ಪುತ್ತೂರು : ಹಿಂದೂ ಮುಖಂಡ ಪುರುಷರಕಟ್ಟೆ ನಿವಾಸಿ ಅವಿನಾಶ್ ಗೆ ಗಡಿಪಾರು – ನಾಳೆಯೇ ವಿಚಾರಣೆಗೆ ಹಾಜರಾಗುವಂತೆ ನೋಟೀಸ್

ಪುತ್ತೂರು : ಹಿಂದೂ ಮುಖಂಡ ಪುರುಷರಕಟ್ಟೆ ನಿವಾಸಿ ಅವಿನಾಶ್ ಗೆ ಗಡಿಪಾರು – ನಾಳೆಯೇ ವಿಚಾರಣೆಗೆ ಹಾಜರಾಗುವಂತೆ ನೋಟೀಸ್

ನ್ಯೂಸ್ ಆ್ಯರೋ‌ : ಕಾನೂನು ಸುವ್ಯಸ್ಥೆ ಕಾಪಾಡುವ ನಿಟ್ಟಿನಲ್ಲಿ ನರಿಮೊಗರು ಗ್ರಾಮದ ಪುರುಷರಕಟ್ಟೆ ನಿವಾಸಿ ಹಿಂದೂ ಮುಖಂಡ ಅವಿನಾಶ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಿಂದ ಬೀದರ್ ಜಿಲ್ಲಾ ವ್ಯಾಪ್ತಿಯ ಸಾಂತಪುರ ಪೊಲೀಸ್ ಠಾಣಾ ಸರಹದ್ದಿಗೆ ಗಡಿಪಾರು ಆದೇಶ ಹೊರಡಿಸಲಾಗಿದ್ದು, ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿದೆ.

ಕರ್ನಾಟಕ ಪೊಲೀಸ್‌ ಅಧಿನಿಯಮ-1963 ರ ಕಲಂ:55 ಪ್ರಕಾರ ಗಡಿಪಾರಿಗೆ ಉಪ್ಪಿನಂಗಡಿ ಗ್ರಾಮಾಂತರ ಪೊಲೀಸ್ ಠಾಣೆಯಿಂದ ಆದೇಶ ಮಾಡುವ ಕುರಿತು ಪುತ್ತೂರು ಸಹಾಯಕ ಆಯುಕ್ತರ ಕಚೇರಿಯ ನ್ಯಾಯಾಲಯದಲ್ಲಿ ಜ.24ರಂದು ಪೂರ್ವಾಹ್ನ 11.00 ಘಂಟೆಗೆ ವಿಚಾರಣೆ ನಡೆಯಲಿದೆ.

ವಿಚಾರಣೆಗೆ ಸಂಬಂಧಪಟ್ಟಂತೆ ಅವಿನಾಶ್ ಸ್ವತಃ ಯಾ ನ್ಯಾಯವಾದಿಯವರ ಮೂಲಕ ವಿಚಾರಣೆಗೆ ಹಾಜರಾಗಿ ವಾದಿಸಬಹುದೆಂದು ಈ ಮೂಲಕ ಅವಿನಾಶ್ ಗೆ ತಿಳಿಸಲಾಗಿದೆ.

ಒಂದು ವೇಳೆ ವಿಚಾರಣೆಗೆ ಹಾಜರಾಗದೆ ತಪ್ಪಿದಲ್ಲಿ ಸದರಿ ಪ್ರಕರಣದಲ್ಲಿ ಅವರಿಗೆ ಆಸಕ್ತಿ ಇಲ್ಲವೆಂದು ಭಾವಿಸಿ, ಲಭ್ಯವಿರುವ ಮಾಹಿತಿಯ ಆಧಾರದಲ್ಲಿ ಏಕಪಕ್ಷೀಯವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ನೋಟೀಸ್ ನಲ್ಲಿ ತಿಳಿಸಲಾಗಿದ್ದು, ಮತ್ತೊಮ್ಮೆ ಹಿಂದೂ ಮುಖಂಡರ ಗಡಿಪಾರು ಆದೇಶ ಜಿಲ್ಲಾದ್ಯಂತ ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *