ತಿಬಾರ್ : ವಿಷಜಂತು ಕಚ್ಚಿದವರಿಗೆ ಈ ಬಾವಿಯ ನೀರೇ ಸಂಜೀವಿನಿಯಂತೆ…! – ಇದು ಇರೋದು ಎಲ್ಲಿ ಗೊತ್ತಾ..?

ತಿಬಾರ್ : ವಿಷಜಂತು ಕಚ್ಚಿದವರಿಗೆ ಈ ಬಾವಿಯ ನೀರೇ ಸಂಜೀವಿನಿಯಂತೆ…! – ಇದು ಇರೋದು ಎಲ್ಲಿ ಗೊತ್ತಾ..?

ನ್ಯೂಸ್ ಆ್ಯರೋ : ವಿಷಜಂತುಗಳು ಕಡಿದರೆ ಅದರಿಂದ ಅನುಭವಿಸುವ ನೋವು ಅಷ್ಟಿಷ್ಟಲ್ಲ. ಹಾವು, ಚೇಳು, ಜೇಡ ಹೀಗೆ ಯಾವುದೇ ವಿಷಜಂತುಗಳು ಕಚ್ಚಿದರೆ ಸಾಕು. ನಾವು ಹಳ್ಳಿಮದ್ದುಗಳ ಮೊರೆ ಹೋಗುತ್ತೇವೆ. ಆದರೆ ಇಲ್ಲಿ ನೋಡಿ ವಿಶೇಷ. ಈ ಬಾವಿಯ ನೀರು ಕುಡಿದರೆ ಸಾಕು….ಯಾವುದೇ ವಿಷಜಂತುಗಳು ಕಚ್ಚಿದರೂ ಅಪಾಯಗಳಿಂದ ಪಾರಾಗಬಹುದಂತೆ…!

ಈ ಬಾವಿಯ ನೀರು ಎಲ್ಲಾ ಬಾವಿಗಳಲ್ಲಿ ಸಿಗುವ ಮಾಮೂಲಿ ನೀರಲ್ಲ. ಬದಲಾಗಿ ಜೀವ ಉಳಿಸುವ ಸಂಜೀವಿನಿ. ಯಾವುದೇ ರೀತಿಯ ವಿಷ ಜಂತುಗಳು ಕಡಿದರೆ ಆ ಬಾವಿಯ ನೀರನ್ನು ಕುಡಿದು, ಅಲ್ಲಿನ ಮಣ್ಣನ್ನು ಹಾಕಿಕೊಂಡರೆ ವಿಷವೆಲ್ಲಾ ಇಳಿದು ಬಿಡುತ್ತದೆ. ಆದರೆ ಆ ಬಾವಿಯ ನೀರು ವರ್ಷಕ್ಕೊಂದು ಬಾರಿ ಮಾತ್ರ ಸಿಗೋದು.

ಈ ಬಾವಿ ಇರೋದು ಎಲ್ಲಿ..?

ಮಂಗಳೂರಿನ ಕಟೀಲು ಸಮೀಪದ ಶಿಬರೂರು ಎಂಬಲ್ಲಿರುವ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಪವಿತ್ರ ಬಾವಿ ಇದು. ವರ್ಷಕ್ಕೊಂದು ಬಾರಿ ನಡೆಯುವ ಇಲ್ಲಿನ ವಾರ್ಷಿಕ ಜಾತ್ರಾ ಮಹೋತ್ಸವದ ಐದು ದಿನಗಳ ಕಾಲ ಮಾತ್ರ ಈ ಬಾವಿಯ ನೀರನ್ನು ತೆಗೆದು ಭಕ್ತರಿಗೆ ನೀಡಲಾಗುತ್ತದೆ.

ಪುರಾತನ ಕಾಲದಲ್ಲಿ ಸ್ಥಳೀಯ ದೈವೀ ವೈದ್ಯರಾದ ತ್ಯಾಂಪಣ್ಣ ಶೆಟ್ಟಿ ಎಂಬವರು ತನ್ನಲ್ಲಿದ್ದ ವಿಷ ಹೀರುವ ಕಲ್ಲೊಂದನ್ನು ಲೋಕದ ಜನತೆಯ ಒಳಿತಿಗಾಗಿ ಈ ಬಾವಿಗೆ ಹಾಕಿದ್ದಾರೆ. ಹೀಗಾಗಿ ಆ ಶಕ್ತಿಯಿಂದಲೇ ಈ ಬಾವಿಯ ನೀರು ಯಾವುದೇ ರೀತಿಯ ವಿಷವನ್ನು ಹೀರಿಕೊಳ್ಳುತ್ತದೆ ಅನ್ನುವ ನಂಬಿಕೆ. ಹಿಂದಿನ ಕಾಲದಿಂದ ಉಳಿದುಕೊಂಡು ಬಂದಿದೆ.

ಜಾತ್ರಾ ಮಹೋತ್ಸವದ 5 ದಿನದಲ್ಲಿ ಈ ದೈವಸ್ಥಾನಕ್ಕೆ ಲಕ್ಷಾಂತರ ಭಕ್ತರು ಈ ಪವಿತ್ರ ನೀರನ್ನು ಕೊಂಡೊಯ್ಯಲು ಬರುತ್ತಾರೆ. ವರ್ಷದಲ್ಲಿ ಒಂದು ಸಲ ಮಾತ್ರ ಸಿಗುವ ನೀರನ್ನು ಅಲ್ಲೇ ತೀರ್ಥ ರೂಪದಲ್ಲಿ ಕುಡಿದು ನಂತರ ಕೊಂಡೊಯ್ಯುದು ಮನೆಯಲ್ಲಿ ಸಂಗ್ರಹಿಸಿಡುತ್ತಾರೆ.

ಈ ನೀರನ್ನು ಕುಡಿಯುವುದರಿಂದ ವರ್ಷವಿಡೀ ದೇಹದಲ್ಲಿದ್ದ ವಿಷಕಾರಿ ಅಂಶಗಳು ಹೋಗುತ್ತದೆ. ಜೊತೆಗೆ ವಿಷಜಂತುಗಳು ಕಡಿದಂತಹ ಸಂದರ್ಭದಲ್ಲಿ ತಕ್ಷಣ ಈ ನೀರನ್ನು ಕುಡಿದು ನಂತರ ಈ ಕ್ಷೇತ್ರದಲ್ಲೇ ಸಿಗುವ ಮಣ್ಣನ್ನು ನೀರಲ್ಲಿ ಬೆರೆಸಿ ಗಾಯಕ್ಕೆ ಹಚ್ಚಿದರೆ ವಿಷ ಕಾರುತ್ತದೆ ಅನ್ನುವ ನಂಬಿಕೆ ಇಂದಿಗೂ ಉಳಿದಿದೆ.

ನಾನಾ ಊರುಗಳಿಂದ ಬರುವ ಭಕ್ತರು ಈ ಆಧುನಿಕ ಯುಗದಲ್ಲೂ ಈ ನಂಬಿಕೆಯನ್ನು ಇಟ್ಟು ನೀರು ಹಾಗೂ ಮಣ್ಣನ್ನು ಕೊಂಡೊಯ್ಯಲು ಮುಗಿ ಬೀಳುತ್ತಾರೆ. ಈ ಪವಿತ್ರ ನೀರಿಗೆ ಒಂದು ವರ್ಷಗಳ ಕಾಲ ಶಕ್ತಿ ಇರುತ್ತದೆ. ಹೀಗಾಗಿ ಪ್ರತಿ ವರ್ಷವೂ ಹೊಸ ನೀರನ್ನು ಹಾಗೂ ಮಣ್ಣನ್ನು ಕೊಂಡೊಯ್ಯಲು ಭಕ್ತರು ಜಾತ್ರಾ ಸಂದರ್ಭದಲ್ಲಿ ಇಲ್ಲಿಗೆ ಬರುತ್ತಾರೆ.

ಇಂದಿಗೂ ಹಳ್ಳಿ ಪ್ರದೇಶದ ಜನ ವಿಷ ಜಂತುಗಳ ಕಡಿತಕ್ಕೊಳಗಾದರೆ ಈ ನೀರು ಹಾಗೂ ಮಣ್ಣಿನ ಮೊರೆ ಹೋಗುತ್ತಾರೆಯೇ ಹೊರತು ಆಸ್ಪತ್ರೆಗೆ ಹೋಗೋದಿಲ್ಲ. ಒಟ್ಟಿನಲ್ಲಿ ಈಗಿನ ಕಾಲದಲ್ಲೂ ಇಂತಹ ನಂಬಿಕೆ ಉಳಿಯಬೇಕಿದ್ದರೆ ಈ ಕ್ಷೇತ್ರದಲ್ಲಿ ಹಾಗೂ ಬಾವಿಯಲ್ಲಿ ದೈವಿ ಶಕ್ತಿ ಇದೆ ಅನ್ನೋದರಲ್ಲಿ ಸಂದೇಹವಿಲ್ಲ.

ಒಟ್ಟಿನಲ್ಲಿ ಜನರು ಶ್ರದ್ಧಾ ಭಕ್ತಿಯಿಂದ ನಂಬುವ ಈ ಪವಿತ್ರ ಮಣ್ಣಿನಲ್ಲಿ ಹೇಳಿ ಮುಗಿಯದ ಕಾರ್ಣಿಕ ಇದೆ. ಈ ಬಾವಿಯ ನೀರಿಗೆ ಜನರು ಇವತ್ತಿಗೂ ಅದೆಷ್ಟೋ ವರ್ಷದಿಂದ ಗೌರವ ನೀಡಿ ಶ್ರದ್ಧೆಯಿಂದ ಕೈ ಮುಗಿಯುತ್ತಾರೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *