನದ ‌ಮಾಧ್ಯಮಗಳಲ್ಲಿ ಈ ಸುದ್ದಿ ಪ್ರಸಾರ ಆಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಮತ್ತೊಂದು ಮೂಲದ ಪ್ರಕಾರ ದಾವೂದ್ ಇಬ್ರಾಹಿಂ ನಿಧನ ಹೊಂದಿರುವ ಬಗ್ಗೆಯೂ ಮಾಹಿತಿ ಹರಿದಾಡುತ್ತಿದ್ದು ಇದಕ್ಕೂ ಅಧಿಕೃತ ಮಾಹಿತಿ ಲಭ್ಯವಿಲ್ಲ.. ಪಾಕಿಸ್ತಾನದ ಮಾಧ್ಯಮಗಳೂ ಕೂಡ ಈ ಬಗ್ಗೆ ವರದಿ ಮಾಡಿಲ್ಲ.

ವಾಸ್ತವವಾಗಿ ಭಾರತಕ್ಕೆ ಬೇಕಾದ ಹಲವು ಉಗ್ರರು ವಿದೇಶಗಳಲ್ಲಿ ಇದ್ದರೂ ಏಕಾಏಕಿ ಗುಂಡಿನ ದಾಳಿಗೆ ಅಥವಾ ವಿಷಪ್ರಾಶನಕ್ಕೆ ಒಳಗಾಗಿ ಪ್ರಾಣ ಕಳೆದುಕೊಳ್ಳುವುದು ಇತ್ತೀಚೆಗೆ ಸಾಮಾನ್ಯವಾಗಿ ವರದಿಯಾಗುತ್ತಿದೆ. ಇದರ ಹಿಂದೆ ಭಾರತದ ಕೈವಾಡ ಇದೆ ಎಂದು ಹೇಳಲಾಗುತ್ತಿದ್ದರೂ ಅದಕ್ಕೆ ಯಾವುದೇ ಸಾಕ್ಷಿ ಇದುವರೆಗೂ ಸಿಕ್ಕಿಲ್ಲ. ಆದರೆ ಭಾರತಕ್ಕೆ ಬೇಕಾದವರನ್ನು ಅಲ್ಲಲ್ಲಿ ಹೊಸಕಿ ಹಾಕುತ್ತಿರುವ ಅನಾಮಿಕ ಪಡೆ ಯಾವುದೆಂಬ ಪ್ರಶ್ನೆಗೆ ಜಗತ್ತಿನಲ್ಲೇ ಉತ್ತರ ಸಿಕ್ಕಿಲ್ಲ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *